ಕೋವಿಡ್; ಚಿಂತಾಜನಕ ಸ್ಥಿತಿಯಲ್ಲಿ ನೆಲಮಂಗಲ
ಬೆಂಗಳೂರು, ಮೇ 04; ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ ಒಂದಿಲ್ಲೊಂದು ಜಿಲ್ಲೆಯಲ್ಲಿ ಅವಾಂತರಗಳು ನಡೆದು ಸಾವು-ನೋವಿನ ಸಂಖ್ಯೆ ಏರುತ್ತಲೇ ಇದೆ. ಕೆಲವೇ ಕೆಲವು ಜನ ಪ್ರತಿನಿಧಿಗಳು, ಮಂತ್ರಿಗಳು ಕೋವಿಡ್ ವಿರುದ್ಧ ಶಕ್ತಿಮೀರಿ ಶ್ರಮಿಸುತ್ತಿದ್ದಾರೆ, ಹಲವರು ನಾಪತ್ತೆಯಾಗಿದ್ದಾರೆ.
ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಹತ್ತಿರವಿರುವ ನೆಲಮಂಗಲದ ಪರಿಸ್ಥಿತಿ ದಿನೇದಿನೇ ಬಿಗಡಾಯಿಸುತ್ತಿದೆ. ಸೀಮಿತ ವೈದ್ಯಕೀಯ ವ್ಯವಸ್ಥೆಯಿಂದ, ಸಿಬ್ಬಂದಿಗಳ ಕೊರತೆಯಿಂದ, ಸಕಾಲಕ್ಕೆ ಬೆಡ್, ಆಕ್ಸಿಜನ್, ಚಿಕಿತ್ಸೆ ಸಿಗದೇ ಜನರು ಪರದಾಡುತ್ತಿದ್ದಾರೆ.
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ 27 ಬೆಡ್ಗಳು ಮತ್ತು 3 ಐಸಿಯು ಬೆಡ್ಗಳಿವೆ. ಇನ್ನು ಖಾಸಗಿ ಆಸ್ಪತ್ರೆಗಳ ಕಡೆ ಬಡವರಂತೂ ಕಾಲಿಡಲು ಸಾಧ್ಯವಿಲ್ಲ. ಉಳ್ಳವರು ತಮ್ಮ ಪ್ರಭಾವ ಬಳಸಿ ಖಾಸಗಿ ಆಸ್ಪತ್ರೆಯಲ್ಲಿರುವ ಬೆಡ್ಗಳನ್ನು ಬುಕ್ ಮಾಡಿಕೊಂಡು ಸುರಕ್ಷಿತವಾಗುತ್ತಿದ್ದಾರೆ. ಆದರೆ ಬಡವರು ಪರದಾಡುತ್ತಿದ್ದಾರೆ.

ನೆಲಮಂಗಲ ತಾಲ್ಲೂಕಿನಲ್ಲಿ ತಾಲೂಕು ಆರೋಗ್ಯ ಕೇಂದ್ರ ನಗರದಲ್ಲಿದ್ದು, ಉಳಿದಂತೆ ಹೋಬಳಿ ಮಟ್ಟದಲ್ಲಿ 4 ಆರೋಗ್ಯ ಕೇಂದ್ರಗಳಿವೆ. ಇದೇ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ರೋಗಿಗಳಿಗೆ ರಾಪಿಡ್ ಪರೀಕ್ಷೆ, ಆರ್ಟಿಪಿಸಿಆರ್ ಪರೀಕ್ಷೆ ನಡೆಸಿ, ಐಸೋಲೇಶನ್ಗೆ ಚಿಕಿತ್ಸೆ ಮಾತ್ರ ನೀಡುತ್ತಾರೆ. ಅಲ್ಲಿ ಕೋವಿಡ್ ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಯಾವ ಸೌಲಭ್ಯವೂ ಇಲ್ಲ.
ಡಾಬಸ್ ಪೇಟೆ ಕೈಗಾರಿಕಾ ಪ್ರದೇಶವಾಗಿ ಗುರುತಿಸಿಕೊಂಡಿದ್ದರೂ ಸಹ ಇಲ್ಲಿನ ಆರೋಗ್ಯ ಕೇಂದ್ರದಲ್ಲಿ ನುರಿತ ವೈದ್ಯರಿಲ್ಲದೆ ಸಂಜೆ 5ಗಂಟೆಗೆ ಆಸ್ಪತ್ರೆ ಬಾಗಿಲು ಮುಚ್ಚಿದರೆ, ಮರುದಿನ ಬೆಳಗಿನ 10ಕ್ಕೆ ತೆಗೆಯುತ್ತಾರೆ. ಇಂತಹ ಪರಿಸ್ಥಿತಿ ಇರುವಾಗ ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಸಬಾ ಹೋಬಳಿ, ಸೋಲೂರು ಹೋಬಳಿಗಳಲ್ಲಿ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.

ಮೇ 2ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊಸಕೋಟೆ 20, ದೇವನಹಳ್ಳಿ 76, ದೊಡ್ಡಬಳ್ಳಾಪುರ 76 ನೆಲಮಂಗಲ 113 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನೆಲಮಂಗಲ ಪರಿಸ್ಥಿತಿ ಇಷ್ಟೆಲ್ಲಾ ಚಿಂತಾಜನಕವಾಗಿದ್ದರೂ ಜನಪ್ರತಿನಿಧಿಗಳ ಸುಳಿವೇ ಇಲ್ಲವಾಗಿದೆ. ಸ್ಥಳೀಯ ವಿಧಾನಸಭಾ ಕ್ಷೇತ್ರ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರವನ್ನು ಪ್ರತಿನಿಧಿಸುವ ಬಚ್ಚೇಗೌಡರು ಚುನಾವಣೆಯಲ್ಲಿ ಗೆದ್ದು ಹೋದನಂತರ ಇಲ್ಲಿಯವರೆಗೂ ಇತ್ತ ತಲೆ ಹಾಕಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್ .ಅಶೋಕ ಇಲ್ಲಿಯವರೆಗೂ ನೆಲಮಂಗಲಕ್ಕೆ ಸೌಜನ್ಯದ ಭೇಟಿಯನ್ನೂ ನೀಡಿಲ್ಲ. ದೇವನಹಳ್ಳಿಗೆ ಅನೇಕ ಬಾರಿ ಭೇಟಿ ಕೊಟ್ಟಿದ್ದಾರೆ, ಪತ್ರಿಕೆಗಳಲ್ಲಿ ಸುದ್ದಿಯಾದ ನಂತರ 2 ದಿನಗಳ ಹಿಂದೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ್ದಾರೆ. ಆದರೆ ಕೋವಿಡ್ ಕೇಸ್ ಹೆಚ್ಚಿರುವ ನೆಲಮಂಗಲಕ್ಕೆ ಇಲ್ಲಿಯವರೆಗೂ ಭೇಟಿಯನ್ನು ಕೊಟ್ಟಿಲ್ಲ.
ಸ್ಥಳೀಯ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿಯ ಮಾಜಿ ಶಾಸಕರಾದ ಎಂ.ವಿ. ನಾಗರಾಜು ತಮ್ಮ ಸರ್ಕಾರವಿದ್ದರೂ ಆಸ್ಪತ್ರೆಗಳಿಗೆ ಅಗತ್ಯವಾದ ಸೌಲಭ್ಯ ದೊರಕಿಸಿಕೊಟ್ಟಿಲ್ಲ. ಕ್ಷೇತ್ರದಲ್ಲಿ ಕೊರೊನಾ ರೋಗ ಕಾಣಿಸಿಕೊಂಡ ನಂತರ ಇಲ್ಲಿನ ಜನತೆಯ ಜೊತೆ ಬೆರೆತಿಲ್ಲ.
ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಹಾಗೂ ಸಚಿವರಾದ ಅಂಜನಮೂರ್ತಿಯವರ ಸುಳಿವೇ ಇಲ್ಲದಾಗಿದೆ. ವಿರೋಧ ಪಕ್ಷವಾಗಿರುವುದರಿಂದ ತಮ್ಮ ನಾಯಕರನ್ನು ಹಿಡಿದು ಸರ್ಕಾರದ ಮೇಲೆ ಒತ್ತಡ ಹೇರಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವ ಗೊಡವೆಗೆ ಹೋಗಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.
ನಿತ್ಯ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಸಕಾಲಕ್ಕೆ ಸೂಕ್ತ ಚಿಕಿತ್ಸೆ, ಬೆಡ್, ಆಕ್ಸಿಜನ್ ವ್ಯವಸ್ಥೆ ಸಿಗದೆ ಹಲವರು ಅಲೆದು ಅಲೆದು ಸಾಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಿ. ಆ ಆಕ್ರೋಶ ಜ್ವಾಲಾಮುಖಿಯಾಗಿ ಹೊರಹೊಮ್ಮುವ ಮುನ್ನ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡರೆ ಒಳಿತು. ಅದರಲ್ಲೂ ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಈ ಕೂಡಲೇ ಇಲ್ಲಿಗೆ ಭೇಟಿಕೊಟ್ಟು ವ್ಯವಸ್ಥೆ ಸರಿಪಡಿಸಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Odisha Hospital Fire Accident: ಒಡಿಶಾ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಹತ್ತು ರೋಗಿಗಳು ಸಾವು -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications