ಬೆಂಗಳೂರಿನ ಈ ಏರಿಯಾದಲ್ಲಿ ಮೇ 9ರಂದು ಕಾವೇರಿ ನೀರು ಬರಲ್ಲ!
ಬೆಂಗಳೂರು, ಮೇ 7: ಬೆಂಗಳೂರಿನಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಬಗ್ಗೆ ಜಲ ಮಂಡಳಿ ಪ್ರಕಟಿಸಿದೆ. ಕಾವೇರಿ 3ನೇ ಹಂತದ ಕುಡಿಯುವ ನೀರು ಪೂರೈಕೆಯಾಗುವ ಬಡಾವಣೆಗಳಲ್ಲಿ ಸೋಮವಾರದಂದು ಕಾವೇರಿ ನೀರು ಸರಬರಾಜು ಇರುವುದಿಲ್ಲ.
ಸೋಮವಾರ(ಮೇ 9) ಬೆಳಗ್ಗೆ 3 ಗಂಟೆಯಿಂದ ರಾತ್ರಿ 9 ಗಂಟೆಗಳ ತನಕ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿ ನೀರು ಪೂರೈಕೆಗಾಗಿ ಬೇಡಿಕೆ ಹೆಚ್ಚಾಗಿದ್ದರಿಂದ ಕಾವೇರಿ 1 ಹಾಗೂ 2ನೇ ಹಂತದ ನೀರು ಸರಬರಾಜು ಯೋಜನೆಗೆ ಪೂರಕವಾಗಿ 3ನೇ ಹಂತದ ಕಾಮಗಾರಿ ಜಾರಿಯಲ್ಲಿದೆ. ಕಾವೇರಿ ಮೂರನೇ ಹಂತದಿಂದ ಸುಮಾರು 300 ಎಂಎಲ್ಡಿ ನೀರು ಶುದ್ಧೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ.
3ನೇ ಹಂತದ ಕಾಮಗಾರಿಯ ಪೈಪ್ ಗಳಲ್ಲಿ ಸೋರಿಕೆ ಕಂಡು ಬಂದಿದ್ದು, ನೀರಿನ ಸೋರಿಕೆ ತಡೆಗಟ್ಟಲು ಜಲಮಂಡಳಿ ಕೈಗೆತ್ತಿಕೊಂಡಿದೆ. ಹೀಗಾಗಿ ನಗರದ ಕೆಲ ಪ್ರದೇಶಗಳಲ್ಲಿ ಒಂದು ದಿನದ ಮಟ್ಟಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಯಾವ ಏರಿಯಾಗಳಲ್ಲಿ ಪೂರೈಕೆ ವ್ಯತ್ಯಯ: ಗಾಂಧಿನಗರ, ವಸಂತನಗರ, ಸಂಪಂಗಿರಾಮ ನಗರ, ಕಾಟನ್ ಪೇಟೆ, ಟೌನ್ ಹಾಲ್, ಧರ್ಮರಾಯ ದೇವಸ್ಥಾನ ವಾರ್ಡ್, ಚಿಕ್ಕಪೇಟೆ, ಸೇಂಟ್ ಜಾನ್ ರಸ್ತೆ, ಹೇನ್ಸ್ ರಸ್ತೆ, ಕಾಮರಾಜ ರಸ್ತೆ, ಕಾಕ್ಸ್ ಟೌನ್, ಶಿವಾಜಿ ನಗರ, ಫ್ರೇಜರ್ ಟೌನ್, ಬ್ಯಾಡರಹಳ್ಳಿ, ಲಿಂಗಾರಾಜಪುರ, ಹಡ್ಸನ್ ರಸ್ತೆ, ಡಿ.ಜೆ ಹಳ್ಳಿ, ನಾಗವಾರ, ಬಾಗಲೂರು, ಲಿಂಗರಾಜಪುರ, ಕೆ.ಜಿ ಹಳ್ಳಿ, ಬ್ಯಾಟರಾಯನಪುರ, ಗಿರಿ ನಗರ, ಚಾಮರಾಜಪೇಟೆ, ಶ್ರೀನಗರ, ಬನಶಂಕರಿ, ಯಶವಂತಪುರ, ಮಲ್ಲೇಶ್ವರ, ಶೇಷಾದ್ರಿಪುರ, ಜೆಸಿ ನಗರ, ಸದಾಶಿವನಗರ, ಡಾಲರ್ಸ್ ಕಲೋನಿ, ಆರ್ ಟಿ ನಗರ, ಶಾಂತಲಾ ನಗರ, ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾ ನಗರ 2ನೇ ಹಂತ, ಲಕ್ಷ್ಮಿಪುರ, ಜೀವನ್ ಬೀಮಾ ನಗರ, ಹಲಸೂರು, ಜೋಗುಪಾಳ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆ ಇರುವುದಿಲ್ಲ ಎಂದು ಬೆಂಗಳೂರು ಜಲ ಮಂಡಳಿ ಹೇಳಿದೆ.
Recommended Video
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications