ದೊಡ್ಡ ಬೇಟೆ: ಜೆಟ್ ಪಂಪ್ ನಲ್ಲಿ ಸಾಗಿಸುತ್ತಿದ್ದ 33 ಕೇಜಿ ಚಿನ್ನ ವಶಕ್ಕೆ
ಬೆಂಗಳೂರು, ಡಿಸೆಂಬರ್ 23: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 33 ಕೇಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಎಷ್ಟು ಗೊತ್ತಾ? 9.4 ಕೋಟಿ ರುಪಾಯಿ. ಜೆಟ್ ಪಂಪ್ ನೊಳಗಿಟ್ಟು ದುಬೈನಿಂದ ಸಾಗಣೆ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತಪಾಸಣೆ ವೇಳೆ ಜೆಟ್ ಪಂಪ್ ಗಳನ್ನು ಬಿಡಿಸಿ ನೋಡಿದಾಗ ಒಳಗೆ ಎಲೆಕ್ಟ್ರಿಕ್ ವಸ್ತುವಂಥದ್ದು ಪತ್ತೆಯಾಗಿದೆ. ಅದರ ಜತೆ ಚಿನ್ನದ ಮೌಲ್ಡಿಂಗ್ ಮಾಡಿರುವುದು ತಿಳಿದುಬಂದಿದೆ. ಇಪ್ಪತ್ತೆರಡು ಕ್ಯಾರಟ್ ನ ಚಿನ್ನವನ್ನು ಕರಗಿಸಿ ಆ ನಂತರ ಪಂಪ್ ನೊಳಗೆ ಸೇರಿಸಿದ್ದಾರೆ. ಅದು ಚಿನ್ನ ಎಂದು ಗೊತ್ತಾಗದಿರಲಿ ಎಂದು ಪೇಂಟ್ ಮಾಡಿದ್ದಾರೆ.

ಈ ವರ್ಷದಲ್ಲಿ ವಶಪಡಿಸಿಕೊಳ್ಳಲಾದ ಅತಿ ದೊಡ್ಡ ಪ್ರಮಾಣದ ಚಿನ್ನವಿದು. ದುಬೈನಿಂದ ಬಂದ ಈ ಸರಕನ್ನು ಇಲ್ಲಿ ಯಾರು ಪಡೆಯುತ್ತಿದ್ದರು ಎಂಬುದರ ಪತ್ತೆ ಮಾಡಲಾಗುತ್ತಿದೆ. ಆದರೆ ಕಾರ್ಗೋ ವಿಭಾಗದಲ್ಲೇ ಇರುವ ಈ ಚಿನ್ನ ಯಾರಿಗೆ ಸೇರಬೇಕಾಗಿತ್ತು ಎಂಬುದು ತಿಳಿದುಬಂದಿಲ್ಲ. ಇನ್ನು ಇಂಥ ಎಷ್ಟು ಜೆಟ್ ಪಂಪ್ ಗಳಿದ್ದವು ಎಂಬ ವಿಚಾರವನ್ನು ಅಧಿಕಾರಿಗಳು ಬಾಯಿ ಬಿಟ್ಟಿಲ್ಲ.
ಆದರೆ, ಮೂಲಗಳ ಪ್ರಕಾರ ಗಲ್ಫ್ ನಲ್ಲಿ ಪ್ರಬಲವಾಗಿ ಬೇರು ಬಿಟ್ಟಿರುವ ಹಾಗೂ ಬೆಂಗಳೂರಿನಲ್ಲಿ ನಂಟು ಹೊಂದಿರುವ ಕೇರಳ ಕಳ್ಳ ಸಾಗಾಣಿಕೆದಾರರ ಕೆಲಸ ಇದು. "ಈ ತಂಡ ದುಬೈನಲ್ಲಿ ವರ್ಕ್ ಶಾಪ್ ಇಟ್ಟುಕೊಂಡಿದ್ದು, ಅಲ್ಲಿ ಕೆಲಸ ಮಾಡುವವರು ಚಿನ್ನವನ್ನು ಕರಗಿಸಿ, ಇಸ್ತ್ರಿ ಪೆಟ್ಟಿಗೆ, ಮೈಕ್ರೋವೇವ್ ಓವನ್ ಸೇರಿದಂತೆ ವಿವಿಧ ವಸ್ತುಗಳನ್ನು ಮಾಡಿ ಭಾರತ ಸೇರಿದಂತೆ ವಿವಿಧೆಡೆ ಕಳಿಸುತ್ತಾರೆ. ಚಿನ್ನದ ಬಿಸ್ಕತ್ ಸಾಗಣೆಗಿಂತ ಇದು ಸುಲಭ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications