ಎಟಿಎಂನಲ್ಲೇ ಬ್ಯಾಂಕ್ ಡಾಟಾ ಹ್ಯಾಕ್ ಮಾಡಿ ಬೆಂಗಳೂರಲ್ಲಿ ಸೈಬರ್ ದೋಖಾ
ಬೆಂಗಳೂರು, ಡಿ. 07: ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆದಾರರೇ ಎಚ್ಚರ! ಸ್ವಲ್ಪ ಯಾಮಾದರಿದರೂ ನಿಮ್ಮ ಖಾತೆಯಲ್ಲಿರುವ ಹಣ ಸೈಬರ್ ವಂಚಕರ ಪಾಲಾಗಬಹುದು.
ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಹೊಸ ಸೈಬರ್ ವಂಚನೆ ವರದಿಯಾಗಿದೆ. ಬ್ಯಾಂಕ್ ಅಧಿಕಾರಿಗಳೇ ಈ ವಂಚನೆ ಶೈಲಿ ನೋಡಿ ಬೆಚ್ಚಿ ಬಿದ್ದಿದ್ದಾರೆ. ಈ ಕುರಿತ ಸಮಗ್ರ ವರದಿ ಇಲ್ಲಿದೆ ನೋಡಿ..
ಸಾಮಾನ್ಯವಾಗಿ ಎಟಿಎಂ ಕೇಂದ್ರಗಳಲ್ಲಿ ಸ್ಕಿಮ್ಮಿಂಗ್ ಉಪಕರಣ ಬಳಿಸಿ ಎಟಿಎಂ ಕಾರ್ಡ್ ಬಳಕೆದಾರರ ಡಾಟಾ ಕದಿಯುತ್ತಿದ್ದರು. ಅದರ ಡಾಟಾ ಆಧಾರದ ಮೇಲೆ ನಕಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ತಯಾರಿಸಿ ವಂಚನೆ ಮಾಡುತ್ತಿದ್ದರು. ಇದೀಗ ಸೈಬರ್ ವಂಚಕರು ಹೊಸ ರೀತಿಯ ವಂಚನೆ ಹುಟ್ಟು ಹಾಕಿದ್ದಾರೆ. ಈ ವಂಚನೆ ಶೈಲಿ ಇಡೀ ಬ್ಯಾಂಕ್ ಸಿಬ್ಬಂದಿಯನ್ನೇ ಬೆಚ್ಚಿ ಬೀಳಿಸಿದೆ. ಬ್ಯಾಂಕ್ಗಳು ನಿರ್ವಹಣೆ ಮಾಡುತ್ತಿರುವ ಎಟಿಎಂ ಕಾರ್ಡ್ ಹೊಂದಿರುವ ಗ್ರಾಹಕರ ಡಾಟಾ ಹ್ಯಾಕ್ ಮಾಡಿ ಹಣವನ್ನು ಲಪಟಾಯಿಸುವ ಹೊಸ ಸೈಬರ್ ವಂಚನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಎಟಿಎಂ ಕೇಂದ್ರಗಳಲ್ಲಿ ಸ್ಕಿಮ್ಮಿಂಗ್ ಯಂತ್ರ ಬಳಿಸಿ ಡಾಟಾ ಕದ್ದು ನಕಲಿ ಕಾರ್ಡ್ ತಯಾರಿಸಿ ಮೋಸ ಮಾಡುತ್ತಿದ್ದ ಸೈಬರ್ ವಂಚಕರು ಇದೀಗ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಎಟಿಎಂ ಸೆಂಟರ್ಗಳ ಡಾಟಾ ಕದಿಯುವ ತಂತ್ರಜ್ಞಾನ ಬಳಿಸಿ ಎಟಿಎಂ ಕಾರ್ಡ್ ಬಳಕೆದಾರರ ವಿವರಗಳನ್ನು ಹ್ಯಾಕ್ ಮಾಡಿ ವಂಚನೆ ಮಾಡುತ್ತಿರುವ ಹೊಸ ಶೈಲಿಯ ವಂಚನೆ ಹುಟ್ಟು ಹಾಕಿದ್ದಾರೆ. ಬೆಂಗಳೂರಿನ ಗಾಂಧಿನಗರ ಮತ್ತು ಕೆ.ಜಿ. ರಸ್ತೆಯಲ್ಲಿರುವ ಎಸ್ಬಿಐ ಎರಡು ಎಟಿಎಂ ಕೇಂದ್ರಗಳಲ್ಲಿ 13.50 ಲಕ್ಷ ರೂ. ವಂಚನೆ ಮಾಡಲಾಗಿದೆ. ಎಸ್ಬಿಐ ಬ್ಯಾಂಕ್ ಮುಖ್ಯ ಅಧಿಕಾರಿ ನೀಡಿರುವ ದೂರಿನ ಮೇರೆಗೆ ಪಶ್ಚಿಮ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸಲಾಗಿದೆ. ಹೊಸ ರೀತಿಯ ಸೈಬರ್ ವಂಚಕರ ಜಾಡು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ.
ಎರಡು ಎಟಿಎಂ ಕೇಂದ್ರಗಳ ಸಿಸಿಟಿವಿ ದೃಶ್ಯ ಸಂಗ್ರಹಿಸಿ ತನಿಖೆ ನಡೆಸುತ್ತಿದ್ದು, ವಿನೂತನ ಉಪಕರಣ ಬಳಿಸಿ ಎಟಿಎಂ ಕೇಂದ್ರಗಳಲ್ಲಿ ಎಟಿಎಂ ಬಳಕೆದಾರರ ಡಾಟಾ ಹ್ಯಾಕ್ ಮಾಡಿ ಹಣ ಎಗರಿಸಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹೊಸ ಮಾದರಿಯ ಸೈಬರ್ ವಂಚನೆ ನೋಡಿ ಪೊಲೀಸರೇ ಗಾಬರಿಯಾಗಿದ್ದಾರೆ.

ಹೊಸ ಮಾದರಿ ಸೈಬರ್ ವಂಚಕರು ಬೆಂಗಳೂರಲ್ಲಿ ಬಂಧನ:
ಸೈಬರ್ ವಂಚಕರ ಸ್ವರ್ಗ ಎಂದರೆ ಜಾರ್ಖಂಡ್ ನ ಜಾಮತಾರ ನಿವಾಸಿಗಳು. ಜಾಮ್ ತರ ಸೈಬರ್ ವಂಚಕರ ತಾಣ. ದೇಶದಲ್ಲಿರುವ ಎಲ್ಲಾ ಬ್ಯಾಂಕ್ಗಳ ಸಹಾಯವಾಣಿ ನಂಬರ್ಗಳಿಗೆ ಹೊಸ ವೆಬ್ ಲಿಂಕ್ ಸೃಷ್ಟಿಸಿ ಆನ್ಲೈನ್ ನಲ್ಲಿ ಹಣ ಎಗರಿಸುವ ಮಟ್ಟಿಗೆ ನಿಸ್ಸೀಮರಾಗಿದ್ದಾರೆ. ಇತ್ತೀಚೆಗೆ ಸಾಕಷ್ಟು ಫ್ಲಿಪ್ ಕಾರ್ಟ್, ಅಮೆಜಾನ್ ನಂತಹ ವೆಬ್ ತಾಣಗಳಿಗೆ ಸಂಬಂಧಪಟ್ಟಂತೆ ನಕಲಿ ವೆಬ್ ತಾಣ ಸೃಷ್ಟಿಸಿ ಗ್ರಾಹಕರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು. ಸುಮಾರು ಒಂದು ಸಾವಿರಕ್ಕೂ ಅಧಿಕ ಮಂದಿಗೆ ವಂಚನೆ ಮಾಡಿದ್ದ ಜಾರ್ಖಂಡ್ ಮೂಲದ ಜಾಮ್ತಾರಾ ಸೈಬರ್ ಗ್ಯಾಂಗ್ನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದರು. ಆನ್ಲೈನ್ ನಲ್ಲಿ ಶಾಪಿಂಗ್ ಮಾಡುವ ಗ್ರಾಹಕರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದ ಈ ಗ್ಯಾಂಗ್ ಬೆಂಗಳೂರಿನಲ್ಲಿ ನೆಲೆಯೂರಿತ್ತು. ಈ ಗ್ಯಾಂಗ್ ಬಂಧನದ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಹೊಸ ರೀತಿಯ ಸೈಬರ್ ವಂಚನೆ ಬೆಳಕಿಗೆ ಬಂದಿದ್ದು, ಜಾಮ್ ತಾರಾ ಸೈಬರ್ ವಂಚಕರ ಕೈಚಳಕವೇ ಇರಬಹುದಾ ಎಂಬ ಅನುಮಾನ ವ್ಯಕ್ತವಾಗಿದೆ.
Recommended Video
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications