ಅಂಗಡಿ, ಮಾಲ್, ಬ್ಯಾಂಕ್, ಹೋಟೆಲ್ಗಳಿಗೆ ಭಾಸ್ಕರ್ ರಾವ್ ಎಚ್ಚರಿಕೆ
ಬೆಂಗಳೂರು, ಜೂನ್ 27: ಕೊರೊನಾ ವೈರಸ್ ಹರಡುವಿಕೆಯ ಭೀತಿಯ ನಡುವೆಯೂ ರಾಜ್ಯದಲ್ಲಿ ಅಂಗಡಿ, ಮಾಲ್, ಹೋಟೆಲ್, ಬ್ಯಾಂಕ್, ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
Recommended Video
ಆದರೆ, ಕೊರೊನಾ ವಿರುದ್ಧ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಭಾಸ್ಕರ್ ರಾವ್ '' ಅಂಗಡಿಗಳು, ಹೋಟೆಲ್, ಮಾಲ್, ಕಚೇರಿ, ಬ್ಯಾಂಕ್ ಹಾಗೂ ಸಂಸ್ಥೆಗಳು ಕೊರೊನಾ ವಿರುದ್ಧ ತೆಗೆದುಕೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿಮಗೆ ತಿಳಿದಿದೆ. ಒಂದು ವೇಳೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸರಿಯಾಗಿ ಪಾಲಿಸಿಲ್ಲ ಅಂದ್ರೆ ನಗರ ಪೊಲೀಸರು ದಾಳಿ ನಡೆಸಿ ಕಾನೂನು ಕ್ರಮ ಜರುಗಿಸುತ್ತಾರೆ. ಈಗಾಗಲೇ ಹಲವು ಕಡೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ'' ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
Shops,Malls,Banks,Hotels,Offices,and Establishments.All of you are already aware of precautions to be taken.If you do not implement mask wearing and ensure safe distance,CityPolice will raid and initiate legal action, this has already started,it’s is in Public Interest.
— Bhaskar Rao IPS (@deepolice12) June 27, 2020
ನಗರದ ಹಲವು ಕಡೆ ಈಗಾಗಲೇ ದಾಳಿ ಮಾಡಿರುವ ಪೊಲೀಸರು, ಅಂಗಡಿ ಅಥವಾ ಇನ್ನಿತರ ಸ್ಥಳಗಳಲ್ಲಿ ಮಾಲೀಕರು, ನಿರ್ವಹಕರು ಮಾಸ್ಕ್ ಧರಿಸಿಲ್ಲ ಅಂದ್ರೂ ದಂಡ ವಿಧಿಸಿ ಅಂಗಡಿ ಮುಂಗಟ್ಟು ಮುಚ್ಚಲಾಗುತ್ತಿದೆ.

ಗ್ರಾಹಕರು ಸಹ ಮಾಸ್ಕ್ ಧರಿಸುವುದು ಕಡ್ಡಾಯ. ಸಾಮಾಜಿಕ ಅಂತರ ಕಾಪಾಡುವಂತೆ ಅಂಗಡಿ ಅಥವಾ ಕಚೇರಿ, ಬ್ಯಾಂಕ್ ಸಿಬ್ಬಂದಿ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾವುದು.
-
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications