ಇನ್ಫೋಸಿಸ್ ನೆರವಿನ ಬ್ರಾಡ್ ವೇ ಆಸ್ಪತ್ರೆ ಶೀಘ್ರ ಕಾರ್ಯಾರಂಭ
ಬೆಂಗಳೂರು ಆಗಸ್ಟ್ 3: ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Recommended Video
ಆಸ್ಪತ್ರೆ ನಿರ್ಮಿಸಲು ಇನ್ಫೋಸಿಸ್ ಪ್ರತಿಷ್ಠಾನ ನೆರವು ನೀಡಿದೆ. ಪ್ರತಿಷ್ಠಾನಕ್ಕೆ ಮತ್ತು ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಸರ್ಕಾರ ಮತ್ತು ಜನರ ಪರವಾಗಿ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.
ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಶ್ರೀಮತಿ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2)#InfosysFoundation pic.twitter.com/fBM68GNq7y
— Dr Sudhakar K (@mla_sudhakar) August 2, 2020
ಬ್ರಾಡ್ ವೇ ರಸ್ತೆಯ ಬಳಿ ಬಿಬಿಎಂಪಿ ಕಟ್ಟಡದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕೊರೊನಾ ರೋಗಿಗಳಿಗಾಗಿ ಈ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಮೊದಲಾದ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಜತೆಗೆ ಸಿಬ್ಬಂದಿ ನಿಯೋಜನೆಯೂ ಮಾಡಲಾಗಿದೆ.
ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದಿರುವ ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಆತ್ಯಂತ ಶ್ಲಾಘನೀಯ.
— Dr Sudhakar K (@mla_sudhakar) August 2, 2020
"ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಸಿದ್ಧವಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇನ್ನು ಎರಡು ವಾರದೊಳಗೆ ಕಾರ್ಯಾರಂಭಗೊಳ್ಳಲಿದೆ" ಎಂದು ಸಚಿವರು ಹೇಳಿದ್ದಾರೆ.

ವೈದ್ಯರಿಗೆ ಧನ್ಯವಾದ: ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ಆಸ್ಪತ್ರೆ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ಶ್ಲಾಘಿಸಿದ್ದಾರೆ.
"ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ವೈದ್ಯರು ಮಾನವೀಯತೆ ಮೆರೆದಿದ್ದಾರೆ. ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಶ್ಲಾಘನೀಯವಾದುದು" ಎಂದು ಅವರು ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications