ಐಸಿಯು ಬೆಡ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದವ ಬಂಧನ
ಬೆಂಗಳೂರು, ಏಪ್ರಿಲ್ 28: ಕೊರೊನಾ ಸೋಂಕಿತರಿಗೆ ಬಿಬಿಎಂಪಿ ಕೋಟಾದಡಿ ಐಸಿಯು ಬೆಡ್ ಕೊಡಿಸುವ ಬಗ್ಗೆ ಸ್ವಯಂ ಸೇವಾ ಸಂಸ್ಥೆಗಳ ಹೆಸರಿನಲ್ಲಿ ಬರುವ ನಂಬರ್ ನಂಬಿಕೊಂಡು ಹೋಗಬೇಡಿ. ಬಿಬಿಎಂಪಿ ಕೋಟಾದಡಿ ಬೆಡ್ ಕೊಡಿಸುವ ಆಸೆ ಹುಟ್ಟಿಸಿ ಹಣ ಪಡೆದು ಮೋಸ ಮಾಡುವ ಜಾಲ ಬೆಂಗಳೂರಿನಲ್ಲಿ ತಲೆಯೆತ್ತಿದೆ. ಕೊರೊನಾ ಕಷ್ಟ ಕಾಲದಲ್ಲಿ ಇರುವ ಕಾಸು ಕಳೆದುಕೊಂಡು ಬೀದಿಗೆ ಬೀಳಬೇಕಾದೀತು. ಬಿಬಿಎಂಪಿ ಕೋಟಾದಡಿ ಐಸಿಯು ಬೆಡ್ ಕೊಡಿಸುವ ನೆಪದಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆರೋಪಿಯೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮನೀಶ್ ಸರ್ಕಾರ್ ಬಂಧಿತ ಆರೋಪಿ. ಪಶ್ಚಿಮ ಬಂಗಾಳ ಮೂಲದವ. ಮಲ್ಲೇಶ್ವರದಲ್ಲಿರುವ ಹೌಸ್ ಕೀಪಿಂಗ್ ಗುತ್ತಿಗೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಬಿಬಿಎಂಪಿ ಕೋಟಾದಡಿ ಕೋವಿಡ್ ರೋಗಿಗಳಿಗೆ ಮಂಜೂರಾಗಿರುವ ಐಸಿಯು ಬೆಡ್ ಕೊಡಿಸುವುದಾಗಿ ಸಂದೇಶ ಟೈಪ್ ಮಾಡಿ ಅದಕ್ಕೆ ಆರೋಪಿ ತನ್ನ ನಂಬರ್ ಹಾಕಿದ್ದ. ಈ ಸಂದೇಶವನ್ನು ಹಲವು ವಾಟ್ಸಪ್ ಗ್ರೂಪ್ಗಳಿಗೆ ಸ್ವಯಂ ಸೇವಾ ಸಂಸ್ಥೆ ಹೆಸರಿನಲ್ಲಿ ಹಾಕಿದ್ದ. ಕೆಲವರು ಈತನಿಗೆ ಕರೆ ಮಾಡಿ ಬಿಬಿಎಂಪಿ ಕೋಟಾದಡಿ ಐಸಿಯು ಬೆಡ್ ಕೊಡಿಸುವಂತೆ ಕೋರಿದ್ದರು. ಅನೇಕರು ಮನೀಶ್ ಮೊಬೈಲ್ ಗೆ ಕರೆ ಮಾಡಿ ಬೆಡ್ ಕೊಡಿಸುವಂತೆ ಗೋಗರಿದಿದ್ದರು.

Recommended Video
ಅದೇ ರೀತಿ ಸ್ಟೀಫನ್ ರಾಜ್ ತನ್ನ ತಾಯಿಗೆ ಐಸಿಯು ಬೆಡ್ ಕೊಡಿಸುವಂತೆ ಮನವಿ ಮಾಡಿದ್ದ. ಬೆಡ್ ರೆಡಿ ಇದೆ ಎಂದು ಹೇಳಿ ಸ್ಟೀಫನ್ ರಾಜ್ ನಿಂದ 25 ಸಾವಿರ ಹಣವನ್ನು ಪಡೆದಿದ್ದ ಮನೀಶ್ ಬೇರೆಯವರಿಗೆ ಗಾಳ ಹಾಕಿದ್ದ. ಆದರೆ ಬೆಡ್ ಸಿಗದೇ ಸ್ಟೀಫನ್ ರಾಜ್ ತಾಯಿ ತೀರಿಕೊಂಡಿದ್ದರು. ತನಗಾದ ಅನ್ಯಾಯದ ಬಗ್ಗೆ ಸ್ಟೀಫನ್ ರಾಜ್ ಜಯನಗರ ಪೊಲೀಸರಿಗೆ ದೂರು ನೀಡಿದ್ದ. ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದಾಗ ಅಕ್ರಮ ಬಯಲಿಗೆ ಬಂದಿದೆ. ಆರೋಪಿ ಬಳಿಯಿದ್ದ 20 ಸಾವಿರ ರೂ. ಹಣ ವಶಕ್ಕೆ ಪಡೆದಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications