ಚಾಲಕರಿಗೆ "5 ಸಾವಿರ ಕೊಡಿ", ಎಎಪಿ ವಿನೂತನ ಪ್ರತಿಭಟನೆ
ಬೆಂಗಳೂರು, ಆ. 19": ಬಿಜೆಪಿ ಸರ್ಕಾರದ ಸರಣಿ ಭ್ರಷ್ಟಾಚಾರದ ಮೂಲಕ ಕರ್ನಾಟಕದ ಜನರ ವಿಶ್ವಾಸವನ್ನೇ ಕಳೆದುಕೊಂಡಿದೆ. ಮೂರು ಪಕ್ಷಗಳು ಕರ್ನಾಟಕವನ್ನು ಕೊಳ್ಳೆ ಹೊಡೆದಿವೆ. ಕೊರೋನಾ ನೆಪದಲ್ಲಿ ರಾಜ್ಯ ಸರ್ಕಾರ ಲೂಟಿ ಹೊಡೆದಿದೆ, ಇದನ್ನು ಪ್ರಶ್ನಿಸಬೇಕಾಗಿದ್ದ ವಿರೋಧ ಪಕ್ಷಗಳು ಕೂಡ ಸರ್ಕಾರದ ಜತೆ ಶಾಮೀಲಾಗಿ ಒಂದೂ ಮಾತನ್ನೂ ಆಡದೆ ರಾಜ್ಯದ ಜನರ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಪ್ರಮುಖ ಮೂರು ಪಕ್ಷಗಳು ಸಹ ಅಧಿಕಾರದ ರುಚಿಯನ್ನು ಅನುಭವಿಸಿವೆ, ಇದು ಒಳ ಒಪ್ಪಂದ ಅಲ್ಲದೇ ಮತ್ತೇನು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಅವರು ಪ್ರಶ್ನಿಸಿದ್ದಾರೆ.
Recommended Video
ಕೊವಿಡ್ 19 ಲಾಕ್ಡೌನ್ ಸಂದರ್ಭದಲ್ಲಿಆಟೋರಿಕ್ಷಾ ಚಾಲಕರಿಗೆ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಇನ್ನು 15 ದಿನದ ಒಳಗೆ ಹಣವನ್ನು ಚಾಲಕರ ಖಾತೆಗೆ ಹಾಕದಿದ್ದರೆ ಪ್ರತಿ ಸಂಸದರ ಹಾಗೂ ಶಾಸಕರ, ಸಚಿವರುಗಳ ಮನೆ ಮುಂದೆ "5 ಸಾವಿರ ಕೊಡಿ" ಎನ್ನುವ ಅಭಿಯಾನ ನಡೆಸಲಾಗುವುದು ಎಂದು ಪೃಥ್ವಿ ರೆಡ್ಡಿ ಎಚ್ಚರಿಕೆ ನೀಡಿದರು.

ಆಟೋ ಸಂಘಟನೆಗಳು ಇಂದು ಒಂದೇ ವೇದಿಕೆಯಲ್ಲಿ
ರಾಜ್ಯದ ಎಲ್ಲಾ ಆಟೋ ಸಂಘಟನೆಗಳು ಇಂದು ಒಂದೇ ವೇದಿಕೆಯಲ್ಲಿ ಬಂದಿವೆ ಇದು ರಾಜ್ಯ ಇತಿಹಾಸದಲ್ಲಿ ಮೊದಲು. ಇಲ್ಲಿ ಯಾವುದೇ ರಾಜಕೀಯವಿಲ್ಲ ನಮಗೆಲ್ಲರಿಗೂ ಇರುವುದು ಒಂದೇ ಉದ್ದೇಶ "ಚಾಲಕರ ಜೀವನ ಮಟ್ಟ ಸುಧಾರಿಸಬೇಕು" ಎನ್ನುವುದು ನಮ್ಮ ಉದ್ದೇಶವಾಗಿರುವುದರಿಂದ ಇಂದು ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದಾಗಿದ್ದೇವೆ, ಮುಂದೆ ಒಂದಾಗಿಯೇ ಇರುತ್ತೇವೆ ಎಂದು ಹೇಳಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎನ್ನುವ ನೆಪ
ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎನ್ನುವ ಕುಂಟು ನೆಪ ಮಾಡಿಕೊಂಡು ಚಾಲಕರ ಹೊಟ್ಟೆ ಮೇಲೆ ಸರ್ಕಾರ ಹೊಡೆಯುತ್ತಿದೆ. ಆದರೆ ಪ್ರಭಾವಿ ಶಾಸಕರ ಕ್ಷೇತ್ರಗಳಿಗೆ ಸಾವಿರಾರು ಕೋಟಿ ಕೊಡುಗೆ ನೀಡುತ್ತಿದ್ದಾರೆ. ಇದಕ್ಕೆ ಎಲ್ಲಿಂದ ದುಡ್ಡು ಬರುತ್ತಿದೆ ಈ ಪ್ರಶ್ನೆಗೆ ಉತ್ತರಿಸುವಿರಾ ಯಡಿಯೂರಪ್ಪ ಅವರೇ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ವ್ಯಂಗ್ಯವಾಡಿದರು.

413 ಆಟೋಗಳನ್ನು ಸ್ಯಾನಿಟೈಜ್ ಮಾಡಲಾಯಿತು
ಪ್ರತಿಭಟನೆಯ ನಂತರ ಸುಮಾರು 413 ಆಟೋಗಳನ್ನು ಸ್ಯಾನಿಟೈಜ್ ಮಾಡಲಾಯಿತು. ಪ್ರತಿಭಟನೆಗೆ ಬಂದಿದ್ದ ಆಟೋ ಚಾಲಕರ ದೇಹದ ಉಷ್ಣತೆ, ಪಲ್ಸ್ ಆಕ್ಸಿ ಮೀಟರ್ ಮೂಲಕ ಆಮ್ಲಜನಕ ಮಟ್ಟ ಪರೀಕ್ಷಿಸಲಾಯಿತು ಎಂದು ಆಮ್ ಆದ್ಮಿ ಪಕ್ಷ, ಕರ್ನಾಟಕದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ ತಿಳಿಸಿದರು

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು
ಪ್ರತಿಭಟನೆಯಲ್ಲಿ ಆಟೋ ಘಟಕದ ಅಧ್ಯಕ್ಷರಾದ ಅಯೂಬ್ ಖಾನ್, ಉಪಾಧ್ಯಕ್ಷರಾದ ವೆಂಕಟೇಗೌಡ, ಪೀಸ್ ಆಟೋ ಡ್ರೈವರ್ ಸಂಘಟನೆಯ ರಘು ನಾರಾಯಣ ಗೌಡ, ಆದರ್ಶ ಆಟೋ ಸಂಘಟನೆಯ ಡಾ.ಸಂಪತ್, ಆಟೋ ಮಿತ್ರ ಪತ್ರಿಕೆಯ ಜಯರಾಂ, ರಾಜೀವ್ ಗಾಂಧಿ ಆಟೋ ಸಂಘಟನೆಯ ಬಿ.ಚಂದ್ರಶೇಖರ್, ಜಯಕರ್ನಾಟಕ ಸಂಘಟನೆಯ ಆನಂದ್.ಎಚ್, ಕರವೇ ಆಟೋ ಚಾಲಕರ ಸಂಘದ ಗಂಧರ್ವ ರಮೇಶ್, ವಿವಿಧ ಆಟೋ ಚಾಲಕರ ಸಂಘಗಳ ಮುಖಂಡರಾದ ರಾಮಕೃಷ್ಣ, ಸಿ.ಟಿ.ಲೋಕೇಶ್, ನವೀದ್, ಕೆ.ಕೆ.ಚಿಕ್ಕೇಗೌಡ, ಎಜೆ.ಖಾನ್, ಫೈರೋಜ್ ಇದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications