ರೋಗಿಗಳ ಸಹಾಯಕ್ಕೆ ಎಚ್ಎಎಲ್ ನಿಂದ 2 ಆಂಬ್ಯುಲೆನ್ಸ್
ಬೆಂಗಳೂರು, ಆಗಸ್ಟ್ 6: ಕೋವಿಡ್ ರೋಗಿಗಳಿಗೆ ನೆರವಾಗಲು ಎಚ್ ಎಎಲ್ ಸಂಸ್ಥೆಯು ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಆಂಬ್ಯುಲೆನ್ಸ್ ಗಳನ್ನು ಹಸ್ತಾಂತರಿಸಿಕೊಂಡರು.
Recommended Video
ಓಲ್ಡ್ ಏರ್ ಪೋರ್ಟ್ ರಸ್ತೆಯ ಎಚ್ಎಎಲ್ ನ ಕೋವಿಡ್ ಆರೈಕೆ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಚ್ ಎಎಲ್ ಸಂಸ್ಥೆಯಿಂದ 2 ಆಂಬ್ಯುಲೆನ್ಸ್ ಗಳನ್ನು ನೀಡಲಾಯಿತು. ಎಚ್ ಎಎಲ್ ಮುಖ್ಯಸ್ಥ ಆರ್.ಮಾಧವನ್, ಹಿರಿಯ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಎಂಸಿಆರ್ ಐ ನಿರ್ದೇಶಕ ಡಾ.ಮನೋಜ್ ಕುಮಾರ್ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್
ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "200 ಹಾಸಿಗೆ ಇರುವ ಎಚ್ ಎಎಲ್ ನ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಅಚ್ಚುಕಟ್ಟಾಗಿ ನಡೆಯುತ್ತಿದೆ. ಈಗ ಈ ಪ್ರತಿಷ್ಠಿತ ಎಚ್ ಎಎಲ್ ಸಂಸ್ಥೆಯು ಸಿಎಸ್ ಆರ್ ಯೋಜನೆಯಡಿ ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಉಚಿತವಾಗಿ ನೀಡಿದೆ. ಈ ಮೂಲಕ ಎಚ್ ಎಎಲ್ ಮತ್ತಷ್ಟು ಜವಾಬ್ದಾರಿಯನ್ನು ತೆಗೆದುಕೊಂಡಿದೆ. ಈ ಸಂಸ್ಥೆಗೆ ಸರ್ಕಾರದ ಪರವಾಗಿ ಕೃತಜ್ಞತೆ ಅರ್ಪಿಸುತ್ತೇನೆ,'' ಎಂದರು.

4,276 ಹಾಸಿಗೆಗಳಿವೆ ಶೇ.27 ರಷ್ಟು ಖಾಲಿ
"ಬೆಂಗಳೂರಿನಲ್ಲಿ 11 ಸುಸಜ್ಜಿತ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ 4,276 ಹಾಸಿಗೆಗಳಿವೆ. ಈ ಪೈಕಿ 936 ಹಾಸಿಗೆಗಳು ಖಾಲಿ ಇವೆ. ಅಂದರೆ ಶೇ.27.79 ರಷ್ಟು ಹಾಸಿಗೆಗಳು ಖಾಲಿ ಇವೆ. ಈ ಕೇಂದ್ರಗಳಲ್ಲಿರುವ 3,346 ರೋಗಿಗಳ ಪೈಕಿ 306 ಮಂದಿಯನ್ನು ಗುರುವಾರ (ಆ.6) ಬಿಡುಗಡೆ ಮಾಡುವುದಾಗಿ ಹೇಳಲಾಗಿದೆ,'' ಎಂದು ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಮಳೆ ಹಾನಿ ನಿರ್ವಹಣೆ
ಮಳೆ ಹಾನಿ ಕುರಿತು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "ಇಂದು ರಾಜ್ಯದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ. ಕೋವಿಡ್ ಜೊತೆಗೆ ಮಳೆಹಾನಿಯ ಸ್ಥಿತಿಯನ್ನೂ ಸರ್ಕಾರ ನಿಭಾಯಿಸುತ್ತಿದೆ. ಈ ಎಲ್ಲ ಹೊಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಸ್ಯೆ ಬಗೆಹರಿಸಲು ಸಭೆಗಳನ್ನು ನಡೆಸಿದ್ದಾರೆ. ಕೊಡಗು, ಬೆಳಗಾವಿ ಸೇರಿದಂತೆ ಹೆಚ್ಚು ಮಳೆಯಾದ ಆರೇಳು ಜಿಲ್ಲೆಗಳಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಸೂಕ್ತ ವ್ಯವಸ್ಥೆ ಮಾಡಲಾಗಿದೆ,'' ಎಂದು ತಿಳಿಸಿದರು.

ಸಾವಿನ ಪ್ರಮಾಣವೂ ಕಡಿಮೆಯಾಗಿದೆ
"ಕೊರೊನಾ ವೈರಸ್ ಒಂದೊಂದು ದೇಶದಲ್ಲಿ ಒಂದೊಂದು ರೀತಿ ವರ್ತಿಸುತ್ತದೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳಾಗಬೇಕಿದೆ. ಸರ್ಕಾರ ಪರೀಕ್ಷೆ ಮಾಡುವುದು, ಚಿಕಿತ್ಸೆ ನೀಡುವುದು ಮೊದಲಾದ ಕ್ರಮಗಳನ್ನು ಕೈಗೊಂಡಿದೆ. ಕೆಲ ದಿನಗಳಿಂದ ರಾಜ್ಯದಲ್ಲಿ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದೆ. ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ವಿರೋಧ ಮಾಡುವವರು ಈ ಅಂಕಿ ಅಂಶಗಳನ್ನು ನೋಡಬೇಕು,'' ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications