Unlock 1.0: ಬೆಂಗಳೂರಲ್ಲಿ ಕಂಟೇನ್ಮೆಂಟ್ ಜೋನ್ 32ಕ್ಕೇರಿಕೆ
ಬೆಂಗಳೂರು, ಜೂನ್ 2: ಬೆಂಗಳೂರಿನಲ್ಲಿ ಲಾಕ್ಡೌನ್ 5.0 ಅಥವಾ ಅನ್ ಲಾಕ್ 1.0 ಜಾರಿಗೆ ಬರುತ್ತಿದ್ದಂತೆ ಕೊರನಾವೈರಸ್ ಸೋಂಕಿತರ ಸಂಖ್ಯೆಯೂ ಏರಿಕೆ ಕಂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಕಂಟೇನ್ಮೆಂಟ್ ಜೋನ್ ಗಳ ಸಂಖ್ಯೆ ಕೂಡಾ ಏರುತ್ತಿರುವುದು ಆತಂಕಕಾರಿಯಾಗಿದೆ. ಮಂಗಳವಾರದಂದು ಬೆಂಗಳೂರಿನಲ್ಲಿ 32 ಕಂಟೇನ್ಮೆಂಟ್ ಜೋನ್ ಗಳನ್ನು ಗುರುತಿಸಲಾಗಿದೆ.
ಕಳೆದ ಎರಡು ದಿನಗಳಲ್ಲೇ 6 ಹೊಸ ಕಂಟೇನ್ಮೆಂಟ್ ಜೋನ್ ಗಳು ಸೇರ್ಪಡೆಗೊಂಡಿವೆ. ಕಳೆದ ಮೂರು ದಿನಗಳಲ್ಲಿ 67 ಹೊಸ ಕೊವಿಡ್ 19 ಪ್ರಕರಣಗಳು ದಾಖಲಾಗಿದ್ದು, ಎಲ್ಲವೂ ಕಂಟೇನ್ಮೆಂಟ್ ಪ್ರದೇಶಕ್ಕೆ ಹೊಂದಿಕೊಂಡಂತೆ ಬಂದಿವೆ. ಈಗ ಭಾನುವಾರದ ಕರ್ಫ್ಯೂ ಕೂಡಾ ತೆಗೆದು ಹಾಕಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್ ಅನಿಲ್ ಕುಮಾರ್ ಹೇಳಿದ್ದಾರೆ.

ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್
ಜೂನ್ 1ರಿಂದ 30ರ ತನಕ ದೇಶದಲ್ಲಿ ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ ಎಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ. ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿರುವ ಪ್ರದೇಶಕ್ಕೆ ಯಾವುದೇ ವಿನಾಯಿತಿ ಇರುವುದಿಲ್ಲ. ಇಡೀ ದೇಶದಲ್ಲಿ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಎಲ್ಲಾ ನಿಯಮಗಳು ಜಾರಿ
ಬೆಂಗಳೂರಿನ ಕಂಟೇನ್ಮೆಂಟ್ ಜೋನ್ ನಲ್ಲಿ ಈ ಹಿಂದಿನ ಎಲ್ಲಾ ನಿಯಮಗಳು ಜಾರಿಯಲ್ಲಿರಲಿದ್ದು ಯಾವುದೇ ವಿನಾಯತಿ ಸಿಕ್ಕಿಲ್ಲ. ಇದಲ್ಲದೆ, ಕಂಟೇನ್ಮೆಂಟ್ ಜೋನ್ ಸುತ್ತಮುತ್ತ ಪ್ರದೇಶದಲ್ಲಿ ಜನಸಂದಣಿಯನ್ನು ನಿರ್ಬಂಧಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್ ಅನಿಲ್ ಕುಮಾರ್ ಹೇಳಿದರು.

ಶಿವಾಜಿನಗರ, ಪಾದರಾಯನಪುರದಲ್ಲಿ ಹೆಚ್ಚು ಕೇಸ್
ಒಟ್ಟು ಪ್ರಕರಣಗಳ ಶೇ 41ರಷ್ಟು ಶಿವಾಜಿನಗರದಲ್ಲಿ ಕಂಡು ಬಂದಿದ್ದರೆ, ಶೇ 22ರಷ್ಟು ಪಾದರಾಯನಪುರದಲ್ಲಿವೆ. ಎಷ್ಟೇ ಕಠಿಣ ನಿಯಮಗಳು ಬಂದರೂ ಈ ಎರಡು ಪ್ರದೇಶಗಳಲ್ಲಿ ಪರಿಸ್ಥಿತಿ ಸುಧಾರಣೆ ಕಂಡಿಲ್ಲ ಎಂದು ಪಶ್ಚಿಮ ವಲಯದ ಆರೋಗ್ಯ ಅಧಿಕಾರಿ ಡಾ. ಮನೋರಂಜನ್ ಹೇಳಿದ್ದಾರೆ.

ಕಂಟೇನ್ಮೆಂಟ್ ಪ್ರದೇಶಗಳು
ಪಾದರಾಯನಪುರ, ಬೊಮ್ಮನಹಳ್ಳಿ, ಹೊಂಗಸಂದ್ರ, ಬೇಗೂರು, ಶಿವಾಜಿನಗರ, ಬಿಟಿಎಂ ಲೇಔಟ್, ಮಲ್ಲೇಶ್ವರ, ಎಚ್ ಬಿ ಆರ್ ಲೇಔಟ್, ಹೇರೋಹಳ್ಳಿ, ಮಂಗಮ್ಮನಪಾಳ್ಯ, ಹೂಡಿ, ನಾಗವಾರ, ಜ್ಞಾನಭಾರತಿ ನಗರ, ಕೆ. ಆರ್ ಮಾರುಕಟ್ಟೆ, ಎಸ್ ಕೆ ಗಾರ್ಡನ್(ಡಿ.ಜೆ ಹಳ್ಳಿ), ಲಕ್ಕಸಂದ್ರ, ಥಣಿಸಂದ್ರ, ಅಗರ, ಪುಟ್ಟೇನಹಳ್ಳಿ, ಮಾರಪ್ಪನಪಾಳ್ಯ, ಹಗದೂರು, ವರ್ತೂರು, ರಾಮಮೂರ್ತಿ ನಗರ, ಅಗ್ರಹಾರ ದಾಸರಹಳ್ಳಿ, ಹೊನ್ನಾರುಪೇಟೆ, ಮಾರತ್ ಹಳ್ಳಿ,ಸಿದ್ದಾಪುರ, ಹೊಸ ಹಳ್ಳಿ, ಎಚ್. ಎಸ್ ಆರ್ ಲೇ ಔಟ್, ಕಾಡುಗೋಡಿ, ಚೊಕ್ಕಸಂದ್ರ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್












Click it and Unblock the Notifications