ಸಚಿವ, ಶಾಸಕರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚನೆಗೆ ಯತ್ನ!
ಬೆಂಗಳೂರು, ಫೆಬ್ರವರಿ 19: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆಗೆದು ತುರ್ತು ಹಣ ಬೇಕಾಗಿದೆ ಎಂದು ಎತ್ತುವಳಿ ಮಾಡಿದ್ದ ಸೈಬರ್ ಕಳ್ಳರ ಕಣ್ಣು ಇದೀಗ ರಾಜಕಾರಣಿಗಳ ಮೇಲೆ ಬಿದ್ದಿದೆ. ರಾಜ್ಯದ ಪ್ರತಿಷ್ಠಿತ ರಾಜಕಾರಣಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವರ ಆಪ್ತರಿಗೆ ಹಣ ನೀಡುವಂತೆ ಮನವಿ ಮಾಡಿ ವಂಚನೆಗೆ ಯತ್ನಿಸಿದ್ದಾರೆ.
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬಕ್ ಖಾತೆ ತೆರೆದು ಅವರ ಸ್ನೇಹ ಕೂಟಕ್ಕೆ ಮನವಿ ಕಳಿಸಿದ್ದಾರೆ. ಬಹುತೇಕರು ನಕಲಿ ಖಾತೆ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ್ದಾರೆ. ಆನಂತರ ನಿನ್ನ ಬಳಿ ಗೂಗಲ್ ಪೇ ಅಥವಾ ಪೋನ್ ಪೇ ಇದೆಯಾ ಅ? ಅರ್ಜೆಂಟಾಗಿ ಸ್ವಲ್ಪ ಹಣ ಕಳುಹಿಸು ಎಂದು ಮನವಿ ಮಾಡಿದ್ದಾರೆ. ಯು.ಬಿ. ವೆಂಕಟೇಶ್ ಚಿಲ್ಲರೆ ಕಾಸು ಗೂಗಲ್ ಪೇ ನಲ್ಲಿ ಹೇಗೆ ಕೇಳಲು ಸಾಧ್ಯ ಎಂದು ಅನುಮಾನಗೊಂಡು ಕೆಲವರು ಅವರಿಗೆ ಪೋನ್ ಮಾಡಿ ವಿಷಯ ತಿಳಿಸಿದ್ದಾರೆ. ಪರಿಶೀಲನೆ ನಡೆಸಿದಾಗ, ಯು.ಬಿ. ವೆಂಕಟೇಶ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆಗೆದು ಸಾಕಷ್ಟು ಮಂದಿಗೆ ಹಣ ನೀಡುವಂತೆ ಮೆಸೇಂಜರ್ ನಲ್ಲಿ ಸಂದೇಶ ಕಳಿಸಿರುವ ಸಂಗತಿ ಗೊತ್ತಾಗಿದೆ.

ಇದು ಗೊತ್ತಾದ ಕೂಡಲೇ ಯು.ಬಿ. ವೆಂಕಟೇಶ್ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ನಕಲಿ ಖಾತೆ ರದ್ದಾಗಿದ್ದು, ಯಾರಾದರೂ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡದಂತೆ ಅವರು ಫೇಸ್ ಬುಕ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇನ್ನು ನಕಲಿ ಫೇಸ್ ಬುಕ್ ಖಾತೆ ತೆರೆದು ಹಣ ಕೇಳಿರುವ ಬಗ್ಗೆ ಅವರೇ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಶಿಕ್ಷಣ ಸಚಿವರ ಹೆಸರಿನಲ್ಲಿ ಖಾತೆ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ಫೇಸ್ ಬುಕ್ ನಕಲಿ ಖಾತೆ ತೆರೆದು ಅವರ ಆಪ್ತ ವರ್ಗಕ್ಕೆ ಹಣ ನೀಡುವಂತೆ ಬೇಡಿಕೆ ಇಟ್ಟಿರುವ ಸಂಗತಿ ಕೂಡ ತಡವಾಗಿ ಬೆಳಕಿಗೆ ಬಂದಿದೆ. ಎಸ್. ಸುರೇಶ್ ಕುಮಾರ್ ಹೆಸರಿನಲ್ಲಿ ಖಾತೆ ತೆರೆದ ಸೈಬರ್ ಕಳ್ಳರು, ಅವರ ಭಾವ ಚಿತ್ರಗಳನ್ನು ಬಳಸಿದ್ದಾರೆ. ಸಾವಿರಾರು ಜನಕ್ಕೆ ಹಣ ಗೂಗಲ್ ಪೇ ಮಾಡುವಂತೆ ಮನವಿ ಮಾಡಿದ್ದಾರೆ. ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಸೈಬರ್ ಕಳ್ಳರ ವಿರುದ್ಧ ಕ್ರಮ ಜರುಗಸುವಂತೆ ಕೋರಿ ಸಿಐಡಿ ಸೈಬರ್ ವಿಭಾಗಕ್ಕೆ ಸುರೇಶ್ ಕುಮಾರ್ ದೂರು ನೀಡಿದ್ದಾರೆ.

ಹರಿಯಾಣ ಮೂಲ: ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅವರ ಆಪ್ತರಿಗೆ ವಂಚನೆ ಮಾಡಲು ಯತ್ನಿಸಿರುವ ಆರೋಪಿ ಹರಿಯಾಣ ಮೂಲದವ ಎಂಬುದು ಸಿಐಡಿ ಸೈಬರ್ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ನಕಲಿ ಖಾತೆ ತೆರೆದಿರುವ ಮಾಹಿತಿ ಜಾಲಾಡಿದಾಗ ಈ ಸಂಗತಿ ಹೊರ ಬಂದಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಇತ್ತೀಚೆಗೆ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅವರ ಸ್ನೇಹಿತರಿಗೆ ಹಣ ಕಳುಹಿಸುವಂತೆ ಸಂದೇಶ ರವಾನಿಸಿದ್ದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಪೊಲೀಸ್ ಅಧಿಕಾರಿಗಳೇ ಕಂಗಾಲಾಗಿದ್ದರು.ಇದೀಗ ಪ್ರತಿಷ್ಠಿತ ರಾಜಕಾರಣಿಗಳ ಸರಣಿ ಆರಂಭವಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications