ಬೊಜ್ಜು ಹೊಂದಿರುವ ಕೊರೊನಾ ಸೋಂಕಿತರ ಮೇಲೆ ಲಸಿಕೆ ಪರಿಣಾಮ ಬೀರುವುದಿಲ್ಲ ನಿಜವೇ?
ಬೆಂಗಳೂರು,ಫೆಬ್ರವರಿ 13: ಬೊಜ್ಜು ಹೊಂದಿರುವ ವ್ಯಕ್ತಿಗಳ ಮೇಲೆ ಕೊರೊನಾ ಲಸಿಕೆ ಪರಿಣಾಮ ಬೀರುವುದಿಲ್ಲ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಇಡೀ ವಿಶ್ವದ ಜನತೆ ಕೊರೊನಾ ಭಯದಿಂದ ನಡುಗುತ್ತಿದೆ, ಹೀಗಿರುವಾಗ ತಜ್ಞರು ನೀಡಿದ ಈ ವರದಿ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.ಬೊಜ್ಜು ಹಾಗೂ ಕೊರೊನಾ ನಡುವೆ ನೇರ ಸಂಬಂಧವಿದೆಯೇ ಎಂಬುದಕ್ಕೆ ಸಾಕಷ್ಟು ಅಧ್ಯಯನಗಳು ಬೇಕಿವೆ.
ಈ ವರ್ಗಗಳಲ್ಲಿ ಪರಿಣಾಮಗಳು ಭಿನ್ನವಾಗಿರಬಹುದು, ಆದಾಗ್ಯೂ,ಲಸಿಕೆಗಳನ್ನು ಅಭಿವೃದ್ಧಿಗೊಳಿಸಲು ವಿಭಿನ್ನ ತಂತ್ರಜ್ಞಾನಗಳನ್ನು ಬಳಸಲಾಗುತ್ತಿದೆ ಎಂದು ಪರಿಗಣಿಸಿ ಕೊರೊನಾ ಲಸಿಕೆಗಳ ಪ್ರತಿಕ್ರಿಯೆ ಅಥವಾ ಪರಿಣಾಮವನ್ನು ಅಧ್ಯಯನ ಮಾಡಲು ಹೆಚ್ಚಿನ ಡೇಟಾಗಳು ಬೇಕಾಗುತ್ತದೆ.

ಬೊಜ್ಜು ಹೊಂದಿರುವವರ ಮೇಲೆ ಲಸಿಕೆ ಪರಿಣಾಮ ಬೀರುವುದಿಲ್ಲ
ಜ್ವರ ಅಥವಾ ಇತರೆ ಕಾಯಿಲೆ ಇರುವವರಿಗೆ ಲಸಿಕೆ ನೀಡಿದಾಗ ತೆಳ್ಳಗಿರುವವರ ಮೇಲೆ ಪರಿಣಾಮ ಬೀರಿದಷ್ಟು ಬೊಜ್ಜು ಹೊಂದಿರುವ ವ್ಯಕ್ತಿಗಳ ಮೇಲೆ ಲಸಿಕೆ ಪರಿಣಾಮ ಬೀರಿಲ್ಲ. ಆದರೂ, ನಾವು ಕಾಯಲೇ ಬೇಕು ಎಂದು ತಜ್ಞರು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಳ್ಳಾರಿ ಮೂಲದ 43 ವರ್ಷದ ವ್ಯಕ್ತಿ ಲಸಿಕೆ ತೆಗೆದುಕೊಂಡ ಬಳಿಕ ಮೃತಪಟ್ಟಿದ್ದಾರೆ. ಮಯೋಕಾರ್ಡಿಯಲ್ ಇನ್ಫಾಕ್ಷನ್ನಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದರೂ ಅವರಿಗೂ ಬೊಜ್ಜುತನವಿತ್ತು.

ಹೆಚ್ಚು ಅಧ್ಯಯನ ನಡೆಯಬೇಕು
ಬೆಂಗಳೂರಿನ ಅಪೊಲೊ ಆಸ್ಪತ್ರೆಗಳ ಶಾಸ್ವಕೋಶತಜ್ಞ ಡಾ. ರವೀಂದ್ರ ಅವರು ಹೇಳುವ ಪ್ರಕಾರ ಬೇರೆ ಬೇರೆ ಗುಂಪುಗಳ ಬಗ್ಗೆ ಅಧ್ಯಯನ ನಡೆಸುವುದು ಬಹಳ ಮುಖ್ಯವಾಗಿದೆ.
ಯಾವ ಗುಂಪುಗಳಲ್ಲಿ ಲಸಿಕೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿದೆ, ಯಾವುದರಲ್ಲಿ ಇಲ್ಲ ಎಂಬುದನ್ನು ತಿಳಿದುಕೊಳ್ಳಬೇಕಿದೆ.
ಕೊರೊನಾ ಲಸಿಕೆ ಬೊಜ್ಜು ಹೊಂದಿರುವವರ ಮೇಲೂ ಪರಿಣಾಮ ಬೀರಬಲ್ಲದು
ಲಸಿಕೆಗಳು ತೆಳ್ಳಗಿರುವವರು ಹಾಗೂ ಬೊಜ್ಜು ಹೊಂದಿರುವವರಿಬ್ಬರ ಮೇಲೂ ಪರಿಣಾಮ ಬೀರಬಲ್ಲದು ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಫೈಜರ್ ಲಸಿಕೆ ಪ್ರಯೋಗಗಳನ್ನು ಎಲ್ಲಾ ಗುಂಪುಗಳ ನಡುವೆ ಮಾಡಲಾಗಿದೆ, ಮತ್ತು ಇದು ಶೇ.95ರಷ್ಟು ಪರಿಣಾಮಕಾರಿತ್ವವನ್ನು ತೋರಿಸಿದೆ.
ಆದಾಗ್ಯೂ,ಬೊಜ್ಜು ಇರುವ ವ್ಯಕ್ತಿಗಳು ಕೊರೊನಾ ಲಸಿಕೆಯನ್ನು ತೆಗೆದುಕೊಳ್ಳಬೇಕೆ ಬೇಡವೇ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ.

ರೂಪಾಂತರಿ ಸೋಂಕಿನ ವಿರುದ್ಧ ಫೈಜರ್ ಪರಿಣಾಮಕಾರಿ
ಬ್ರಿಟನ್ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಮೊದಲ ರೂಪಾಂತರ ವೈರಸ್ ಅನ್ನು ಫೈಜರ್ ಲಸಿಕೆ ಪರಿಣಾಮಕಾರಿಯಾಗಿ ತಟಸ್ಥಗೊಳಿಸಲಿದೆ ಎಂದು ಹೊಸ ಅಧ್ಯಯನ ತಿಳಿಸಿದೆ.
ಅಮೆರಿಕದ ಫೈಜರ್ ಮತ್ತು ಜರ್ಮನಿಯ ಬಯೋ ಎನ್ಟೆಕ್ ಕಂಪನಿ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಫೈಜರ್ ಕೊರೊನಾ ಲಸಿಕೆ ರೂಪಾಂತರ ಕೊರೊನಾವೈರಸ್ ಮೇಲೆ ನಡೆಸಿದ ಈ ಸಂಶೋಧನಾ ಅಧ್ಯಯನ ನೇಚರ್ ಮೆಡಿಸಿನ್ ಎಂಬ ಪತ್ರಿಕೆಯಲ್ಲಿ ಪ್ರಕಟವಾಗಿತ್ತು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications