ಬೌರಿಂಗ್ ಇನ್ಸ್ಟಿಟ್ಯೂಟ್ನ ಲಾಕರ್ನಲ್ಲಿ ಭಾರಿ ಮೊತ್ತದ ಹಣ, ಚಿನ್ನದ ಬಿಸ್ಕತ್ತು ಪತ್ತೆ
ಬೆಂಗಳೂರು, ಜುಲೈ 21: ನಗರದ ಪ್ರತಿಷ್ಠಿತ ಬೌರಿಂಗ್ ಇನ್ಸ್ಟಿಟ್ಯೂಟ್ನ ಲಾಕರ್ಗಳಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದ್ದು ಆದಾಯ ತೆರಿಗೆ ಇಲಾಖೆ ಹೆಚ್ಚಿನ ತನಿಖೆ ಮಾಡುತ್ತಿದೆ.
ಗುಜರಾತ್ ಮೂಲದ ಫೈನಾನ್ಸಿಯರ್ ಹಾಗೂ ಉದ್ಯಮಿ ಅವಿನಾಶ್ ಎಂಬುವರು ಬಳಸುತ್ತಿದ್ದ ಮೂರು ಲಾಕರ್ಗಳಲ್ಲಿ 3.9 ಕೋಟಿ ನಗದು, ಹಲವು ಚಿನ್ನದ ಬಿಸ್ಕತ್ತುಗಳು, ಒಡವೆಗಳು ಹಾಗೂ ಕೋಟ್ಯಂತರ ಮೌಲ್ಯದ ಆಸ್ತಿಯ ದಾಖಲೆಗಳು ದೊರೆತಿವೆ.
ಬೌರಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಒಟ್ಟು 126 ಲಾಕರ್ಗಳಿವೆ, ಇವುಗಳನ್ನು ಯಾರೂ ಸರಿಯಾಗಿ ಬಳಸುತ್ತಿರಲಿಲ್ಲ, ಹಾಗಾಗಿ ಆಡಳಿತ ಮಂಡಳಿಯು ಎಲ್ಲಾ ಲಾಕರ್ ಮಾಲೀಕರಿಗೆ ಪತ್ರ ಬರೆದು ಲಾಕರ್ ಪರಿಶೀಲಿಸುವಂತೆ ತಿಳಿಸಿತ್ತು. ಹೀಗಾಗಿ ಎಲ್ಲಾ ಲಾಕರ್ಗಳ ಮಾಲೀಕರು ಲಾಕರ್ ತೆರೆಯಲು ಬಂದಿದ್ದರು ಆದರೆ ಮೂರು ಲಾಕರ್ಗಳ ಮಾಲೀಕರು ಮಾತ್ರ ಬಂದಿರಲಿಲ್ಲ.

ಇದರಿಂದ ಮತ್ತೆ ನೊಟೀಸ್ ನೀಡಿದ ಆಡಳಿತ ಮಂಡಳಿ ಸಮಯದ ಗಡುವು ನೀಡಿ, ಗಡುವು ಮುಗಿಯುವದರ ಒಳಗೆ ಬಂದು ಲಾಕರ್ ತೆಗೆದುಕೊಳ್ಳುವಂತೆ ತಿಳಿಸಿತ್ತು. ಗಡುವು ಮುಗಿದ ನಂತರ ನಾವೇ ಲಾಕರ್ ತೆಗೆಯುವುದಾಗಿಯೂ ಹೇಳಿತ್ತು.
ಲಾಕರ್ಗಳ ಮಾಲೀಕ ಅವಿನಾಶ್ ಬರದ ಕಾರಣ ತಾವೇ ಲಾಕರ್ ಒಡೆದ ಆಡಳಿತ ಸಿಬ್ಬಂದಿ ಅವಕ್ಕಾಗುವಂತೆ ಭಾರಿ ಮೊತ್ತದ ಹಣ ಹಾಗೂ ಚಿನ್ನದ ಬಿಸ್ಕೆಟ್ಗಳು ಕಣ್ಣಿಗೆ ಬಿದ್ದಿವೆ. ಕೂಡಲೇ ಆಡಳಿತ ಮಂಡಳಿಯು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದೆ.
ಲಾಕರ್ನಲ್ಲಿ ಸಿಕ್ಕ ಹಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಆದಾಯ ತೆರಿಗೆ ಅಧಿಕಾರಿಗಳು, ಈ ಲಾಕರ್ ಅವಿನಾಶ್ ಅವರದ್ದೆಯಾ ಅಥವಾ ಬೇರೆ ಯಾರಾದರೂ ಬಳಸುತ್ತಿದ್ದರಾ ಎಂದು ತನಿಖೆ ಮಾಡುತ್ತಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications