ತಮಿಳುನಾಡಿನ ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ತುಂತುರು ಮಳೆ
ಬೆಂಗಳೂರು, ನವೆಂಬರ್ 30 : ತಮಿಳುನಾಡಿನ ಸೈಕ್ಲೋನ್ ಎಫೆಕ್ಟ್ ನಿಂದಾಗಿ ಮಹಾನಗರದ ಹವಾಮಾನದಲ್ಲೂ ಏರುಪೇರಾಗಿದೆ. ನಗರದಲ್ಲಿ ಹಲವು ದಿನಗಳಿಂದ ಮಂಜು ಕವಿದ ವಾತಾವರಣ ಸೃಷ್ಟಿಯಾಗಿದೆ. ಜತೆಗೆ ಚಳಿಯೂ ಕೂಡ ಪ್ರಾರಂಭವಾಗಿದೆ.
ನಗರದಲ್ಲಿ ಗುರುವಾರ ( ನ.30) ಬೆಳಗ್ಗೆ ಚಳಿ ಗಾಳಿಯ ಜತೆಗೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಜತೆಗೆ ವಾರಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ. ಡಿಸೆಂಬರ್ 2 ರವರೆಗೆ ಕನಿಷ್ಟ19 ಹಾಗೂ ಗರಿಷ್ಠ 27 ಡಿಗ್ರಿ ತಾಪಮಾನ ವಿರಲಿದೆ. ಈ ವಾತಾವರಣ ಮುಂಜಾನೆಯ ವಾಯು ವಿಹಾರಿಗಳು, ದೈಹಿಕ ಕಸರತ್ತು ಮಾಡುವವರಿಗೆ ಹಿತಕರವೆನಿಸಿ ಮತ್ತಷ್ಟು ಪ್ರಫುಲ್ಲತೆ ತಂದುಕೊಟ್ಟಿದೆ. ಕೆಲವರಿಗೆ ಕಿರಿಕಿರಿ ಎನಿಸಿದೆ. ಬೈಕ್ ಸವಾರಿ ಮಾಡಿಕೊಂಡು ಕಚೇರಿ, ಕ್ಷೇತ್ರ ಕಾರ್ಯಕ್ಕೆ ಹೊರಟವರಿಗೆ ತುಂತುರು ಮೂಡ್ ಔಟ್ ಮಾಡಿದೆ.
ಈಶಾನ್ಯ ಭಾಗದಿಂದ ತೇವಾಂಶಭರಿತ ಗಾಳಿ ಬೀಸುತ್ತಿರುವ ಪರಿಣಾಮ ರಾಜ್ಯದಲಲ್ಲಿ ಚಳಿಯ ಅನುಭವವಾಗುತ್ತಿದೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯುವ ಸಾಧ್ಯತೆ ಇದೆ.
ಮುಂಗಾರಿನಂತೆ ಹಿಂಗಾರು ಈ ಬಾರಿ ಭರ್ಜರಿಯಾಗಿ ಬರದಿದ್ದರೂ ಇದು ತಮಿಳುನಾಡಿನ ಸೈಕ್ಲೋನ್ ಎಫೆಕ್ಟ್ ಎನ್ನಲಾಗಿದೆ. ತಮಿಳುನಾಡಿನಲ್ಲಿ ಸೈಕ್ಲೋನ್ ನಿಂದ ಭಾರಿ ಮಳೆಯಾಗಿದೆ. ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮಹಾನಗರದ ಹವಾಮಾನದಲ್ಲಿನ ಏರುಪೇರು ತಮಿಳುನಾಡಿನ ಸೈಕ್ಲೋನ್ ಸೂಚನೆ ನೀಡುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಕನ್ಯಾಕುಮಾರಿ ಬಳಿ ಇದೆ. ಅರಬ್ಬೀ ಸಮುದ್ರದ ಕಡೆ ಚಲಿಸುತ್ತಿರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಆದರೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ತೀವ್ರ ವಾಯುಭಾರ ಕುಸಿತದಿಂದಾಗಿ ಕೇರಳ ಹಾಗೂ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಿದರು. ತಂಪಾದ ಮೇಲ್ಮೈ ಗಾಳಿ ಹೆಚ್ಚಾಗಿರುವುದರಿಂದ ಹಗಲಿನಲ್ಲೂ ಚಳಿ ಹೆಚ್ಚಾಗಿ ಕಂಡುಬರಲಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications