ಕೊರೊನಾ ಬೆಡ್ ಬ್ಲಾಕಿಂಗ್ ದಂಧೆ: ಬೆಡ್ ಬ್ಲಾಕಿಂಗ್ ಮಾಡ್ತಿದ್ದ ಇಬ್ಬರು ಬಂಧನ
ಬೆಂಗಳೂರು, ಮೇ. 05: ಕೋವಿಡ್ ರೋಗಿಗಳು ಬೆಡ್ ಸಿಗದೆ ಬೀದಿಯಲ್ಲಿ ಜೀವ ಬಿಡುತ್ತಿದ್ದಾರೆ. ಸರ್ಕಾರದ ಕೋಟಾದಡಿ ಮೀಸಲಿಟ್ಟಿರುವ ಬೆಡ್ಗಳನ್ನು ಬ್ಲಾಕಿಂಗ್ ಮಾಡುವ ಮೂಲಕ ದಂಧೆ ಇದೀಗ ಬೆಂಗಳೂರಿನಲ್ಲಿ ಬಯಲಾಗಿದೆ. ಬೆಡ್ ಬ್ಲಾಕಿಂಗ್ ಮಾಡುವ ದಂಧೆ ಸಂಬಂಧ ಜಯನಗರ ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.
Recommended Video
ವಿವಿಧ ರಾಜಕೀಯ ನಾಯಕರೊಂದಿಗೆ ಗುರುತಿಸಿಕೊಂಡಿರುವ ನೇತ್ರಾವತಿ ಮತ್ತು ರೋಹಿತ್ ಬಂಧಿತ ಆರೋಪಿಗಳು. ಎರಡು ಬೆಡ್ಗೆ ತಲಾ 40 ಸಾವಿರ ರೂ ನಂತೆ ಪಡೆದಿದ್ದರು. ಮತ್ತೊಬ್ಬ ರೋಗಿಯಿಂದ 67 ಸಾವಿರ ರೂ. ವಸೂಲಿ ಮಾಡಿದ್ದರು. ಮೂವರಿಗೆ ಬೆಡ್ ಕೊಡಿಸಿದ್ದು, ಒಟ್ಟು ಐದು ಬೆಡ್ ಡೀಲ್ ಮಾಡಿದ್ದರು ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸದ ತೇಜಸ್ವಿ ಸೂರ್ಯ ನೀಡಿರುವ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವಾಟ್ಸಪ್ ಗ್ರೂಪ್ಗಳ ಮೂಲಕ ಡೀಲ್ : ಇನ್ನು ಕೋವಿಡ್ ರೋಗಿಗಳನ್ನು ಟಾರ್ಗೆಟ್ ಮಾಡಿ ವಾಟ್ಸಪ್ನಲ್ಲಿ ನಂಬರ್ ಕೊಡುತ್ತಿದ್ದರು. ಇವರನ್ನು ಸಂಪರ್ಕಿಸಿದವರಿಗೆ ಮುಂಗಡವಾಗಿ ಸಾವಿರಾರು ರೂಪಾಯಿ ಪಡೆದು ಸೀಟು ಕೊಡುತ್ತಿದ್ದ ಅಂಶ ಬೆಳಕಿಗೆ ಬಂದಿದೆ. ಇನ್ನು ಇವರೊಂದಿಗೆ ಸಂಪರ್ಕ ಇರುವ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಕೋವಿಡ್ ವಾರ್ ರೂಮ್ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ.

ತೇಜಸ್ವಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ದಾಖಲಿಸಿರುವ ಪ್ರಕರಣದಲ್ಲಿ ಬಿಬಿಎಂಪಿ ಕೋವಿಡ್ ವಾರ್ ರೂಮ್ನಲ್ಲಿ ಕೆಲಸ ಮಾಡುತ್ತಿದ್ದ ರೆಹಾನ್ ಶಾಹೆದ್ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ರಾಜಕಾರಣಿಗಳ ಪರಿಚಯ: ಬಂಧಿತ ನೇತ್ರಾವತಿ ಹಲವು ರಾಜಕಾರಣಿಗಳ ಜತೆ ಗುರುತಿಸಿಕೊಂಡಿದ್ದಾರೆ. ಜಯನಗರದ ಶಾಸಕಿ ಸೌಮ್ಯರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ, ಶಾಸಕ ಜಮೀರ್ ಅಹಮದ್ ಅವರ ಜತೆ ಕಾಣಿಸಿಕೊಂಡಿದ್ದಾಳೆ. ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಸಿಕ್ಕಿ ಬಿದ್ದಿರುವ ನೇತ್ರಾವತಿ ವಿಚಾರ ಮುಂದಿಟ್ಟುಕೊಂಡು ಇಬ್ಬರು ಪಾರ್ಟಿಯವರು ಸಾಮಾಜಿಕ ಜಾಲ ತಾಣದಲ್ಲಿ ಈ ವಿಚಾರ ಮುಂದಿಟ್ಟುಕೊಂಡು ಆರೋಪ ಮತ್ತು ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications