ವಾರ್ಧಾ ಎಫೆಕ್ಟ್: ಮಳೆಗೆ ತೋಯ್ದ ಗುಬ್ಬಚ್ಚಿಯಂತಾದ ಬೆಂಗಳೂರು
ವಾರ್ಧಾ ಚಂಡಮಾರುತ ಬೆಂಗಳೂರಿಗೂ ಮಳೆ-ಗಾಳಿ ತಂದಿದೆ. ಇನ್ನೆರಡು ದಿನ ಮನೆಯಿಂದ ಆಚೆ ಹೋಗುವಾಗ ಛತ್ರಿ ಜತೆಗಿರಲಿ. ವಾಹನ ಪಾರ್ಕಿಂಗ್ ಮಾಡುವಾಗ ಹುಷಾರ್. ತಗ್ಗಿನ ಪ್ರದೇಶದಲ್ಲಿರುವವರು ಕೂಡ ಎಚ್ಚರಿಕೆಯಿಂದ ಇರಿ.
ಬೆಂಗಳೂರು, ಡಿಸೆಂಬರ್ 13: ಸೋಮವಾರ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು ತೋಯ್ದ ಗುಬ್ಬಚ್ಚಿಯಂತಾಗಿದೆ. ವಾರ್ಧಾ ಚಂಡಮಾರುತ ಚೆನ್ನೈನಲ್ಲಿ ಸಾಮಾನ್ಯ ಬದುಕನ್ನು ಚೆಲ್ಲಾಪಿಲ್ಲಿ ಮಾಡಿದ್ದರೆ, ಅದರದೇ ಪರಿಣಾಮ ಬೆಂಗಳೂರು ನಗರದ ಮೇಲೂ ಆಗುತ್ತಿದ್ದು ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಮುಂದಿನ ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಭಾರಿ ಗಾಳಿ ಬೀಸಿ, ಮಳೆ ಆಗಬಹುದು. ನಗರದ ಕೆಲವು ಕಡೆ ಮರಗಳು ನೆಲಕ್ಕುರುಳಿವೆ. ಇನ್ನು ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಣ್ಣ ಪ್ರಮಾಣದ ಮಳೆ ಬಿದ್ದರೆ ಪತರಗುಟ್ಟುವ ಬೆಂಗಳೂರಿಗೆ ಈಗಿನ ಸನ್ನಿವೇಶ ಸವಾಲಾಗಿರುವುದು ಹೌದು. ಬಿಬಿಎಂಪಿ ಈ ಸ್ಥಿತಿಯನ್ನು ಹೇಗೆ ನಿರ್ವಹಿಸುತ್ತದೆ ಎಂಬುದು ಕೂಡ ಸದ್ಯದ ಪ್ರಶ್ನೆ.[ಕರ್ನಾಟಕಕ್ಕೂ ತಟ್ಟಿದ ವಾರ್ಧಾ ಚಂಡಮಾರುತ ಭೀತಿ!]

ಸೋಮವಾರ ಬಿಬಿಎಂಪಿ ತುರ್ತು ಸಭೆ ನಡೆಸಿದೆ. ಮರಗಳು ಬೀಳುವುದು ಮತ್ತಿತರೆ ಸಮಸ್ಯೆಗಳಾದಲ್ಲಿ ತಕ್ಷಣ ಪರಿಹಾರ ಕೈಗೊಳ್ಳಲು ಸಿದ್ಧರಿರಬೇಕು ಎಂದು ಸೂಚಿಸಲಾಗಿದೆ. ಬೆಂಗಳೂರು-ಚೆನ್ನೈ ಮಧ್ಯೆ ಸಂಚರಿಸುವ ಹಲವು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಕೆಲವು ವಿಮಾನಗಳ ಪ್ರಯಾಣವನ್ನು ಮಂಗಳವಾರಕ್ಕೆ ಬದಲಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications