ಬೆಂಗಳೂರಲ್ಲಿ ಮೂರು ಪಟ್ಟು ಹೆಚ್ಚಾದ ಕೋವಿಡ್ ಪ್ರಕರಣ
ಬೆಂಗಳೂರು ಜೂ. 12: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ದಿನೇ ದಿನೆ ಉಲ್ಬಣಗೊಳ್ಳುತ್ತಿದೆ. ಕಳೆದ ಹತ್ತು ದಿನದಲ್ಲಿ ನಗರದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಇದರಿಂದ ಶೇ.1.1ರಷ್ಟಿದ್ದ ಪಾಸಿಟಿವಿಟಿ ದರ ಶೇ. 2.9ಕ್ಕೆ ತಲುಪಿದೆ. ಬಿಬಿಎಂಪಿ ಕೊರೋನಾ ವರದಿ ಪ್ರಕಾರ, ಕಳೆದ ಮೇ 31ರಂದು 178 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಜೂ.10 ರಂದು 494 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಈ ಮೂಲಕ ಸೋಂಕು ಆರ್ಭಟಿಸುವ ಮುನ್ಸೂಚನೆ ನೀಡಿದೆ.
ಕೆಲ ವಾರ್ಡ್ಗಳಲ್ಲಿ ಸೋಂಕು ಉಲ್ಬಣ:
ಬಿಬಿಎಂಪಿ ವ್ಯಾಪ್ತಿಯ ಹತ್ತು ವಾರ್ಡ್ಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಾಗಿದೆ. ಈ ಪೈಕಿ ಮಹಾದೇವಪುರ ಮತ್ತು ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ವಾರ್ಡಗಳಲ್ಲಿ ಅಧಿಕ ಜನರು ಸೋಂಕಿಗೆ ತುತ್ತಾಗಿರುವುದು ಗೊತ್ತಾಗಿದೆ. ಈ ವ್ಯಾಪ್ತಿಯಲ್ಲಿನ ವಾರ್ಡಗಳಲ್ಲಿ ಅತ್ಯಧಿಕ ಜನಸಂಖ್ಯೆ ಇರುವುದರಿಂದ ಹಾಗೂ ಕೋವಿಡ್ ಭಿತಿ ಕಡಿಮೆಯಾದಾಗಿನಿಂದ ಈವರೆಗೆ ಸರ್ಕಾರದ ಮಾರ್ಗಸೂಚಿ ಪಾಲಿಸಿದಿರುವುದರಿಂದ ಸೋಂಕು ಹೆಚ್ಚಳವಾಗಿದೆ.

ಬೆಳ್ಳಂದೂರು ಒಂದರಲ್ಲಿ 1.30ಲಕ್ಷ ಜನಸಂಖ್ಯೆ, ಅದೇ ರೀತಿ ವರ್ತೂರು, ಹಗದೂರಿನಲ್ಲಿ ಸುಮಾರು 60ಸಾವಿರ ಜನರು ಇದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿಯೇ ಆಭಾಗದಲ್ಲಿ ಸೋಂಕಿನ ಅಬ್ಬರ ಹೆಚ್ಚಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ (ಮಹಾದೇವಪುರ) ಡಾ. ಸುರೇಂದರ್ ತಿಳಿಸಿದ್ದಾರೆ.
ರಾಜ್ಯದ ನಾನಾ ಭಾಗದಿಂದ ಬಂದು ನಗರದಲ್ಲಿರುವ ವಲಹೆ ಹಾಗೂ ಕೂಲಿ ಕಾರ್ಮಿಕರ ಪ್ರದೇಶಗಳಲ್ಲಿ ಸಹ ಕೊರೋನಾ ಹೆಚ್ಚಾಗಿದೆ. ಅಲ್ಲದೇ ಇತ್ತೀಚೆಗೆ ನೆರೆ ರಾಜ್ಯ ಹಾಗೂ ವಿದೇಶಗಳಿಗೆ ಜನ ನಗರದಿಂದ ಹೋಗುವುದು ಮತ್ತು ನಗರಕ್ಕೆ ಮರಳುವುದು ಸೋಂಕು ಅಧಿಕವಾಗಲು ಕಾರಣ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಪರೀಕ್ಷೆ ಹೆಚ್ಚಳ:
ಸೋಂಕಿನ ಹರಡುವಿಕೆ ತಡೆಯುವ ಸಲುವಾಗಿ ಮಹಾದೇವಪುರ ವಲಯದಲ್ಲಿ 5-12ಕ್ಲಸ್ಟರ್ ಗಳನ್ನ ನಿರ್ಮಿಸಲಾಗಿದೆ. ಸೋಂಕಿತರಿಗೆ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಮೊದಲು ಮಹಾದೇವಪುರದಲ್ಲಿ ನಿತ್ಯ ಸುಮಾರು 1400 ಕೊರೋನಾ ಟೆಸ್ಟ್ ಮಾಡಲಾಗುತ್ತಿದ್ದು, ಇದೀಗ ಅದನ್ನು 2,000 ಕ್ಕೆ ಹೆಚ್ಚಿಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
(ಒನ್ಇಂಡಿಯಾ ಸುದ್ದಿ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications