ಕೋವಿಡ್ ನಮಗೆ ಅತ್ಯುತ್ತಮ ಪಾಠ ಕಲಿಸಿದೆ: ಕಂದಾಯ ಸಚಿವ ಆರ್. ಅಶೋಕ್
ಬೆಂಗಳೂರು, ಸೆ. 02: ಕೊರೊನಾ ವೈರಸ್ ಸೋಂಕು ಇಡೀ ಜಗತ್ತಿಗೆ ಹೊಸ ಸವಾಲು ಹಾಕಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ವೈರಸ್ ಜನರಿಗೆ ಕೊಡುತ್ತಿರುವ ತೊಂದರೆ ಒಂದೆರಡಲ್ಲ. ಆರ್ಥಿಕ, ಮಾನಸಿಕ, ದೈಹಿಕ, ಸಾಮಾಜಿಕ ಈ ಎಲ್ಲ ರೀತಿಯಿಂದಲೂ ಜನರನ್ನು ಸಂಕಷ್ಟಕ್ಕೆ ದೂಡಿದೆ.
ಇದೇ ಸಂದರ್ಭದಲ್ಲಿ ಕೊರೊನಾ ವೈರಸ್ ತಂದಿಟ್ಟಿರುವ ಸಂಕಷ್ಟಗಳ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ನೂರಕ್ಕೂ ಹೆಚ್ಚು ವೈದ್ಯರನ್ನು ಸನ್ಮಾನಿಸಿ ಅಶೋಕ್ ಅವರು ಮಾತ ನಾಡಿದ್ದಾರೆ. "ನಾವು ಈ ರೀತಿಯ ಸಂಕಷ್ಟವೊಂದನ್ನು ಎದುರಿಸಬೇಕಾದಂತಹ ಸಂದರ್ಭ ಬರುತ್ತದೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಕೋವಿಡ್ ಎಲ್ಲವನ್ನು ಬದಲಿಸಿ ಹಾಕಿದೆ. ಕೋವಿಡ್ ಸೋಂಕಿನ ಘೋರತೆ ನೆನೆಸಿಕೊಂಡರೆ ಆಂಬ್ಯೂಲೆನ್ಸ್ ಸೈರನ್ ಸದ್ದು ಮತ್ತು ಶವಗಳನ್ನ ಸುಡುವ ಚಿತ್ರಗಳೇ ಕಣ್ಣಿನ ಮುಂದೆ ಸುಳಿಯುತ್ತವೆ. ಕೊರೊನಾವೈರಸ್ನಿಂದಾಗಿ ಬದುಕು ಅಂತಂತ್ರವಾಗಿದೆ ಎಂದೆನಿಸಬಹುದು. ಆದರೆ ಕೆಲ ಪಾಠಗಳನ್ನು ಕೂಡಾ ಅದು ಕಲಿಸಿದೆ" ಎಂದು ಜನರಿಗೆ ತಿಳಿಸಿದ್ದಾರೆ.

"ಉದ್ದನೆಯ ಸಾಲಿನಲ್ಲಿ ನಿಲ್ಲುವುದು ಮತ್ತು ಜೀವನದ ಬಗ್ಗೆ ಶಿಸ್ತು ಬೆಳೆಸಿಕೊಳ್ಳುವುದನ್ನು ಕೊರೊನಾ ನಮಗೆ ಹೇಳಿಕೊಟ್ಟಿದೆ. ಆತಂಕದ ಸ್ಥಿತಿಯಲ್ಲಿ ಜನರು ತಮ್ಮ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದ ಸಂದರ್ಭಗಳಲ್ಲಿ, ವೈದ್ಯರು ರೋಗಿಗಳ ಚಿಕಿತ್ಸೆಗೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದರು. ಅಂದು, ಇಂದು ನಮಗಿರುವ ಏಕೈಕ ಭರವಸೆಯೆಂದರೆ ಅದು ವೈದ್ಯರು ಮಾತ್ರ. ಹೀಗಾಗಿ ನಾನು ಅವರಿಗೆ ತುಂಬು ಹೃದಯದಿಂದ ಧನ್ಯವಾದಗಳನ್ನು ಎಲ್ಲರೂ ಹೇಳಲೇಬೇಕು. ಹಾಗೆಯೇ ಪೌರಕಾರ್ಮಿಕರಿಗೂ ಧನ್ಯವಾದಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ. ಕಾರಣ ಅವರು ನಗರದ ಸ್ವಚ್ಛತೆಗೆ ಎರಡು ಅಲೆಯ ವೇಳೆಯಲ್ಲಿಯೂ ಕಟಿಬದ್ಧರಾಗಿ ನಿಂತರು" ಎಂದು ಸಚಿವ ಅಶೋಕ್ ಅವರು ಕೊಂಡಾಡಿದರು.

Recommended Video
ಈ ವೇಳೆ ಸಚಿವ ಅಶೋಕ್ ಸಾಮಾಜಿಕ ಕಾರ್ಯಗಳನ್ನು ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಳ್ಳಲು ಇಚ್ಛಿಸುವ ವೈದ್ಯರೂ ಸೇರಿದಂತೆ ಹಲವು ವಲಯಗಳ ವ್ಯಕ್ತಿಗಳಿಗೆ ತಮ್ಮ ಜೊತೆ ಕೈ ಜೋಡಿಸುವಂತೆ ಮನವಿ ಮಾಡಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications