ಬೆಂಗಳೂರು ರಾಜಕೀಯ : ಮಹದೇವಪ್ಪ ಚಿತ್ತ ರಾಮನ್ ನಗರದತ್ತ!
ಬೆಂಗಳೂರು, ಡಿಸೆಂಬರ್ 27 : 2018ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ರಾಜ್ಯದ ಪ್ರಭಾವಿ ಸಚಿವರೊಬ್ಬರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.
ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ ಸಿ.ವಿ.ರಾಮನ್ ನಗರವೂ ಒಂದು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತ ಮತ್ತು ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಕ್ಷೇತ್ರದಿಂದ ಪಿ.ರಮೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿಯೂ ಅವರು ಟಿಕೆಟ್ ಆಕಾಂಕ್ಷಿ. ಆದರೆ, ಎಚ್.ಸಿ.ಮಹದೇವಪ್ಪ ಪ್ರಭಾವಿ ಸಚಿವರು, ಸಿದ್ದರಾಮಯ್ಯ ಅವರ ಆಪ್ತರು. ಅವರ ವಿರುದ್ಧ ಹೋರಾಡಿ ಟಿಕೆಟ್ ಪಡೆಯುವುದು ಕಷ್ಟ.
ಎಚ್.ಸಿ.ಮಹದೇವಪ್ಪ ಅವರು ತಿ.ನರಸೀಪುರ ಕ್ಷೇತ್ರದ ಹಾಲಿ ಶಾಸಕರು. ಮುಂದಿನ ಚುನಾವಣೆಯಲ್ಲಿ ಕ್ಷೇತ್ರವನ್ನು ಮಗ ಸುನೀಲ್ ಬೋಸ್ ಅವರಿಗೆ ಬಿಟ್ಟುಕೊಟ್ಟು ಸಿ.ವಿ.ರಾಮನ್ ನಗರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂಬುದು ಸದ್ಯದ ಸುದ್ದಿ. ಮುಂದೇನಾಗುತ್ತದೆ? ಎಂದು ಕಾದು ನೋಡಬೇಕು...

ಸ್ಥಳೀಯ ನಾಯಕರೇ ರಮೇಶ್ಗೆ ವಿರುದ್ಧ
ಪಿ.ರಮೇಶ್ ಅವರೂ ಈ ಬಾರಿಯೂ ಟಿಕೆಟ್ ಆಕಾಂಕ್ಷಿ. ಆದರೆ, ಸ್ಥಳೀಯ ನಾಯಕರೇ ರಮೇಶ್ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ಚುನಾವಣೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.

ಬ್ಯಾನರ್ನಲ್ಲಿ ಮಹದೇವಪ್ಪ ಅವರ ಫೋಟೋ
ಸಿ.ವಿ.ರಾಮನ್ ನಗರದಲ್ಲಿ ಕ್ರಿಸ್ಮಸ್ ಶುಭಾಶಯ ಕೋರಿ ಹಲವು ಬ್ಯಾನರ್ ಹಾಕಲಾಗಿತ್ತು. ಎಲ್ಲಾ ಬ್ಯಾನರ್ಗಳಲ್ಲಿ ಎಚ್.ಸಿ.ಮಹದೇವಪ್ಪ ಅವರ ಫೋಟೋ ಇತ್ತು. ಅವರು ಮುಂದಿನ ಅಭ್ಯರ್ಥಿ ಎಂದೇ ಬಿಂಬಿಸಲಾಗುತ್ತಿದೆ.

ಹೈಕಮಾಂಡ್ನಿಂದ ಹಸಿರು ನಿಶಾನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಥಳೀಯ ನಾಯಕರು ಎಚ್.ಸಿ.ಮಹದೇವಪ್ಪ ಅವರ ಪರವಾಗಿ ನಿಂತರೆ ಕಾಂಗ್ರೆಸ್ ಹೈಕಮಾಂಡ್ ಕ್ಷೇತ್ರದ ಟಿಕೆಟ್ ಅನ್ನು ಅವರಿಗೆ ನೀಡುವ ಸಾಧ್ಯತೆ ಇದೆ.

ಅಪ್ಪ-ಮಗನಿಗೆ ಟಿಕೆಟ್
ತಿ.ನರಸೀಪುರ ಕ್ಷೇತ್ರದ ಹಾಲಿ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಸಿ.ವಿ.ರಾಮನ್ ನಗರಕ್ಕೆ ಬಂದರೆ ಅವರ ಪುತ್ರ ಸುನೀಲ್ ಬೋಸ್ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಆದರೆ, ಅಪ್ಪ-ಮಗ ಇಬ್ಬರಿಗೂ ಟಿಕೆಟ್ ಸಿಗಲಿದೆಯೇ? ಕಾದು ನೋಡಬೇಕು.

ಜೆಡಿಎಸ್ ಅಭ್ಯರ್ಥಿ ಪ್ರಬಲವಾಗಿದ್ದಾರೆ
ಸಿ.ವಿ.ರಾಮನ್ ನಗರದಲ್ಲಿ 2013ರ ಚುನಾವಣೆಯಲ್ಲಿ ಬಿಜೆಪಿಯ ಎಸ್.ರಾಘು 53,444 ಮತಗಳನ್ನು ಪಡೆದು ಜಯಗಳಿಸಿದ್ದರು. ಪಿ.ರಮೇಶ್ 44,982 ಮತಗಳನ್ನು ಪಡೆದಿದ್ದರು. ಜೆಡಿಎಸ್ನ ಜೆ.ಹೇಮಲತಾ ಸುರೇಶ್ ರಾಜ್ 3,179 ಮತಗಳನ್ನು ಪಡೆದು 3ನೇ ಸ್ಥಾನ ಪಡೆದಿದ್ದರು. (ಚಿತ್ರ : ಪಿ.ರಮೇಶ್)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications