ಬೆಂಗಳೂರಲ್ಲಿ ತರಕಾರಿ ಬೆಲೆ ದಿಢೀರ್ ಏರಿಕೆ, ಜೇಬಿಗೆ ಬಿತ್ತು ಕತ್ತರಿ
ಬೆಂಗಳೂರು, ಡಿಸೆಂಬರ್ 08: ಕಳೆದ ವಾರ ದಕ್ಷಿಣ ಭಾರತದಲ್ಲಿ ಫೆಂಗಲ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗಿತ್ತು. ಇದರ ಪರಿಣಾಮ ಈ ವಾರ ತಿಳಿಯುತ್ತಿದೆ. ಅಕಾಲಿಕ ಮಳೆ, ಗಾಳಿಯ ಅಬ್ಬರಿಂದ ತರಕಾರಿ ಬೆಳೆಗಳಿಗೆ ಹಾನಿಯಾಗಿದೆ. ಮಾರುಕಟ್ಟೆಗೆ ತರಕಾರಿ ಸರಬರಾಜು ಕಡಿಮೆಯಾಗಿದ್ದು, ಬೆಲೆಗಳು ಏರಿಕೆಯಾಗುತ್ತಿವೆ. ಇನ್ನೊಂದು ತಿಂಗಳು ತರಕಾರಿ ಬೆಲೆ ಕಡಿಮೆ ಆಗುವುದಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರು ನಗರದ ಸುತ್ತಮುತ್ತಲಿನ ಜಿಲ್ಲೆಗಳು, ತಮಿಳುನಾಡು ರಾಜ್ಯದಲ್ಲಿ ಅಪಾರ ಹಾನಿಯಾಗಿದೆ. ಇದರಿಂದಾಗಿ ಮಾರುಕಟ್ಟೆಗೆ ತರಕಾರಿ ಸರಬರಾಜು ಕಡಿಮೆಯಾಗಿದ್ದು, ಬೇಡಿಕೆ ಹೆಚ್ಚಾಗಿ ಬೆಲೆಗಳು ಏರಿಕೆಯಾಗಿವೆ. ಕಳೆದ ವಾರದಿಂದ ಈರುಳ್ಳಿ, ಬೆಳ್ಳುಳ್ಳಿ ದರ ಹೆಚ್ಚಾಗಿತ್ತು, ಈಗ ಎಲ್ಲಾ ತರಕಾರಿಗಳ ಬೆಲೆಯೂ ಏರಿಕೆಯಾಗಿ ಜೇಬು ಸುಡುತ್ತಿದೆ.

ತರಕಾರಿಗಳ ಬೆಲೆ ಎಷ್ಟು?; ಟೊಮೆಟೋ, ಈರುಳ್ಳಿ, ಬೆಳ್ಳುಳ್ಳಿ, ಮೆಣಸಿನಕಾಯಿ ಹೀಗೆ ದಿನನಿತ್ಯದ ಬಳಕೆಗೆ ಅತ್ಯಗತ್ಯವಾದ ತರಕಾರಿಗಳ ಬೆಲೆಗಳು ಏರಿಕೆಯಾಗಿದೆ. 35-40 ರೂ.ಗಳಿಗೆ ಸಿಗುತ್ತಿರುವ ತರಕಾರಿ ಎಂದರೆ ಆಲೂಗೆಡ್ಡೆ ಮಾತ್ರ. ಉಳಿದ ಎಲ್ಲಾ ತರಕಾರಿಗಳ ಬೆಲೆಗಳು 60ರ ಗಡಿ ದಾಟಿವೆ. ಟೊಮೆಟೋ, ಈರುಳ್ಳಿ ಬೆಲೆ ಕೆಜಿಗೆ 70-80 ರೂ. ನಲ್ಲಿದ್ದು, ಮುಂದಿನ ವಾರ ಶತಕ ಬಾರಿಸುವುದು ಖಚಿತವಾಗಿದೆ.
"ಕಳೆದ ವರ್ಷ ಈ ಸಮಯದಲ್ಲಿ ಟೊಮೆಟೋ ಬೆಲೆ ಮಾತ್ರ ಹೆಚ್ಚಳವಾಗಿತ್ತು. ಆದರೆ ಈ ವರ್ಷ ಈರುಳ್ಳಿ, ಟೊಮೆಟೋ, ಬೆಳ್ಳುಳ್ಳಿ ಸೇರಿ ಎಲ್ಲಾ ತರಕಾರಿಗಳ ಬೆಲೆಗಳು ಏರಿಕೆಯಾಗಿದೆ. ಹೊರ ರಾಜ್ಯದಿಂದ ತರಕಾರಿ ಬರುತ್ತಿಲ್ಲ. ಇನ್ನೊಂದು ತಿಂಗಳು ದರ ಇಳಿಕೆಯಾಗುವುದಿಲ್ಲ" ಎಂದು ನಾಗಸಂದ್ರದ ತರಕಾರಿ ಮಾರುಕಟ್ಟೆಯ ಕೃಷ್ಣಪ್ಪ ಹೇಳಿದ್ದಾರೆ.
ಸದ್ಯ ಟೊಮೆಟೋ 60-70 ರೂ., ಬೆಳ್ಳುಳ್ಳಿ 550-660 ರೂ., ಈರುಳ್ಳಿ 70-80 ರೂ., ನುಗ್ಗೆಕಾಯಿ 500 ರೂ., ಮೆಣಸಿಕಕಾಯಿ 40-50 ರೂ., ಬೀನ್ಸ್ 60 ರೂ., ಕ್ಯಾಪ್ಸಿಕಂ 50-100 ರೂ., ಬಿಟ್ರೋಟ್ 60 ರೂ., ನವಿಲುಕೋಸು 50 ರೂ., ಹೀರೆಕಾಯಿ 70-80 ರೂ., ಶುಂಠಿ 60-80 ರೂ. ದರವಿದೆ.
ಅಕಾಲಿಕವಾಗಿ ಸುರಿದ ಮಳೆಗೆ ಬೆಳೆ ನಾಶವಾಗಿದೆ. ಹೊರ ರಾಜ್ಯದಿಂದ ಬರಬೇಕಿದ್ದ ಈರುಳ್ಳಿ, ಬೆಳ್ಳುಳ್ಳಿ ಬರುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಈರುಳ್ಳಿ 100 ಮತ್ತು ಬೆಳ್ಳುಳ್ಳಿ 600 ರೂ. ಗಡಿ ದಾಟಲಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.
ಮಹಾರಾಷ್ಟ್ರದಿಂದ ಜನವರಿಯಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಸರಬರಾಜು ಆಗಲಿದೆ. ಅಲ್ಲಿಯ ತನಕ ಬೆಲೆ ಇಳಿಕೆಯಾಗುವುದಿಲ್ಲ ಎಂದು ವ್ಯಾಪಾರಿಗಳು ಅಂದಾಜಿಸಿದ್ದಾರೆ. ನಾವು ತರಕಾರಿ ತರಲು ಹೋದರೆ ಎಪಿಎಂಸಿಗಳಲ್ಲೇ ಸಿಗುತ್ತಿಲ್ಲ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಮಳೆಯಿಂದಾಗಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಇಳುವರಿ ಕಡಿಮೆಯಾಗಿದೆ. ಆದ್ದರಿಂದ ಬೆಂಗಳೂರು ನಗರಕ್ಕೆ ಅಕ್ಕಪಕ್ಕದ ಜಿಲ್ಲೆಗಳಿಂದ ಸಹ ತರಕಾರಿ ಸರಬರಾಜು ಆಗುತ್ತಿಲ್ಲ. ಆದ್ದರಿಂದ ನಗರದಲ್ಲಿ ಬೆಲೆ ಏರಿಕೆಯಾಗಿದೆ.
ಈ ಚಂಡಮಾರುತದ ಸಂಕಷ್ಟದ ನಡುವೆಯೇ ಬಂಗಾಳಕೊಲ್ಲಿಯಲ್ಲಿ ಇನ್ನೂ ಎರಡು ಚಂಡಮಾರುತ ಉಂಟಾಗುವ ನಿರೀಕ್ಷೆ ಇದೆ. ಈ ಚಂಡಮಾರುತ ಪ್ರಬಲವಾದರೆ ಬೆಂಗಳೂರು ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ 20ರ ತನಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಈಗಾಗಲೇ ಅಕಾಲಿಕವಾಗಿ ಸುರಿದ ಮಳೆ ಭತ್ತದ ಕೊಯ್ಲಿಗೆ ತೊಂದರೆ ಮಾಡಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಮತ್ತೆ ಮಳೆ ಆರಂಭವಾದರೆ ತರಕಾರಿಗಳ ಜೊತೆ ಆಹಾರ ಉತ್ಪನ್ನಗಳ ಬೆಲೆಗಳು ಸಹ ಏರಿಕೆಯಾಗುವುದು ಖಚಿತವಾಗಿದೆ.
-
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications