ಕೋವಿಡ್; ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ
ಬೆಂಗಳೂರು, ಏಪ್ರಿಲ್ 26; " ಕೋವಿಡ್ ಸೋಂಕಿತರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು" ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹೇಳಿದ್ದಾರೆ.
"ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ" ಎಂದರು.
"ಕೋವಿಡ್ ರೋಗಿಗಳು ತಮ್ಮ ಇಚ್ಛಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಜನರಲ್ ವಾರ್ಡ್ಗೆ ರೂ. 10,000, ಹೆಚ್ ಡಿಯುಗೆ ರೂ.12,000, ಐಸೊಲೇಷನ್ ಐಸಿಯು ವೆಂಟಿಲೇಟರ್ ಇಲ್ಲದ ಚಿಕಿತ್ಸೆಗೆ ರೂ. 15,000 ಹಾಗೂ ಐಸೊಲೇಷನ್ ಐಸಿಯು ವೆಂಟಿಲೇಟರ್ ಸಹಿತ ಚಿಕಿತ್ಸೆಗೆ ರೂ. 25,000 ಸರ್ಕಾರ ನಿಗದಿಪಡಿಸಿರುವ ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳ ಭರಿಸಬೇಕಾಗುತ್ತದೆ" ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ, ಚಿಕಿತ್ಸೆ ನೀಡಲು ವಿಳಂಬ ಮಾಡಿದಲ್ಲಿ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ ಜನರು ದೂರನ್ನು ನೀಡಬಹುದು.
ಜನರು ದೂರು ನೀಡಲು ದೂರವಾಣಿ ಸಂಖ್ಯೆ 1800 425 8330 ಹಾಗೂ 1912. ಇ-ಮೇಲ್ ವಿಳಾಸ [email protected] ಗೆ ಮೇಲ್ ಕಳಿಸುವ ಮೂಲಕ ಸಹ ದೂರು ಸಲ್ಲಿಸಬಹುದು.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications