ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಭಯ; ಐಐಎಸ್ಸಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಆಗಸ್ಟ್ 19 : ಕೋವಿಡ್-19 ಸೋಂಕಿನ ಭೀತಿಯ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಐಐಎಸ್ಸಿಯಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recommended Video

ISIS ಉಗ್ರರಿಗೆ ಸಹಾಯ ಮಾಡುತ್ತಿದ್ದ ಬೆಂಗಳೂರು ಮೂಲದ Abdur Rahman ಭಂದನ | Oneindia Kannada

ಮೃತಪಟ್ಟ ವಿದ್ಯಾರ್ಥಿಯನ್ನು ಸಂದೀಪ್ ಕುಮಾರ್ (24) ಎಂದು ಗುರುತಿಸಲಾಗಿದೆ. ಛತ್ತೀಸ್‌ಗಢ್ ಮೂಲದ ಸಂದೀಪ್ ಕುಮಾರ್ ಮಂಗಳವಾರ ಹಾಸ್ಟೆಲ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ: ತುಂಗಾನದಿಗೆ ಹಾರಿ ಯುವ ಪ್ರೇಮಿಗಳ ಆತ್ಮಹತ್ಯೆ ಯತ್ನಶಿವಮೊಗ್ಗ: ತುಂಗಾನದಿಗೆ ಹಾರಿ ಯುವ ಪ್ರೇಮಿಗಳ ಆತ್ಮಹತ್ಯೆ ಯತ್ನ

ಸಂದೀಪ್ ಕುಮಾರ್ ಸ್ನೇಹಿತರೊಬ್ಬರಿಗೆ ಇ-ಮೇಲ್ ಕಳಿಸಿದ್ದಾರೆ. 'ನನಗೆ ಕೊರೊನಾ ಪಾಸಿಟಿವ್ ಇರುವಂತೆ ಕಾಣುತ್ತಿದೆ. ಜೊತೆಗೆ ಭಯವಾಗುತ್ತಿದೆ' ಎಂದು ಬರೆದಿದ್ದಾರೆ. ಪೊಲೀಸರು ಸ್ನೇಹಿತ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ.

ವಿಶ್ವದ ಟಾಪ್ 10 ವಿವಿಯಲ್ಲಿ ನಮ್ಮ ಐಐಎಸ್ ಸಿವಿಶ್ವದ ಟಾಪ್ 10 ವಿವಿಯಲ್ಲಿ ನಮ್ಮ ಐಐಎಸ್ ಸಿ

COVID 19 Symptoms IISC Bengaluru Student Ends Life

ಘಟನಾ ಸ್ಥಳಕ್ಕೆ ಆಗಮಿಸಿದ ಸದಾಶಿವನಗರ ಠಾಣೆ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ವಿದ್ಯಾರ್ಥಿಯ ಕುಟುಂಬ ಸದಸ್ಯರಿಗೆ ಮಾಹಿತಿಯನ್ನು ನೀಡಿದ್ದಾರೆ.

ಪಿಟಿಐ ಬ್ಯೂರೋ ಮುಖ್ಯಸ್ಥ ಖಿನ್ನತೆಗೊಳಗಾಗಿ ಆತ್ಮಹತ್ಯೆ ಪಿಟಿಐ ಬ್ಯೂರೋ ಮುಖ್ಯಸ್ಥ ಖಿನ್ನತೆಗೊಳಗಾಗಿ ಆತ್ಮಹತ್ಯೆ

ಐಐಎಸ್ಸಿ ಪ್ರಕಟಣೆ : ವಿದ್ಯಾರ್ಥಿ ಆತ್ಮಹತ್ಯೆ ಬಗ್ಗೆ ಐಐಎಸ್ಸಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಇದೊಂದು ದುಃಖದ ಸಂಗತಿ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಮಾನಸಿಕವಾಗಿ ಸದೃಡವಾಗಿರಬೇಕು. ಇದಕ್ಕಾಗಿ ಅಗತ್ಯ ವೈದ್ಯಕೀಯ ಸಲಹೆ ವ್ಯವಸ್ಥೆ ಸಹ ಮಾಡಲಾಗಿದೆ ಎಂದು ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮಂಗಳವಾರ 2,242 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,106ಕ್ಕೆ ಏರಿಕೆಯಾಗಿದೆ.

English summary
24 year old student at IISC Bengaluru committed suicide over allegedly having COVID 19 symptoms. Student Sandeep Kumar from Chhttisgarh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X