ಹಸು ಕೆಚ್ಚಲು ಕೊಯ್ದ ಕೇಸ್: ಬೆಂಗಳೂರಲ್ಲಿ ಪ್ರಾಣಿ ರಕ್ಷಣೆಗೆ ಬಿಬಿಎಂಪಿಯಿಂದ ಹೊಸ ಅಭಿಯಾನ
Cow Horror Case: ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಲರ್ಟ್ ಆಗಿದ್ದು. ನಗರದಾದ್ಯಂತ ಪ್ರಾಣಿಗಳ ರಕ್ಷಣೆ ಹಾಗೂ ಪ್ರಾಣಿಗಳಿಗೆ ಹಾನಿ ಮಾಡಿದರೆ ಕಾನೂನಿನ ಪ್ರಕಾರ ಯಾವೆಲ್ಲ ಶಿಕ್ಷೆ ವಿಧಿಸಲಾಗುತ್ತದೆ ಎನ್ನುವ ಬಗ್ಗೆ ಬೆಂಗಳೂರಿನ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿದ್ದ ಹೇಯ ಕೃತ್ಯ ನಡೆದಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಜಾಗೃತಿ ಮೂಡಿಸಲಾಗುತ್ತಿದೆ. ಈಚೆಗಷ್ಟೇ ಬಿಬಿಎಂಪಿಯು ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಿತ್ತು. ಇದೀಗ ಪ್ರಾಣಿಗಳ ಮೇಲೆ ಹಲ್ಲೆ, ದಾಳಿ ಅಥವಾ ಹಿಂಸೆ ಕೊಟ್ಟರೆ ಏನು ಕ್ರಮ ಆಗಲಿದೆ ಎನ್ನುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ ಅದರ ವಿವರ ಇಲ್ಲಿದೆ.
ಕರ್ನಾಟಕದಲ್ಲಿ ಯಾವುದೇ ಪ್ರಾಣಿಗಳಿಗೆ ಹಿಂಸೆ ನೀಡಿದರೂ ಶಿಕ್ಷೆಯಾಗಲಿದೆ. ಅದರಲ್ಲಿ ಪ್ರಮುಖವಾಗಿ ಪ್ರಾಣಿಗಳನ್ನು ಸ್ಥಳಾಂತರಿಸುವುದು ಅಥವಾ ಅವುಗಳಿಗೆ ಆಹಾರ ಮತ್ತು ನೀರು ಸಿಗದಂತೆ ಮಾಡುವುದು, ಪ್ರಾಣಿಗಳನ್ನು ಕೊಲ್ಲುವುದು ಅಥವಾ ಅಂಗವಿಕಲಗೊಳಿಸುವುದು ಮಾಡಿದರೆ. ಬಿ.ಎನ್.ಎಸ್ ಸೆಕ್ಷನ್ 325ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಈ ರೀತಿ ಮಾಡಿದರೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಅವಕಾಶವಿದೆ.

ಇನ್ನು ಪ್ರಾಣಿಗಳಿಗೆ ಆಹಾರ ನೀಡುವವರಿಗೆ ಕಿರುಕುಳ ಕೊಡುವುದು. ಅವರ ಮೇಲೆ ಗುಂಪು ಹಲ್ಲೆ ಮಾಡುವುದು ಮತ್ತು ಅವುಗಳಿಗೆ ಆಹಾರ ನೀಡುವುದನ್ನು ತಡೆಯುವುದು ಕ್ರಿಮಿನಲ್ ಬೆದರಿಕೆಯ ಅಡಿಯಲ್ಲಿ ಶಿಕ್ಷಾರ್ಹ ಮತ್ತು 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವುದಕ್ಕೂ ಕಾನೂನಿನಲ್ಲಿ ಅವಕಾಶವಿದೆ.
ಜಾಗೃತಿ ಅಭಿಯಾನ: ಇನ್ನು ಬೆಂಗಳೂರಿನಲ್ಲಿ ಬಿಬಿಎಂಪಿಯು ಪ್ರಾಣಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಗರದ 250 ಸ್ಥಳಗಳಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ಬಿಬಿಎಂಪಿಯ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.
ಬಿಬಿಎಂಪಿ ಪಶುಪಾಲನೆ ವಿಭಾಗದಿಂದ ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ ಎನ್ನುವ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಗುರುವಾರ ಬಿಬಿಎಂಪಿಯ ಕೇಂದ್ರ ಕಚೇರಿ ಡಾ. ರಾಜ್ಕುಮಾರ್ ಗಾಜಿನ ಮನೆಯ ಬಳಿ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿರುವ ಅವರು ಸಮುದಾಯ (ಬೀಡಾಡಿ) ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಾಣಿಗಳ ಕುರಿತು ಯಾವೆಲ್ಲಾ ಕಾಯ್ದೆಗಳಿವೆ, ಸಾರ್ವಜನಿಕರು ಏನು ಮಾಡಬಹುದು-ಏನು ಮಾಡಬಾರದು, ಏನಾದರು ಸಮಸ್ಯೆಯಾದರೆ ಯಾರನ್ನು ಸಂಪರ್ಕಿಸಬೇಕು ಸೇರಿದಂತೆ ಎನ್ನುವುದು ಸೇರಿದಂತೆ ವಿವಿಧ ವಿಷಯಗಳನ್ನು ವಿವರಿಸಿದ್ದಾರೆ.
250 ಸ್ಥಳಗಳಲ್ಲಿ ಜಾಗೃತಿ: ಇನ್ನು ಬಿಬಿಎಂಪಿಯು ಬೆಂಗಳೂರಿನಲ್ಲಿ 250 ಸ್ಥಳಗಳಲ್ಲಿ ಸಮುದಾಯದ ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನವನ್ನು ಆಯೋಜಿಸಿತ್ತು. ಇದಕ್ಕೆ ಬಿಬಿಎಂಪಿಯ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗಿತ್ತು. ಕಾರ್ಯಕ್ರಮದ ವೇಳಾಪಟ್ಟಿಯನ್ನು ಪಶುಪಾಲನಾ ವಿಭಾಗದ ಸಾಮಾಜಿಕ ಜಾಲತಾಣವಾದ Instagram ಹ್ಯಾಂಡಲ್ @bbmp_animalhusbandry ನಲ್ಲಿ ಅಪ್ಡೇಟ್ ಮಾಡಲಾಗಿದೆ. ಅದರಲ್ಲಿ ಎಲ್ಲಾ ಮಾಹಿತಿ ಲಭ್ಯವಿರಲಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೀದಿ ನಾಟಕ/ನೃತ್ಯದ ಮೂಲಕ ಜಾಗೃತಿ: ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಸಮುದಾಯದ ಪ್ರಾಣಿಗಳ ಕುರಿತು ಬೀದಿ ನಾಟಕ ಹಾಗೂ ಡ್ಯಾನ್ಸ್ನ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications