ವಾರ್ಧಾ ಎಫೆಕ್ಟ್: ಮಳೆಗೆ ತೋಯ್ದ ಗುಬ್ಬಚ್ಚಿಯಂತಾದ ಬೆಂಗಳೂರು
ವಾರ್ಧಾ ಚಂಡಮಾರುತ ಬೆಂಗಳೂರಿಗೂ ಮಳೆ-ಗಾಳಿ ತಂದಿದೆ. ಇನ್ನೆರಡು ದಿನ ಮನೆಯಿಂದ ಆಚೆ ಹೋಗುವಾಗ ಛತ್ರಿ ಜತೆಗಿರಲಿ. ವಾಹನ ಪಾರ್ಕಿಂಗ್ ಮಾಡುವಾಗ ಹುಷಾರ್. ತಗ್ಗಿನ ಪ್ರದೇಶದಲ್ಲಿರುವವರು ಕೂಡ ಎಚ್ಚರಿಕೆಯಿಂದ ಇರಿ.
ಬೆಂಗಳೂರು, ಡಿಸೆಂಬರ್ 13: ಸೋಮವಾರ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು ತೋಯ್ದ ಗುಬ್ಬಚ್ಚಿಯಂತಾಗಿದೆ. ವಾರ್ಧಾ ಚಂಡಮಾರುತ ಚೆನ್ನೈನಲ್ಲಿ ಸಾಮಾನ್ಯ ಬದುಕನ್ನು ಚೆಲ್ಲಾಪಿಲ್ಲಿ ಮಾಡಿದ್ದರೆ, ಅದರದೇ ಪರಿಣಾಮ ಬೆಂಗಳೂರು ನಗರದ ಮೇಲೂ ಆಗುತ್ತಿದ್ದು ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಮುಂದಿನ ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಭಾರಿ ಗಾಳಿ ಬೀಸಿ, ಮಳೆ ಆಗಬಹುದು. ನಗರದ ಕೆಲವು ಕಡೆ ಮರಗಳು ನೆಲಕ್ಕುರುಳಿವೆ. ಇನ್ನು ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಣ್ಣ ಪ್ರಮಾಣದ ಮಳೆ ಬಿದ್ದರೆ ಪತರಗುಟ್ಟುವ ಬೆಂಗಳೂರಿಗೆ ಈಗಿನ ಸನ್ನಿವೇಶ ಸವಾಲಾಗಿರುವುದು ಹೌದು. ಬಿಬಿಎಂಪಿ ಈ ಸ್ಥಿತಿಯನ್ನು ಹೇಗೆ ನಿರ್ವಹಿಸುತ್ತದೆ ಎಂಬುದು ಕೂಡ ಸದ್ಯದ ಪ್ರಶ್ನೆ.[ಕರ್ನಾಟಕಕ್ಕೂ ತಟ್ಟಿದ ವಾರ್ಧಾ ಚಂಡಮಾರುತ ಭೀತಿ!]

ಸೋಮವಾರ ಬಿಬಿಎಂಪಿ ತುರ್ತು ಸಭೆ ನಡೆಸಿದೆ. ಮರಗಳು ಬೀಳುವುದು ಮತ್ತಿತರೆ ಸಮಸ್ಯೆಗಳಾದಲ್ಲಿ ತಕ್ಷಣ ಪರಿಹಾರ ಕೈಗೊಳ್ಳಲು ಸಿದ್ಧರಿರಬೇಕು ಎಂದು ಸೂಚಿಸಲಾಗಿದೆ. ಬೆಂಗಳೂರು-ಚೆನ್ನೈ ಮಧ್ಯೆ ಸಂಚರಿಸುವ ಹಲವು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಕೆಲವು ವಿಮಾನಗಳ ಪ್ರಯಾಣವನ್ನು ಮಂಗಳವಾರಕ್ಕೆ ಬದಲಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್











Click it and Unblock the Notifications