ಸಚಿವ, ಶಾಸಕರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚನೆಗೆ ಯತ್ನ!
ಬೆಂಗಳೂರು, ಫೆಬ್ರವರಿ 19: ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆಗೆದು ತುರ್ತು ಹಣ ಬೇಕಾಗಿದೆ ಎಂದು ಎತ್ತುವಳಿ ಮಾಡಿದ್ದ ಸೈಬರ್ ಕಳ್ಳರ ಕಣ್ಣು ಇದೀಗ ರಾಜಕಾರಣಿಗಳ ಮೇಲೆ ಬಿದ್ದಿದೆ. ರಾಜ್ಯದ ಪ್ರತಿಷ್ಠಿತ ರಾಜಕಾರಣಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವರ ಆಪ್ತರಿಗೆ ಹಣ ನೀಡುವಂತೆ ಮನವಿ ಮಾಡಿ ವಂಚನೆಗೆ ಯತ್ನಿಸಿದ್ದಾರೆ.
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬಕ್ ಖಾತೆ ತೆರೆದು ಅವರ ಸ್ನೇಹ ಕೂಟಕ್ಕೆ ಮನವಿ ಕಳಿಸಿದ್ದಾರೆ. ಬಹುತೇಕರು ನಕಲಿ ಖಾತೆ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ್ದಾರೆ. ಆನಂತರ ನಿನ್ನ ಬಳಿ ಗೂಗಲ್ ಪೇ ಅಥವಾ ಪೋನ್ ಪೇ ಇದೆಯಾ ಅ? ಅರ್ಜೆಂಟಾಗಿ ಸ್ವಲ್ಪ ಹಣ ಕಳುಹಿಸು ಎಂದು ಮನವಿ ಮಾಡಿದ್ದಾರೆ. ಯು.ಬಿ. ವೆಂಕಟೇಶ್ ಚಿಲ್ಲರೆ ಕಾಸು ಗೂಗಲ್ ಪೇ ನಲ್ಲಿ ಹೇಗೆ ಕೇಳಲು ಸಾಧ್ಯ ಎಂದು ಅನುಮಾನಗೊಂಡು ಕೆಲವರು ಅವರಿಗೆ ಪೋನ್ ಮಾಡಿ ವಿಷಯ ತಿಳಿಸಿದ್ದಾರೆ. ಪರಿಶೀಲನೆ ನಡೆಸಿದಾಗ, ಯು.ಬಿ. ವೆಂಕಟೇಶ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆಗೆದು ಸಾಕಷ್ಟು ಮಂದಿಗೆ ಹಣ ನೀಡುವಂತೆ ಮೆಸೇಂಜರ್ ನಲ್ಲಿ ಸಂದೇಶ ಕಳಿಸಿರುವ ಸಂಗತಿ ಗೊತ್ತಾಗಿದೆ.

ಇದು ಗೊತ್ತಾದ ಕೂಡಲೇ ಯು.ಬಿ. ವೆಂಕಟೇಶ್ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ನಕಲಿ ಖಾತೆ ರದ್ದಾಗಿದ್ದು, ಯಾರಾದರೂ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡದಂತೆ ಅವರು ಫೇಸ್ ಬುಕ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇನ್ನು ನಕಲಿ ಫೇಸ್ ಬುಕ್ ಖಾತೆ ತೆರೆದು ಹಣ ಕೇಳಿರುವ ಬಗ್ಗೆ ಅವರೇ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಶಿಕ್ಷಣ ಸಚಿವರ ಹೆಸರಿನಲ್ಲಿ ಖಾತೆ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ಫೇಸ್ ಬುಕ್ ನಕಲಿ ಖಾತೆ ತೆರೆದು ಅವರ ಆಪ್ತ ವರ್ಗಕ್ಕೆ ಹಣ ನೀಡುವಂತೆ ಬೇಡಿಕೆ ಇಟ್ಟಿರುವ ಸಂಗತಿ ಕೂಡ ತಡವಾಗಿ ಬೆಳಕಿಗೆ ಬಂದಿದೆ. ಎಸ್. ಸುರೇಶ್ ಕುಮಾರ್ ಹೆಸರಿನಲ್ಲಿ ಖಾತೆ ತೆರೆದ ಸೈಬರ್ ಕಳ್ಳರು, ಅವರ ಭಾವ ಚಿತ್ರಗಳನ್ನು ಬಳಸಿದ್ದಾರೆ. ಸಾವಿರಾರು ಜನಕ್ಕೆ ಹಣ ಗೂಗಲ್ ಪೇ ಮಾಡುವಂತೆ ಮನವಿ ಮಾಡಿದ್ದಾರೆ. ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಸೈಬರ್ ಕಳ್ಳರ ವಿರುದ್ಧ ಕ್ರಮ ಜರುಗಸುವಂತೆ ಕೋರಿ ಸಿಐಡಿ ಸೈಬರ್ ವಿಭಾಗಕ್ಕೆ ಸುರೇಶ್ ಕುಮಾರ್ ದೂರು ನೀಡಿದ್ದಾರೆ.

ಹರಿಯಾಣ ಮೂಲ: ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅವರ ಆಪ್ತರಿಗೆ ವಂಚನೆ ಮಾಡಲು ಯತ್ನಿಸಿರುವ ಆರೋಪಿ ಹರಿಯಾಣ ಮೂಲದವ ಎಂಬುದು ಸಿಐಡಿ ಸೈಬರ್ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ನಕಲಿ ಖಾತೆ ತೆರೆದಿರುವ ಮಾಹಿತಿ ಜಾಲಾಡಿದಾಗ ಈ ಸಂಗತಿ ಹೊರ ಬಂದಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಇತ್ತೀಚೆಗೆ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅವರ ಸ್ನೇಹಿತರಿಗೆ ಹಣ ಕಳುಹಿಸುವಂತೆ ಸಂದೇಶ ರವಾನಿಸಿದ್ದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಪೊಲೀಸ್ ಅಧಿಕಾರಿಗಳೇ ಕಂಗಾಲಾಗಿದ್ದರು.ಇದೀಗ ಪ್ರತಿಷ್ಠಿತ ರಾಜಕಾರಣಿಗಳ ಸರಣಿ ಆರಂಭವಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications