ಬೆಂಗಳೂರಿನಲ್ಲಿ ಆರೇ ದಿನಕ್ಕೆ 1 ಲಕ್ಷ ಗಡಿ ದಾಟಿದ ಕೊರೊನಾ ಪಾಸಿಟಿವ್ !
ಬೆಂಗಳೂರು, ಏಪ್ರಿಲ್ 26: ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಆರು ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ಗಟಿ ದಾಟಿದೆ. ಏ. 19 ರಂದು ಕೇವಲ 10 ಸಾವಿರ ಮಂದಿಗೆ ಕೊರೊನಾ ಪಾಸಿಟೀವ್ ಇತ್ತು. ಇದೀಗ ಏ. 26 ರ ವೇಳೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1.07, 021 ಕ್ಕೇರಿದೆ. ನೆರೆಯ ರಾಜ್ಯ ಇಡೀ ತಮಿಳುನಾಡಿನಲ್ಲಿರುವ ಅಷ್ಟೂ ಕೇಸುಗಳನ್ನು ಪರಿಗಣಿಸಿದರೆ ಬೆಂಗಳೂರು ಅದನ್ನು ಮೀರಿಸಿದೆ. ಇನ್ನು ಈ ಆರು ದಿನದಲ್ಲಿ ಕೊರೋನಾ ಸೋಂಕಿಗೆ ಸೂಕ್ತ ಚಿಕಿತ್ಸೆ ಇಲ್ಲದೇ 677 ಮಂದಿ ಬಲಿಯಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ ಕೈ ತಪ್ಪಿದೆ. ಗಲ್ಲಿ ಗಲ್ಲಿಯಲ್ಲೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇತ್ತ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗದೇ ಪರದಾಡುತ್ತಿದ್ದಾರೆ. ಆಮ್ಲಜನಕವಿಲ್ಲ, ಹಾಸಿಗೆಯೂ ಇಲ್ಲ, ಸಾವನ್ನಪ್ಪಿದ ರೋಗಿಗಳಿಗೆ ಸ್ಮಶಾನದಲ್ಲಿ ಜಾಗವೂ ಇಲ್ಲ ಎಂಬಂತಾಗಿದೆ ಪರಿಸ್ಥಿತಿ. ರಾಜಧಾನಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಪಡೆಯಲು ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದರೆ ಯಾವುದೂ ಫಲ ಕೊಡುತ್ತಿಲ್ಲ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.
ಏ. 24 ಹೆಚ್ಚು ಸಾವು : ಏಪ್ರಿಲ್ 24 ರಂದು 149 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೆ 20 ಸಾವಿರ ಕೊರೊನಾ ಪಾಸಿಟೀವ್ ಕೇಸ್ಗಳು ದಾಖಲಾಗುತ್ತಿವೆ. ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ಕೇವಲ 9 ಸಾವಿರ ಸೋಂಕಿತರಿದ್ದರು. ಇದೀಗ ಏಕಾಏಕಿ ಒಂದು ಲಕ್ಷಕ್ಕೆ ಏರಿಕೆಯಾಗಿದೆ. ಕೇವಲ ಆರು ದಿನದಲ್ಲಿ ಈ ಪರಿಯ ಪ್ರಕರಣಗಳು ಪತ್ತೆಯಾಗಿವೆ.

ಏಪ್ರಿಲ್ 19 - 9618 ಕೇಸ್ - 97 ಸಾವು
ಏಪ್ರಿಲ್ 20 - 13782 ಕೇಸ್ - 92 ಸಾವು
ಏಪ್ರಿಲ್ 21 - 13640 ಕೇಸ್ - 70 ಸಾವು
ಏಪ್ರಿಲ್ 22 - 15244 ಕೇಸ್ - 68 ಸಾವು
ಏಪ್ರಿಲ್ 23 - 16662 ಕೇಸ್ - 124 ಸಾವು
ಏಪ್ರಿಲ್ 24 - 17342 ಕೇಸ್ - 149 ಸಾವು
ಏಪ್ರಿಲ್ 25 - 20733 ಕೇಸ್ - 77 ಸಾವು
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications