ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ವರ್ಗಾವಣೆಗೆ ಸಿಪಿಐ ಖಂಡನೆ
ಬೆಂಗಳೂರು, ಮೇ 12: ಕೊವಿಡ್ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ರಾಜ್ಯ ಸಕಾ೯ರದ ವಿವಿಧ ಇಲಾಖೆಗಳಲ್ಲೆ ಪರಿಣಾಮಕಾರಿಯಾಗಿ ಕಾರ್ಯನಿವ೯ಹಿಸಿದ್ದ ಕಾಮಿ೯ಕ ಇಲಾಖೆಯ ಪ್ರಧಾನ ಕಾಯದಶಿ೯ಗಳಾದ ಮಣಿವಣ್ಣನ್ ಅವರನ್ನು ರಾಜ್ಯ ಸಕಾ೯ರವು ವಗಾ೯ವಣೆ ಮಾಡಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಖಂಡಿಸಿವೆ.
ಉತ್ತರ ಪ್ರದೇಶ, ಗುಜರಾತ್, ಮಧ್ಯ ಪ್ರದೇಶ ರಾಜ್ಯಗಳಲ್ಲಿ ತಂದಿರುವ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡುವ ಕ್ರಮಗಳನ್ನು ಸುಗ್ರೀವಾಜ್ಞೆ ಹೊರಡಿಸುವ ತನ್ನ ಕೈಂಕಾರ್ಯಕ್ಕೆ ಅನುವುಗೊಳಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್ ಅವರಿಗೆ ಕಾಮಿ೯ಕ ಇಲಾಖೆಯ ಪ್ರಧಾನ ಕಾಯ೯ದಶಿ೯ ಹೊಣೆಯನ್ನು ವಹಿಸಿದೆ ಎಂದು ಆರೋಪ ಮಾಡಲಾಗಿದೆ.
ರಾಜ್ಯದ ಕಾಮಿ೯ಕರ ಹಿತಕ್ಕಿಂತ ಕಾಪೋ೯ರೇಟ್ ಬಂಡವಾಳದ ಹಿತವೇ ರಾಜ್ಯ ಸಕಾ೯ರಕ್ಕೆ ಮುಖ್ಯವಾಗಿದೆ ಎಂಬುದನ್ನು ಬಿಜೆಪಿ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಏನಾದರು ಮಾಡಿ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡಲು ಕೊವಿಡ್ ಪರಿಹಾರವನ್ನು ಸಹಾ ಬಲಿಕೊಡಲು ರಾಜ್ಯ ಸಕಾ೯ರ ಹಿಂಜರಿಯದು ಎಂಬುದನ್ನು ಇದು ತೋರುತ್ತದೆ ಎಂದು ಟೀಕಿಸಿದ್ದಾರೆ.

ತನ್ನ ಬಂಡವಾಳಗಾರರ ಪರ ನೀಲುಮೆಯ ಸಾಧನೆಗಾಗಿ ಒಬ್ಬ ದಕ್ಷ ಮತ್ತು ಕೊವಿಡ್ ಪರಿಹಾರ ಕಾಯ೯ವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಯಶಸ್ಸು ಕಾಣುತ್ತಿದ್ದ ಅಧಿಕಾರಿಯನ್ನು ಸಹ ಸಹಿಸದು ಬಿಜೆಪಿ ಸರಕಾರ ಎಂದು ಸಿಪಿಐ(ಎಂ) ಖಂಡಿಸಿದೆ.
ರಾಜ್ಯ ಬಿಜೆಪಿ ಸಕಾ೯ರದ ಇಂತಹ ಕ್ರಮಗಳೆ ಕೊವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಜನತೆಗೆ ಪರಿಹಾರವನ್ನು ಸಮ೯ಪಕವಾಗಿ ಸಮಥ೯ವಾಗಿ ನಿವ೯ಹಿಸುವಲ್ಲಿ ವಿಫಲವಾಗುತ್ತಿದೆ. ರಾಜ್ಯ ಸಕಾ೯ರದಲ್ಲಿನ ದ್ವಿಅಧಿಕಾರ ಕೇಂದ್ರಗಳು ಹಾಗು ಸೂಪರ್ ಸಿಎಂ ಸಂತೋಷ್ ಕಪಿಮುಷ್ಟಿಯಲ್ಲಿ ರಾಜ್ಯ ಸಕಾ೯ರವು ಸಿಲುಕಿರುವ ಪರಿಣಾಮ ಇಂತಹ ದೂರದೃಷ್ಟಿ ಹೀನ ಆಡಳಿತಾತ್ಮಕ ಕ್ರಮಗಳನ್ನು ರಾಜ್ಯದ ಜನತೆ ಕಣುವಂತಾಗಿದೆ ಎಂದು ಸಿಪಿಐ(ಎಂ) ಖಂಡಿಸಿದೆ.
ಕೋವಿಡ್ ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಶ್ರೀ.ಮಣಿವಣ್ಣನ್ ವಗಾ೯ವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನೇ ಮುಂದುವರಿಸಬೇಕೆಂದು ಸಿಪಿಐ (ಎಂ) ರಾಜ್ಯ ಸಕಾ೯ರವನ್ನು ಒತ್ತಾಯಿಸಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications