Bengaluru: ಬೆಂಗಳೂರಿನ ತರಕಾರಿಗಳಲ್ಲಿ ವಿಷಕಾರಿ ಅಂಶ; ಅಧ್ಯಯನಕ್ಕೆ ಸಮಿತಿ
ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಬೆಲೆ ಹೆಚ್ಚಾದರೂ ತರಕಾರಿ ಕೊಳ್ಳಲೇಬೇಕಾದ ಅನಿವಾರ್ಯತೆ ಗ್ರಾಹಕರದ್ದಾಗಿದೆ. ಉತ್ತಮ ಆರೋಗ್ಯಕ್ಕಾಗಿ ತರಕಾರಿ ಸೇವನೆ ಮಾಡಿ ಎಂದು ವೈದ್ಯರು ಕೂಡ ಶಿಫಾರಸ್ಸು ಮಾಡುತ್ತಾರೆ. ಆದರೆ ತಿನ್ನುವ ತರಕಾರಿಯೇ ವಿಷವಾಗಿದೆ ಎಂದರೆ ಜನ ಏನು ಮಾಡಬೇಕು. ಹೌದು, ಬೆಂಗಳೂರಿನಲ್ಲಿ ಮಾರಾಟವಾಗುತ್ತಿರುವ ತರಕಾರಿಯಲ್ಲಿ ವಿಷಕಾರಿ ಲೋಹದ ಅಂಶಗಳು ಪತ್ತೆಯಾಗಿದೆ.
ಈ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಸ್ತಾಪಿಸಿದೆ. ಬೆಂಗಳೂರಿನಲ್ಲಿ ತರಕಾರಿ ತಿನ್ನುವವರಿಗೆ ಈ ಸುದ್ದಿ ಆತಂಕಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠವು ಪರಿಸರ ನಿರ್ವಹಣಾ ನೀತಿ ಸಂಶೋಧನಾ ಸಂಸ್ಥೆ (ಇಎಂಪಿಆರ್ಐ) ನಡೆಸಿದ ಅಧ್ಯಯನದಲ್ಲಿ ತರಕಾರಿಗಳಲ್ಲಿ ವಿಷಕಾರಿ ಲೋಹದ ಅಂಶಗಳು ಪತ್ತೆಯಾಗಿದ್ದವು. 10 ತರಕಾರಿಗಳ 400 ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನ ಮಾಡಿದ್ದು ಇದರಲ್ಲಿ ಕಬ್ಬಿಣ, ಕ್ಯಾಡ್ಮಿಯಮ್, ಸೀಸ ಮತ್ತು ನಿಕಲ್ ಅಂಶಗಳು ಆಹಾರ ಮತ್ತು ಕೃಷಿ ಸಂಸ್ಥೆಯು ಸೂಚಿಸಿದ ಮಿತಿಗಳಿಗಿಂತ ಹೆಚ್ಚಾಗಿರುವುದು ಕಂಡು ಬಂದಿತ್ತು.
ತರಕಾರಿಗಳಲ್ಲಿ ಭಾರಿ ಲೋಹದ ಅಂಶಗಳು ಮತ್ತು ಕೀಟನಾಶಕಗಳಿಗೆ ಸಂಬಂಧಪಟ್ಟಂತೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂದು ಸಿಪಿಸಿಬಿ ಐದು ಸದಸ್ಯರ ಸಮಿತಿ ಪ್ರಸ್ತಾಪಿಸಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ)ಯ ಪ್ರಯೋಗಾಲಯಗಳು ಎಫ್ಎಸ್ಎಸ್ಎಐನಿಂದ ಮಾನ್ಯತೆ ಪಡೆಯದ ಕಾರಣ, ಸಮಿತಿಯು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಸಂಘ (ಎಫ್ಎಸ್ಎಸ್ಎಐ) ಮತ್ತು ಭೋಪಾಲ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೋಲ್ ಸೈನ್ಸ್ನ ಸದಸ್ಯರನ್ನು ಒಳಗೊಂಡಿರಬೇಕು ಬೆಂಗಳೂರಿನ ಸಿಪಿಸಿಬಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಒಬ್ಬರು ಸದಸ್ಯರು ಸಮಿತಿಯಲ್ಲಿ ಇರಬೇಕು ಎಂದು ಶಿಫಾರಸ್ಸು ಮಾಡಿದೆ.
ಸಮೀಕ್ಷೆ, ಮಾದರಿ ಗಾತ್ರ, ಸ್ಥಳ ಮತ್ತು ಪ್ರಯೋಗಾಲಯಗಳು ಸೇರಿದಂತೆ ಅಧ್ಯಯನಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಮಿತಿಯು ನಿರ್ಧರಿಸುತ್ತದೆ. ಎನ್ಜಿಟಿಗೆ ಸಲ್ಲಿಸಬೇಕಾದ ಅಧ್ಯಯನ ಫಲಿತಾಂಶಗಳು ಮತ್ತು ಅಂತಿಮ ವರದಿಯನ್ನು ನೀಡಲು ನಾಲ್ಕು ತಿಂಗಳ ಅವಕಾಶ ಕೊಡುವಂತೆ ಕೇಳಿದೆ.
ಅಕ್ಟೋಬರ್ 15 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಪುಷ್ಪಾ ಸತ್ಯನಾರಾಯಣ ಮತ್ತು ತಜ್ಞ ಸದಸ್ಯ ಸತ್ಯಗೋಪಾಲ್ ಕೊರ್ಲಪಾಟಿ ಅವರಿದ್ದ ಎನ್ಜಿಟಿ ಪೀಠವು ಡಿಸೆಂಬರ್ 2 ರೊಳಗೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಮಂಡಳಿಗೆ ಸೂಚನೆ ಕೊಟ್ಟಿದೆ.
-
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications