ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಹೆಚ್ಚಳ: 5 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಸಭೆ

|
Google Oneindia Kannada News

ಬೆಂಗಳೂರು, ಮೇ 29: ರಾಜ್ಯದಲ್ಲಿ ಕಳೆದ 20 ದಿನಗಳಿಂದ ಲಾಕ್‌ಡೌನ್ ಜಾರಿಗೊಳಿಸಿದ್ದರೂ ಕೊರೊನಾ ಸೊಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಪ್ರತಿದಿನ 20 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.

ಹೀಗಾಗಿ, ಹೆಚ್ಚು ಸೋಂಕು ವರದಿಯಾಗುತ್ತಿರುವ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಸಭೆಯಲ್ಲಿ ಮೈಸೂರು, ಹಾಸನ, ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲಾಧಿಕಾರಿಗಳು ಹಾಜರಾಗಲಿದ್ದು, ಶನಿವಾರ ಬೆಳಗ್ಗೆ 10.30ಕ್ಕೆ ಸಿಎಂ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಲಿದೆ. ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ ಕೂಡ ಭಾಗಿಯಾಗಲಿದ್ದಾರೆ.

Covid-19 Cases Rise: CM Yediyurappa to Hold Covid-19 Review Meeting with 5 Districts DCs

Recommended Video

China ಆರ್ಥಿಕತೆಯಲ್ಲಿ ಮೊದಲನೇ ಸ್ಥಾನ!! | Oneindia Kannada

ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರತಿ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

English summary
CM Yediyurappa to hold video conference meeting on Saturday with 5 district DCs where the highest number of Covid-19 infections are reported.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X