ಬೆಂಗಳೂರಲ್ಲಿ ರಾತ್ರಿ 10ರ ನಂತರ ಪಟಾಕಿ ಹೊಡೆಯುವಂತಿಲ್ಲ
ಬೆಂಗಳೂರು, ನವೆಂಬರ್ 09 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆ ಬಳಿಕ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ ಎಂದು ಮೇಯರ್ ಮಂಜುನಾಥ ರೆಡ್ಡಿ ಹೇಳಿದ್ದಾರೆ. ಪರಿಸರ ಸ್ನೇಹಿ ದೀಪಾವಳಿ ಆಚರಣೆ ಮಾಡಲು ಜನರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮೇಯರ್, 'ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆ ತನಕ ಪಟಾಕಿ ಸಿಡಿಸುವಂತಿಲ್ಲ. ಆಸ್ಪತ್ರೆ ಸುತ್ತಮುತ್ತಲೂ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ' ಎಂದು ಹೇಳಿದ್ದಾರೆ. [ಬೆಂಗಳೂರು : ಸುರಕ್ಷಿತ ದೀಪಾವಳಿಗೆ 'ಮೇಘ'ರಿಕ್ ಸಂದೇಶ]

'ಪಟಾಕಿ ತ್ಯಾಜ್ಯದಿಂದಾಗಿ ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಹಾಳಾಗಲಿದೆ. ಸಾರ್ವಜನಿಕರು ಆದಷ್ಟು ಕಡಿಮೆ ಪಟಾಕಿಗಳನ್ನು ಸಿಡಿಸಬೇಕು. ಈ ಮೂಲಕ ಪರಿಸರ ರಕ್ಷಣೆಗೆ ತಮಗಿರುವ ಜವಾಬ್ದಾರಿ ನಿರ್ವಹಿಸಬೇಕು' ಎಂದು ಮೇಯರ್ ಕರೆ ನೀಡಿದ್ದಾರೆ.
'ಪಟಾಕಿಗಳನ್ನು ಸಿಡಿಸಿದಾಗ ರಾಸಾಯನಿಕಗಳ ಸ್ಫೋಟದಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಹಾನಿ ಉಂಟಾಗಲಿದೆ. ಅಲ್ಲದೇ ಪ್ರಾಣಿ-ಪಕ್ಷಿಗಳಿಗೂ ಹಾನಿ ಉಂಟಾಗುತ್ತದೆ. ಆದ್ದರಿಂದ ಕಡಿಮೆ ಪಟಾಕಿ ಸಿಡಿಸಬೇಕು' ಎಂದು ಮೇಯರ್ ಮನವಿ ಮಾಡಿದ್ದಾರೆ.
ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆ : ಜನರು ಪಟಾಕಿ ಸಿಡಿಸುವಾಗ ಆಕಸ್ಮಿಕ ಅವಘಡ ನಡೆದರೆ ತುರ್ತು ಚಿಕಿತ್ಸೆ ನೀಡಲು ಬಿಬಿಎಂಪಿಯ ಎಲ್ಲಾ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ಇದಕ್ಕಾಗಿ ನೇಮಿಸಲಾಗಿದೆ ಎಂದು ಮೇಯರ್ ಹೇಳಿದ್ದಾರೆ.
ಕಸ ವಿಲೇವಾರಿಗೆ ಸಿದ್ಧತೆ : ಪಟಾಕಿ ಸಿಡಿಸುವುದರಿಂದ ನಗರದಲ್ಲಿ ಹೆಚ್ಚುವರಿ ಕಸ ಉತ್ಪಾದನೆಯಾಗುತ್ತದೆ. ಕಸ ವಿಲೇವಾರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಮನೆ ಮುಂದೆ ಮತ್ತು ರಸ್ತೆಯಲ್ಲಿ ಬಿದ್ದಿರುವ ಕಸವನ್ನು ಸಂಗ್ರಹಣೆ ಮಾಡಿ ಪಾಲಿಕೆ ಆಟೋ ಹಾಗೂ ಗಾಡಿಗಳಿಗೆ ನೀಡಬೇಕು ಎಂದು ಮೇಯರ್ ಮನವಿ ಮಾಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications