ಕೊಡಗಿನ ಅಪರಾಧ ಚಟುವಟಿಕೆಗೆ ಕಡಿವಾಣ: ಆರಗ ಜ್ಞಾನೇಂದ್ರ
ಬೆಂಗಳೂರು, ಸೆಪ್ಟೆಂಬರ್ 13: ನೆರೆಯ ಕೇರಳ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚು. ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಇಂತಹ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯತೆ ನೀಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಗೆ ತಿಳಿಸಿದರು.
ಸೋಮವಾರದಿಂದ ಮಳೆಗಾಲದ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ಮಂಗಳವಾರ ಸದನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಅಪ್ಪಚ್ಚು ರಂಜನ್ ಕೇಳಿದ ಪ್ರಶ್ನೆಗಳಿಗೆ ಆರಗ ಜ್ಞಾನೇಂದ್ರ ಅವರು ಉತ್ತರಿಸಿದರು. ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಕೃತ್ಯಗಳು ನಡೆಯದಂತೆ ಅಪರಾಧಿಗಳ ಮೇಲೆ ಕಣ್ಗಾವಲು ಇಡಲಾಗುವುದು .ಅದಕ್ಕಾಗಿ ಕೆಲವು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಸಿಸಿ ಕ್ಯಾಮರಾಗಳನ್ನು ಆಳವಡಿಸಲಾಗುವುದು. ನಂತರ ಅವುಗಳನ್ನು ಸಂಬಂಧಿಸಿದ ಪೊಲೀಸ್ ಸಿಬ್ಬಂದಿ ಪರೀಶಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕೊಡುಗು ಜಿಲ್ಲೆಗೆ ನೆರೆ ರಾಜ್ಯವಾದ ಕೇರಳವು ಹತ್ತಿರ ಇರುವ ಕಾರಣದಿಂದ ಆ ರಾಜ್ಯದಿಂದ ಅನೇಕ ಅಪರಾಧಿಗಳು ವಿವಿಧ ಕಾರಣಗಳಿಗೆ ಜಿಲ್ಲೆ ಪ್ರವೇಶಿಸುತ್ತಾರೆ. ವಾಹನಗಳ ಮೂಲಕ ಬಂದು ಗಡಿ ಭಾಗದಲ್ಲಿ ಅಕ್ರಮವಾಗಿ ಕೋಕೈನ್, ಡ್ರಗ್ಸ್, ಗಾಂಜಾ, ಹ್ಯಾಶ್ ಆಯಿಲ್ನಂತಹ ವಿವಿಧ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಈ ವೇಳೆ ಪೊಲೀಸರ ಕಾರ್ಯಾಚರಣೆಯಲ್ಲಿ ಸಾಕಷ್ಟು ಮಂದಿಯ ಬಂಧನವಾಗಿದ್ದರ ಬಗ್ಗೆ ಆಗಾಗ ಸುದ್ದಿ ಬಿತ್ತರಗೊಳ್ಳುತ್ತಲೇ ಇವೆ.

2021ರಲ್ಲಿ 1,684 ಅಪರಾಧ ಪ್ರಕರಣ ಪತ್ತೆ
ಕೇರಳ ಹಾಗೂ ಕೊಡಗು ಜಿಲ್ಲಾ ಗಡಿ ಭಾಗದಲ್ಲಿ ಪ್ರದೇಶದಲ್ಲಿ ಕಸ, ಕಟ್ಟಡ ತ್ಯಾಜ್ಯ ಸುರಿದು ಸಮಸ್ಯೆ ಉಂಟು ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದೆ. ಅಲ್ಲದೇ ಈ ಭಾಗದಲ್ಲಿ ರಾಜಕೀಯ, ಧಾರ್ಮಿಕ ವಿಚಾರವಾಗಿ ಗಲಾಟೆ, ಕೊಲೆಯಂತಹ ಕೃತ್ಯಗಳು ಹೆಚ್ಚು ಎನ್ನಲಾಗಿದೆ. ಈ ಆತಂಕ ಹಿನ್ನೆಲೆಯಲ್ಲಿ ಅಪ್ಪಚ್ಚು ರಂಜನ್ ಅವರು ಸದನದಲ್ಲಿ ಪ್ರಸ್ತಾಪಿಸಿ ಪ್ರಶ್ನೆಗಳನ್ನು ಕೇಳಿದ್ದರು.
ಇದಕ್ಕೆ ಪ್ರತಿಯಾಗಿ ಉತ್ತರಿಸಿದ ಆರಗ ಜ್ಞಾನೇಂದ್ರ, ಕಳೆದ 2021ರಲ್ಲಿ ಒಂದೇ ವರ್ಷದಲ್ಲಿ ಕೊಡಗು ಜಿಲ್ಲೆಯಲ್ಲಿ ಒಟ್ಟು 1,684 ಅಪರಾಧ ಪ್ರಕರಣಗಳು ದಾಖಲಾಗಿವೆ. ಇಷ್ಟು ಪ್ರಕರಣಗಳ ಪೈಕಿ 1,612 ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿಸಿದ್ದಾರೆ. ಕೆಲವು ಪ್ರಕರಣಗಳು ಅಂತ್ಯಗೊಂಡರೆ, ಇನ್ನು ಹಲವು ಪ್ರಕರಣಗಳ ತನಿಖೆ ನಡೆಯುತ್ತಿದೆ.

ಅದೇ ರೀತಿ ಪ್ರಸಕ್ತ ವರ್ಷ 2022ರ ಆಗಸ್ಟ್ ತಿಂಗಳ ಅಂತ್ಯದವರೆಗೆ ಒಟ್ಟು 1,122 ಪ್ರಕರಣಗಳು ದಾಖಲಾಗಿದ್ದರ ಬಗ್ಗೆ ವರದಿಯಾಗಿದೆ. 820 ಪ್ರಕರಣಗಳನ್ನು ಪತ್ತೆ ಈಗಾಗಲೇ ಪೊಲೀಸರು ಪತ್ತೆ ಮಾಡಿ ಆರೋಪಿಗಳಿಗೆ ಶಿಕ್ಷೆ ಕೊಡಿಸಿದ್ದಾರೆ ಎಂದು ಸದನಕ್ಕೆ ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ಮುಖಂಡ ಯು .ಟಿ. ಖಾದರ್ ಸಹ ಕೊಡಗಿನಲ್ಲಿ ಪದೇ ಪದೆ ಕೇಳಿ ಬರುತ್ತಿರುವ ಗಲಾಟೆ ಇನ್ನಿತರ ಅಪರಾಧ ಚಟುಟಿಕೆಯ ಪ್ರಸ್ತಾಪ ಕುರಿತು ಅಪ್ಪಚ್ಚು ರಂಜನ್ ಅವರ ಜತೆ ಧ್ವನಿಗೂಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications