ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಂಡಮಾರುತದ ಎಫೆಕ್ಟ್, ಬೆಂಗಳೂರಿನಲ್ಲಿ ಇಳಿದ ತಾಪಮಾನ

|
Google Oneindia Kannada News

ಬೆಂಗಳೂರು, ಜೂನ್ 11: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಬೆಂಗಳೂರಿನಲ್ಲೂ ಮೋಡದ ವಾತಾವರಣ ನಿರ್ಮಾಣವಾಗಿದ್ದು, ತಾಪಮಾನದಲ್ಲಿ ಬಹಳ ಇಳಿಕೆ ಕಂಡಿದೆ.

ಒಂದೇ ದಿನದಲ್ಲಿ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿದೆ. ಜೂನ್ 13ರವರೆಗೆ ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಬ್ಬರಿಸಲಿದೆ 'ವಾಯು' ಚಂಡಮಾರುತ, ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ ಅಬ್ಬರಿಸಲಿದೆ 'ವಾಯು' ಚಂಡಮಾರುತ, ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ನಗರದ ಕೇಂದ್ರ ಭಾಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 31.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.8 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 31.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಿದೆ.

Cyclone effect temperature decreased in Bengaluru

ಸೋಮವಾರ ಮೂಡಬಿದಿರೆ, ಮಂಗಳೂರು, ಕೊಲ್ಲೂರು, ಭಾಗಮಂಡಲ, ವಿರಾಜಪೇಟೆ, ಕಾರ್ಕಳ, ಕಾರವಾರ, ಮಡಿಕೇರಿ, ಕಳಸ, ಕೊಟ್ಟಿಗೆಹಾರ, ಸುಬ್ರಹ್ಮಣ್ಯ, ಗಂಗಾವತಿ, ಬಾಗಲಕೋಟೆ, ಕಲಬುರಗಿಯಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Dut to Cyclone Vayu effect temperature decreased in Bengaluru, now maximum temperature is 31 degree celsius.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X