ವಾಯು ಮಾಲಿನ್ಯ: ದೆಹಲಿಯನ್ನೂ ಮೀರಿಸಿದ ಬೆಂಗಳೂರು
ಬೆಂಗಳೂರು, ಆಗಸ್ಟ್ 13: ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ಸಮೀಕ್ಷಾ ವರದಿಯಲ್ಲಿ ಬೆಂಗಳೂರು ನಗರ ದೇಶದ ಎರಡನೇ ಅತಿಹೆಚ್ಚು ಮಾಲಿನ್ಯ ನಗರವಾಗಿ ಪರಿಗಣಿಸಿದ್ದು, ರಾಷ್ಟ್ರ ರಾಜಧಾನಿ ದೆಹಲಿಯನ್ನೂ ಮೀರಿಸಿದೆ.
ಬೆಂಗಳೂರು ನಗರದ ಹೊರ ವಲಯದಲ್ಲಿ ಹೆಚ್ಚುತ್ತಿರುವ ಬೃಹತ್ ಕೈಗಾರಿಕೆಗಳು ಹಾಗೂ ಬೆಂಗಳೂರು ನಗರ ಬಳಸುತ್ತಿರುವ ಡೀಸೆಲ್ ಆಧರಿತ ಜನರೇಟರ್ಗಳಿಂದ ಬೆಂಗಳೂರು ನಗರದ ವಾಯು ಮಾಲಿನ್ಯ ವಿಪರೀತವಾಗಿದೆ ಎಂದು ಸಮೀಕ್ಷೆ ಹೇಳಿದೆ.
ಅಲ್ಲದೆ ಬೆಂಗಳೂರು ನಗರದ ಧೂಳು ಪೂರಿತ ರಸ್ತೆಗಳು ಹಾಗೂ ವಾಹನಗಳು ಉಗುಳುವ ಹೊಗೆಯಿಂದ ಪರಿಸರ ಮಾಲಿನ್ಯ ಹೆಚ್ಚಾಗಲು ಕಾರಣವಾಗಿದೆ ಎಂದು ವರದಿ ಹೇಳಿದೆ. ದೇಶದಲ್ಲಿ ಅತಿ ಹೆಚ್ಚು ಮಾಲಿನ್ಯ ಹೊಂದಿದ ನಗರವಾಗಿ ಪುಣೆ ಕುಖ್ಯಾತಿ ಪಡೆದಿದ್ದು, ರಾಷ್ಟ್ರದ ಅತಿ ಮಾಲಿನ್ಯಪೀಡಿತ ಆರು ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದಿದೆ.

ಆದರೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಈ ವರದಿಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಲ್ಲಗಳೆದಿದ್ದು, ಸಮೀಕ್ಷೆಯ ಅಂಕಿ-ಅಂಶಗಳ ಬಗೆಗೆ ಸಂಶಯ ವ್ಯಕ್ತಪಡಿಸಿದೆ.
ಈ ಕುರಿತು ಮಾತನಾಡಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಬೆಂಗಳೂರು ನಗರದ ಹೊರ ವಯಲಯದಲ್ಲಿ ವರದಿಯಲ್ಲಿ ಉಲ್ಲೇಖವಾಗಿರುವಂತೆ ಹೆಚ್ಚು ಕೈಗಾರಿಕೆಗಳಿಲ್ಲ, ಆದಾಗ್ಯೂ ಕೂಡ ನಗರದ ಹೊರವಲಯದ ಕೈಗಾರಿಕೆಗಳಿಂದಲೇ ಹೆಚ್ಚು ಮಾಲಿನ್ಯ ಉಂಟಾಗಿದೆ ಎಂದು ವರದಿ ತಿಳಿಸಿದೆ.
ಹೀಗಾಗಿ ವರದಿ ಬಗೆಗೆ ಹಲವು ಸಂಶಯಗಳಿವೆ. ಆ ಬಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಜತೆ ಚರ್ಚಿಸಿ ಪ್ರತಿಕ್ರಿಯೆ ನೀಡಲಾಗುವುದು ಎಂದಿದ್ದಾರೆ. ಏನೇ ಆದರೂ ಬೆಂಗಳೂರು ನಗರದಲ್ಲಿ ಪರಿಸರ ಮಾಲಿನ್ಯ ಅದರಲ್ಲೂ ವಾಯು ಮಾಲಿನ್ಯ ವಿಪರೀತವಾಗುತ್ತಿದ್ದು, ವರ್ಷಕ್ಕೆ ಸರಾಸರಿ 5 ಲಕ್ಷ ಹೆಚ್ಚುವರಿ ವಾಹನಗಳು ರಸ್ತೆಗಿಳಿಯುವುದನ್ನು ಇಲ್ಲಿ ಸ್ಮರಿಸಬಹುದು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications