ಕಬ್ಬನ್ ಪಾರ್ಕಿನಲ್ಲಿ ವಾರದ ಆರು ದಿನ ವಾಹನ ಸಂಚಾರ
ಬೆಂಗಳೂರು, ಜೂನ್ 9: ಬೆಂಗಳೂರಿಗರ ಬಹುಮೆಚ್ಚಿನ ತಾಣವಾದ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿವಾದಾತ್ಮಕ ನಿರ್ಣಯಕ್ಕೆ ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸ್ ಇಲಾಖೆ ಕೈಹಾಕಿದೆ.
ಜನ-ವಾಹನ ದಟ್ಟಣೆಯ ಬೆಂಗಳೂರಿನಲ್ಲಿ ಶಾಂತವಾಗಿರುವ ಸ್ಥಳಗಳೇ ಕಡಿಮೆ. ಅಂಥಾದ್ದರಲ್ಲಿ ಕಬ್ಬನ್ ಪಾರ್ಕಿನಲ್ಲಿ ವಾರದ ಆರು ದಿನ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವುದು ಪರಿಸರ ಪ್ರೇಮಿಗಳಲ್ಲಿ ಆಕ್ರೋಶ ಹುಟ್ಟಿಸಿದೆ. ಈ ಕುರಿತು ತೋಟಗಾರಿಕೆ ಇಲಾಖೆಯ ಜೊತೆ ಚರ್ಚಿಸದೆ, ಸಂಚಾರ ಪೊಲೀಸ್ ಇಲಾಖೆ ನಿರ್ಧಾರ ತೆಗೆದುಕೊಂಡಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.
[ಕಬ್ಬನ್ ಪಾರ್ಕಿನಲ್ಲಿ ಹೆಚ್ಚಿದ ಮಾಲಿನ್ಯ, ನಾಲ್ಕು ಮಾರ್ಗ ಬಂದ್?]

ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಕಬ್ಬನ್ ಪಾರ್ಕ್ ಮತ್ತು ಸಸ್ಯಕಾಶಿ ಲಾಲ್ ಬಾಗಿನಲ್ಲಿ ರಾತ್ರಿ ಮನರಂಜನೆಗೆ ಅವಕಾಶ ನೀಡುವ ಬಗ್ಗೆ ಚಿಂತಿಸಿತ್ತು. ಆಗಲೂ ಪರಿಸರ ಪ್ರೇಮಿಗಳು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಆ ಸುದ್ದಿ ತಣ್ಣಗಾಗುವ ಮೊದಲೇ ಕಬ್ಬನ್ ಪಾರ್ಕ್ ಇದೀಗ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ.
[ಕಬ್ಬನ್ ಪಾರ್ಕ್, ಲಾಲ್ ಬಾಗ್ ನಲ್ಲಿ ರಾತ್ರಿ ಮನರಂಜನೆ ಬೇಕಾ?]
ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ ಕಲಂ 3 ರ ಪ್ರಕಾರ ಪೊಲೀಸ್ ಇಲಾಖೆ ವಾಹನ ಪ್ರವೇಶಕ್ಕೆ ಅವಕಾಶ ನೀಡಿದೆ.
ಕಬ್ಬನ್ ಪಾರ್ಕ್ ಸುತ್ತಮುತ್ತಲಿನ ಕ್ವೀನ್ಸ್ ರಸ್ತೆ, ಡಾ.ಅಂಬೇಡ್ಕರ್ ಬೀದಿ, ನೃಪತುಂಗ ರಸ್ತೆ, ಕಬ್ಬನ್ ರಸ್ತೆ, ಕಸ್ತೂರ್ ಬಾ ರಸ್ತೆ, ವಿಠಲ್ ಮಲ್ಯ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ವಿಧಾನಸೌಧಕ್ಕೆ ತೆರಳುವ ವಿಐಪಿಗಳಿಗೂ ಉಪಯೋಗವಾಗಲಿದೆ.
ಕಬ್ಬನ್ ಪಾರ್ಕಿನಲ್ಲಿ ಭಾನುವಾರ ಹೊರತು ಪಡಿಸಿ ಉಳಿದ ಎಲ್ಲಾ ದಿನ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದೇ ಆದರೆ ಇಲ್ಲಿನ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಪರಿಸರ ಪ್ರೇಮಿಗಳಿ ಪ್ರತಿಭಟನೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
[ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರ ನಿಷೇಧ]
ಇಷ್ಟು ದಿನ ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ ಇಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಇಲ್ಲಿ ಆರೂ ದಿನ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಅಧಿಕಾರ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಇರುವುದರಿಂದ ಇಲಾಖೆಯೇ ಈ ನಿರ್ಧಾರ ಕೈಗೊಂಡಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications