Breaking: ಕ್ರಿಪ್ಟೋ ಕರೆನ್ಸಿಯಲ್ಲಿ ಲಾಭಗಳಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ
ಬೆಂಗಳೂರು, ಸೆಪ್ಟೆಂಬರ್ 30: ಕ್ರಿಪ್ಟೋ ಕರೆನ್ಸಿ ಎನ್ನುವುದು ಸದ್ಯ ಜಾಗತಿಕ ಮಟ್ಟದ ಸೆನ್ಸೇಷನ್. ಕ್ರಿಪ್ಟೋ ಕರೆನ್ಸಿ ಮೇಲಿನ ಕುತೂಹಲವನ್ನೇ ಬಂಡವಾಳವನ್ನಾಗಿಸಿಕೊಂಡು ಲಾಭ ಗಳಿಸಿಕೊಡುವುದಾಗಿ ಬ್ಯಾಂಕ್ ಖಾತೆ, ಸಿಮ್ ಕಾರ್ಡ್ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಹಣ ಎಂದರೆ ಸಾಕು ಹೆಣ ಕೂಡ ಬಾಯಿ ಬಿಡುತ್ತೆ ಅಂತಾರೆ. ಹಣ ಬರುವಂತೆ ಮಾಡುತ್ತೇವೆ. 0% ಇನ್ವೆಸ್ಟ್ಮೆಂಟ್ ಅಂತೆಲ್ಲಾ ಹೇಳಿದರೆ ಜನರು ತಾವಾಗಿಯೇ ಹಳ್ಳಕ್ಕೆ ಬೀಳುತ್ತಾರೆ. ಹಣದ ಆಸೆಯೇ ಮೋಸಹೋಗುವಂತೆ ಮಾಡಿಬಿಡುತ್ತದೆ. ಅದೇ ರೀತಿಯಲ್ಲೇ ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಠಾಣಾ ಪೊಲೀಸರು ಕೇರಳ ಮೂಲದ ಶಾನೀದ್ ಅಬ್ದುಲ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಕ್ರಿಪ್ಟೋಯಲ್ಲಿ ಹೂಡಿಕೆ ಮಾಡಿ ಲಾಭಮಾಡಿಕೊಡುವುದಾಗಿ ಹೇಳಿ ಸಿಮ್ ಆಕೌಟ್ ನಂಬರ್, ಚೆಕ್ ಪಡೆದು ಮೋಸವನ್ನು ಮಾಡುತ್ತಿದ್ದ. ಈತನ ಸಹಚರ ಮತ್ತೊಬ್ಬ ಆರೋಪಿ ಮೊಹಮ್ಮದ್ ನಿಹಾಲ್ ಎಂಬಾತ ತಲೆಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ತೀವ್ರ ಹುಡುಕಾಟವನ್ನು ನಡೆಸಿದ್ದಾರೆ.
ಟೆಲಿಗ್ರಾಂನಲ್ಲಿ ಗ್ರೂಪ್ ಮಾಡಿಕೊಂಡಿದ್ದ ಆರೋಪಿ
ಟೆಲಿಗ್ರಾಂನಲ್ಲಿ ಗ್ರೂಪ್ ಮಾಡಿಕೊಂಡಿದ್ದ ಆರೋಪಿ ಬೇರೆ ಜನರಿಗೆ ಗ್ರೂಪ್ ಲಿಂಕ್ ಕಳಿಸಿ ಜಾಯಿನ್ ಮಾಡಿಸುತ್ತಿದ್ದ. ಬಳಿಕ ನೀವು ನಿಮ್ಮ ಕರೆಂಟ್ ಅಕೌಂಟಿನ ಡೆಬಿಟ್ ಕಾರ್ಡ್/ಚೆಕ್ ಬುಕ್ ಮತ್ತು ಸಿಮ್ ಕಾರ್ಡ್ ನೀಡಿದರೆ ನಿಮ್ಮ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಿ ಕೊಡುವುದಾಗಿ ನಂಬಿಸುತ್ತಿದ್ದ. ಬಳಿಕ ಅಕೌಂಟಿನಲ್ಲಿದ್ದ ಹಣವನ್ನು ವರ್ಗಾಯಿಸಿಕೊಂಡು ವಂಚಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದು ಬಂದಿದೆ.

222 ಸಿಮ್ ಕಾರ್ಡುಗಳು, 10 ಮೊಬೈಲ್ ವಶಕ್ಕೆ
ಸದ್ಯ ಆರೋಪಿಯನ್ನು ಬಂಧಿಸಿರುವ ಸಿಇಎನ್ ಪೊಲೀಸರು ಬಂಧಿತನಿಂದ ಬರೊಬ್ಬರಿ 222 ಸಿಮ್ ಕಾರ್ಡುಗಳು, 10 ಮೊಬೈಲ್ ಫೋನ್ಗಳು, 10 ಡೆಬಿಟ್ ಕಾರ್ಡುಗಳು, ಬ್ಯಾಂಕ್ ಪಾಸ್ ಬುಕ್, ಚೆಕ್ ಬುಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಮತ್ತೊರ್ವ ಆರೋಪಿ ಎಸ್ಕೇಪ್ ಅಗಿದ್ದು ಪತ್ತೆ ಕಾರ್ಯ ಮುಂದುವರೆದಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications