ಕಬ್ಬನ್ ಉದ್ಯಾನ ನಿಶ್ಯಬ್ದ ವಲಯ: ಹಾರ್ನ್ ಮಾಡಿದರೆ ಸವಾರರಿಗೆ ದಂಡ!
ಬೆಂಗಳೂರು, ನವೆಂಬರ್ 16: ಬೆಂಗಳೂರು ಹೃದಯ ಭಾಗದಲ್ಲಿರುವ ಕಬ್ಬನ್ ಉದ್ಯಾನವನನ್ನು 'ನಿಶ್ಯಬ್ದ ವಲಯ'ವೆಂದು ಈ ಮೊದಲೇ ಘೋಷಿಸಲಾಗಿತ್ತು. ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆ ಅದನ್ನು ಈಗ ಉದ್ಯಾನದಲ್ಲಿ ಜಾರಿಗೆ ತರಲು ಮುಂದಾಗಿದೆ.
'ನಿಶ್ಯಬ್ದ ವಲಯ' ಜಾರಿಯಾದ ನಂತರ ಕಬ್ಬನ್ ಉದ್ಯಾನದ ಆವರಣದಲ್ಲಿ ಸಂಚಾರಿಸುವಾಗ ವಾಹನಗಳ ಹಾರ್ನ್ ಹೊಡೆಯವುದು ನಿಷೇಧವಾಗಲಿದೆ. ಒಂದು ವೇಳೆ ಹಾರ್ನ್ ಹೊಡೆದವರು ಸವಾರರು ದಂಡ ತೆರಬೇಕಾಗುತ್ತದೆ.
ತೋಟಗಾರಿಕೆ ಇಲಾಖೆಯು 2020ರಲ್ಲಿ ಉದ್ಯಾನವನ್ನು ನಿಶ್ಯಬ್ದ ವಲಯವನ್ನಾಗಿ ಘೋಷಿಸಿತ್ತು. ಅದೇ ವರ್ಷ ಕೋವಿಡ್ ಉಲ್ಬಣಿಸಿದ್ದರಿಂದ ಈ ಘೋಷಣೆ ಎರಡು ವರ್ಷಗಳ ಕಾಲ ಘೋಷಣೆಯಾಗೇ ಉಳಿಯಿತು. ಹೀಗಾಗಿ ಯೋಜನೆ ಅನುಷ್ಠಾನ ಗಂಭೀರವಾಗಿ ಪರಿಗಣಿಸಲು ಆಗಿರಲಿಲ್ಲ. ಸದ್ಯ ಕೋವಿಡ್ ಭೀತಿ ಕಡಿಮೆಯಾಗಿದ್ದರಿಂದ ತೋಟಗಾರಿಕೆ ಇಲಾಖೆ ಈಗ ಅನುಷ್ಠಾನಕ್ಕೆ ತರುತ್ತಿದೆ.

ಕಬ್ಬನ್ ಉದ್ಯಾನದ ಎಂಟು ಪ್ರವೇಶ ದ್ವಾರಗಳ ಸಮೀಪ ಹಾಗೂ ಉದ್ಯಾನದಲ್ಲಿನ ಕೇಂದ್ರ ಗ್ರಂಥಾಲಯ ಸೇರಿ 16 ನಿಗದಿತ ಪ್ರದೇಶದಲ್ಲಿ ನಿಶ್ಯಬ್ದ ವಲಯ ಎಂಬ ನಾಮಫಲಕಗಳನ್ನು ಅಳವಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಇದಾದ ಬಳಿಕ ಇಲಾಖೆ ಈ ಕುರಿತಂತೆ ತಿಂಗಳ ಕಾಲ ಜಾಗೃತಿ ಮೂಡಿಸಲಿದೆ.
ನಿಶ್ಯಬ್ದ ವಲಯದ ಬಗ್ಗೆ 1 ತಿಂಗಳು ಜಾಗೃತಿ
ಈ ಬಗ್ಗೆ ವಿವರಿಸಿದ ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್ ಉದ್ಯಾನ) ಎಚ್.ಟಿ. ಬಾಲಕೃಷ್ಣ ಅವರು, ಒಂದು ತಿಂಗಳ ನಂತರ ನಿಶ್ಯಬ್ದ ವಲಯ ಯೋಜನೆ ನಿಯಮಗಳು ಕಡ್ಡಾಯವಾಗಿ ಅನ್ವಯಿಸುತ್ತವೆ. ಆಗ ಉದ್ಯಾನದಲ್ಲಿ ವಾಹನ ಸವಾರರು ಹಾರ್ನ್ ಮಾಡಿದರೆ ಉಲ್ಲಂಘಿಸಿದಂಗಾಗುತ್ತದೆ. ಅದಕ್ಕಾಗಿ ಸವಾರರು ದಂಡ ತೆರಬೇಕಾಗುತ್ತದೆ ಎಂದರು.

ನಿತ್ಯ ಕಬ್ಬನ್ ಉದ್ಯಾನಕ್ಕೆ ಆಗಮಿಸುವ ವಾಯುವಿಹಾರಿಗಳು, ನಾಗರಿಕರು, ಪ್ರವಾಸಿಗರು ಹಾಗೂ ಮುಖ್ಯವಾಗಿ ಪಕ್ಷಿಗಳಿಗೆ ವಾಹನಗಳ ಹಾರ್ನ್ ಶಬ್ದದಿಂದ ಕಿರಿಕಿರಿ ಉಂಟಾಗುತ್ತದೆ. ಈ ಕುರಿತು ಸಾರ್ವಜನಿಕರಿಂದಲೂ ಅನೇಕ ದೂರುಗಳು ನೀಡಿದ್ದಾರೆ. ಇದನ್ನು ಪರಿಗಣಿಸಿ ಉದ್ಯಾನದಲ್ಲಿ ನಿಶ್ಯಬ್ದ ವಲಯ ಯೋಜನೆ ಜಾರಿಗೆ ತರಲು ನಗರ ಸಂಚಾರ ಪೊಲೀಸರೊಂದಿಗೆ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.
ಕಬ್ಬನ್ ಉದ್ಯಾನವು ಅನೇಕ ವಿಧದ ಪ್ರಾಣಿ-ಪಕ್ಷಿಗಳ ನೆಚ್ಚಿನ ತಾಣವಾಗಿದೆ. ವಾಹನಗಳ ಹಾರ್ನ್ ಕರ್ಕಶ ಶಬ್ದದಿಂದ ಪಕ್ಷಿಗಳು ಭಯಗೊಳ್ಳುತ್ತವೆ. ಉದ್ಯಾನದಲ್ಲಿರಲು ಅವುಗಳಿಗೆ ತೊಂದರೆ ಉಂಟು ಮಾಡಿದಂತಾಗುತ್ತದೆ. ಹೀಗಾಗಿ ಉದ್ಯಾನದ ಪ್ರಮುಖ ಸ್ಥಳ ಮತ್ತು ಹೆಚ್ಚು ವಾಹನಗಳು ಓಡಾಡುವ ಸ್ಥಳಗಳಲ್ಲಿ ನಿಶ್ಯಬ್ದ ವಾತಾವರಣ ನಿರ್ಮಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications