ವಾರ್ಧಾ ಚಂಡಮಾರುತದಲ್ಲಿ ಕವಿದ ಕರುನಾಡು
ಬೆಂಗಳೂರು, ಡಿಸೆಂಬರ್ 13: ತಮಿಳುನಾಡು ಮತ್ತು ಆಂಧ್ರದಲ್ಲಿ ರುದ್ರನರ್ತನ ಮಾಡಿದ ವಾರ್ಧಾ ಚಂಡಮಾರುತ ಕರ್ನಾಟಕ್ಕೂ ಕೆಲವೊಂದು ಕಡೆ ತಮ್ಮ ಪರಿಣಾಮ ಬೀರಿದೆ ರಾಮನಗರ, ಹುಬ್ಬಳ್ಳಿ, ಬೆಂಗಳೂರು, ಮೈಸೂರು ಕೆಲವೆಡೆ ಜಿಟಿಜಿಟಿ ಮಳೆ, ಬಿರುಗಾಳಿ ಮೋಡಕವಿದ ವಾತಾವರಣವನ್ನುಂಟು ಮಾಡಿದೆ.
ರಾಮನಗರದಲ್ಲಿ ವಾರ್ಧಾ ಪರಿಣಾಮದಿಂದಾಗಿ ಉತ್ತಮ ಮಳೆಯಾಗಿದೆ. ಸೋಮವಾರ ರಾತ್ರಿ ಶುರುವಾದ ಮಳೆ ಬೆಳಗ್ಗೆ ಏಳುಗಂಟೆವರೆಗೆ ಸತತವಾಗಿ ಸುರಿದಿದೆ.ರಾಮನಗರದಲ್ಲಿ 40 ಮಿಲಿ ಮೀಟರ್ ಮಳೆಯಾಗಿದೆ. ಕನಕಪುರದಲ್ಲಿ ತಾಲ್ಲೂಕಿನಾದ್ಯಂತ 49 ಮಿ.ಮೀ ಹಾಗು ಮಾಗಡಿಯಲ್ಲಿ 31 ಮಿ.ಮೀ, ಚನ್ನಪಟ್ಟಣ 37 ಮಳೆ ಪ್ರಮಾಣ ದಾಖಲಾಗಿದೆ.[ಕರ್ನಾಟಕಕ್ಕೂ ತಟ್ಟಿದ ವಾರ್ಧಾ ಚಂಡಮಾರುತ ಭೀತಿ!]

ವಾರ್ಧಾ ಮೈಸೂರಿನಲ್ಲಿ ಬೇರೆ ರೀತಿಯ ಪರಿಣಾಮವನ್ನೇ ಬೀರಿದೆ. ಮೈಸೂರಿನಿಂದ ಚೆನ್ನೈಗೆ ತರೆಳಬೇಕಿದ್ದ ರೈಲು ಸಂಚಾರ ಸ್ಥಗಿತವಾಗಿದೆ. ಶತಾಬ್ಧಿ ಎಕ್ಸ್ಪ್ರೆಸ್ ಮತ್ತು ತಿರುಪತಿಗೆ ತೆರಳಬೇಕಿದ್ದ ಪ್ಯಾಸೆಂಜರ್ ರೈಲುಗಳು ರದ್ದಾಗಿವೆ. ಉಳಿದಂತೆ ಮೊಡಕವಿದಿದ್ದು ಇಲ್ಲಿಯೂ ಜಿಟಿಮಳೆ ಸುರಿದಿದೆ.

ವಾರ್ಧಾ ಚಂಡಮಾರುತದಿಂದಾಗಿ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ಶುರುವಾದ ಜಿಟಿಜಿಟಿಮಳೆ ಮಂಗಳವಾರವೂ ಮುಂದುವರೆದಿದೆ. ಬೆಂಗಳೂರಿನ ಕೆಲವೆಡೆ ಮರಳುಗಳು ಧರೆಗುರುಳಿವೆ. ಮೋಡ ಕವಿದ ವಾತಾವರಣದಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಚಂಡಮಾರುತದಿಂದಾಗಿ ಸೋಮವಾರ ಸಂಜೆಯೇ ಕೋಲಾರದ ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಿತ್ತು. ಅಲ್ಲದೆ ಮುಂದುವರೆದಂತೆ ಜಿಟಿಜಿಟಿ ಮಳೆಯಾಗಿದ್ದು, ಕೆಲವೆಡೆ ಅಧಿಕ ಮಳೆ ಉಂಟಾಗಿದೆ. ಕೆಲವೆಡೆ ಮರಗಳು ನೆಲಕ್ಕುರುಳಿವೆ.[ವಾರ್ಧಾ ಎಫೆಕ್ಟ್: ಮಳೆಗೆ ತೋಯ್ದ ಗುಬ್ಬಚ್ಚಿಯಂತಾದ ಬೆಂಗಳೂರು]

ಇನ್ನು ಮಂಗಳೂರು, ಕೊಡಗಿನ ಕಡೆಯಲ್ಲಿ ಹುತ್ತರಿ ಹಬ್ಬವನ್ನೇ ಮಾಡದಂತೆ ಮೋಡ ಕವಿದು ಮಳೆ ಸುರಿದಿದೆ. ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗಿದೆ. ಕರ್ನಾಟಕದಾದ್ಯಂತ ಮೋಡಕವಿದ ವಾತಾವರಣವೇ ಹೆಚ್ಚು.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications