ಬೆಂಗಳೂರು: 50 ಮನೆಗಳ ಅಪಾರ್ಟ್ಮೆಂಟ್ಗೆ ಎಸ್ಟಿಪಿ ಕಡ್ಡಾಯ
ಬೆಂಗಳೂರು, ಆಗಸ್ಟ್ 21: ಐವತ್ತಕ್ಕೂ ಹೆಚ್ಚು ಫ್ಲ್ಯಾಟ್ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ಗಳು ಎಸ್ಟಿಪಿ ಹೊಂದುವಂತೆ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಆದೇಶ ನೀಡಿದೆ.
ಬೆಂಗಳೂರು ವೃಷಭಾವತಿ ಕಣಿವೆ ಹಾಗೂ ಆ ಕಣಿವೆಯಲ್ಲಿರುವ ಭೈರಮಂಗಲ ವ್ಯಾಪ್ತಿಯ ಕಾರ್ಖಾನೆಗಳು ಕಡ್ಡಾಯವಾಗಿ ಎಸ್ಟಿಪಿ ನೀರು ಬಳಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಕೇಂದ್ರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು 2018ರ ಜನವರಿ 10,11ರಂದು ವೃಷಭಾವತಿ ಕಣಿವೆ, ಭೈರಮಂಗಲ ಕೆರೆಯಿಂದ ಕಾವೇರಿ ಸಂಗಮದವರೆಗೆ ಪರಿಶೀಲನೆ ಕೈಗೊಂಡಿತ್ತು.
ಈ ಪರಿಶೀಲನೆಯಲ್ಲಿ ಕಂಡುಬಂದ ಆಘಾತಕಾರಿ ಅಂಶಗಳನ್ನು ಪಟ್ಟಿ ಮಾಡಿದೆ ಹಾಗೂ ಹಲವು ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚಿಸಿದೆ. ವೃಷಭಾವತಿ ಕಣಿವೆ ವ್ಯಾಪ್ತಿಯ ಕಾರ್ಖಾನೆಗಳು ಕೊಳಚೆ ನೀರನ್ನು ನೇರವಾಗಿ ಕಣಿವೆಗೆ ಹರಿಸುತ್ತವೆ. ಸರ್ವೀಸ್ ಸ್ಟೇಷನ್, ಪ್ಲಾಸ್ಟಿಕ್ ಮರುಬಳಕೆ ಘಟಕ, ಎಲೆಕ್ಟ್ರೋಪ್ಲೇಟಿಂಗ್ ಘಟಕ, ಗ್ರೀಸ್ ಹಾಗೂ ಸಂಸ್ಕರಿಸದ ಕೊಳಚೆ ನೀರನ್ನು ಕಣಿವೆಗೆ ಬಿಡುತ್ತಿವೆ.

ಅಪಾರ್ಟ್ಮೆಂಟ್ ಪರಿಶೀಲನೆ
ವೃಷಭಾವತಿ ಕಣಿವೆ ವ್ಯಾಪ್ತಿಯಲ್ಲಿರುವ ಕೊಳಗೇರಿ, ಬಡಾವಣೆಗಳಿಗೆ ಒಳಚರಂಡಿ ಸಂಪರ್ಕ ಇಲ್ಲ ಎಂಬುದು ಪತ್ತೆಯಾಗಿದೆ, ಹೀಗಾಗಿ 50ಕ್ಕಿಂತ ಹೆಚ್ಚು ಫ್ಲ್ಯಾಟ್ಗಳನ್ನು ಹೊಂದಿರುವ ಅಪಾರ್ಟ್ಮೆಂಟ್ಗಳು ಎಸ್ಟಿಪಿ ಹೊಂದಿರುವ ಹಾಗೂ ಎಸ್ಟಿಪಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲನೆ ಮಾಡಬೇಕು ಎಂದು ತಿಳಿಸಿದೆ.

ವೃಷಭಾವತಿ ಒಡಲಿಗೆ ನಿತ್ಯ 484 ದಶಲಕ್ಷ ಲೀಟರ್ ಕೊಳಚೆ ನೀರು
ದಿನನಿತ್ಯ ವೃಷಭಾವತಿ ಕಣಿವೆಗೆ 484 ದಶಲಕ್ಷ ಲೀಟರ್ ಕೊಳಚೆ ನೀರು ಸೇರುತ್ತಿದೆ, ಇದು ಭೈರಮಂಗಲ ಕೆರೆಗೂ ಹೋಗುತ್ತದೆ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಆ.31ರೊಗೆ ಪರಿಶೀಲನೆಯ ವರದಿ ನೀಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ.

ವೃಷಭಾವತಿ ನದಿ ಮತ್ತೊಂದು ಬೆಳ್ಳಂದೂರು ಆಗುವುದರಲ್ಲಿ ಸಂಶಯವಿಲ್ಲ
ವಿವಿಧ ಕಾರ್ಖಾನೆಗಳಿಂದ ಬರುತ್ತಿರುವ ಕೊಳಚೆ, ಮಲಿನ ನೀರಿನಿಂದಾಗಿ, ಭೈರಮಂಗಲ ಕೆರೆಯು ಕಲುಷಿತವಾಗುತ್ತಿರುವುದಷ್ಟೇ ಅಲ್ಲದೆ ನೊರೆ ಉಂಟಾಗುತ್ತಿದೆ, ಬೆಳ್ಳಂದೂರು ಕೆರೆಯಲ್ಲೂ ಇದೇ ಕಾರಣದಿಂದ ನೊರೆ ಉಂಟಾಗಿ, ಕೆಲವು ಕಡೆ ಬೆಂಕಿ ಕಾಣಿಸಿಕೊಂಡರೂ ಇದುವರೆಗೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ವೃಷಭಾವತಿ ನದಿಯಲ್ಲಿ ಹಸಿರು, ಕಪ್ಪು ಬಣ್ಣದ ನೀರು
ವೃಷಭಾವತಿ ಕಣಿವೆಯಲ್ಲಿ ನೀರಿನ ಗುಣಮಟ್ಟ ಪರೀಕ್ಷಿಸಿದಾಗ, ಕಾರ್ಖಾನೆಗಳ ಕೊಳಚೆ ನೀರು ಸೇರುತ್ತಿರುವುದು ತಿಳಿದುಬಂದಿದೆ, ಕಣಿವೆಯ ಕೆಲ ಭಾಗಗಳಲ್ಲಿರುವ ಹಸಿರು ಹಾಗೂ ಕಪ್ಪುಬಣ್ಣದ ನೀರು, ಕೊಳಚೆ ನೀರು ಸೇರುತ್ತಿರುವುದು ದೃಢಪಟ್ಟಿದೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications