ವಾರ್ಧಾ ಚಂಡಮಾರುತದಲ್ಲಿ ಕವಿದ ಕರುನಾಡು
ಬೆಂಗಳೂರು, ಡಿಸೆಂಬರ್ 13: ತಮಿಳುನಾಡು ಮತ್ತು ಆಂಧ್ರದಲ್ಲಿ ರುದ್ರನರ್ತನ ಮಾಡಿದ ವಾರ್ಧಾ ಚಂಡಮಾರುತ ಕರ್ನಾಟಕ್ಕೂ ಕೆಲವೊಂದು ಕಡೆ ತಮ್ಮ ಪರಿಣಾಮ ಬೀರಿದೆ ರಾಮನಗರ, ಹುಬ್ಬಳ್ಳಿ, ಬೆಂಗಳೂರು, ಮೈಸೂರು ಕೆಲವೆಡೆ ಜಿಟಿಜಿಟಿ ಮಳೆ, ಬಿರುಗಾಳಿ ಮೋಡಕವಿದ ವಾತಾವರಣವನ್ನುಂಟು ಮಾಡಿದೆ.
ರಾಮನಗರದಲ್ಲಿ ವಾರ್ಧಾ ಪರಿಣಾಮದಿಂದಾಗಿ ಉತ್ತಮ ಮಳೆಯಾಗಿದೆ. ಸೋಮವಾರ ರಾತ್ರಿ ಶುರುವಾದ ಮಳೆ ಬೆಳಗ್ಗೆ ಏಳುಗಂಟೆವರೆಗೆ ಸತತವಾಗಿ ಸುರಿದಿದೆ.ರಾಮನಗರದಲ್ಲಿ 40 ಮಿಲಿ ಮೀಟರ್ ಮಳೆಯಾಗಿದೆ. ಕನಕಪುರದಲ್ಲಿ ತಾಲ್ಲೂಕಿನಾದ್ಯಂತ 49 ಮಿ.ಮೀ ಹಾಗು ಮಾಗಡಿಯಲ್ಲಿ 31 ಮಿ.ಮೀ, ಚನ್ನಪಟ್ಟಣ 37 ಮಳೆ ಪ್ರಮಾಣ ದಾಖಲಾಗಿದೆ.[ಕರ್ನಾಟಕಕ್ಕೂ ತಟ್ಟಿದ ವಾರ್ಧಾ ಚಂಡಮಾರುತ ಭೀತಿ!]

ವಾರ್ಧಾ ಮೈಸೂರಿನಲ್ಲಿ ಬೇರೆ ರೀತಿಯ ಪರಿಣಾಮವನ್ನೇ ಬೀರಿದೆ. ಮೈಸೂರಿನಿಂದ ಚೆನ್ನೈಗೆ ತರೆಳಬೇಕಿದ್ದ ರೈಲು ಸಂಚಾರ ಸ್ಥಗಿತವಾಗಿದೆ. ಶತಾಬ್ಧಿ ಎಕ್ಸ್ಪ್ರೆಸ್ ಮತ್ತು ತಿರುಪತಿಗೆ ತೆರಳಬೇಕಿದ್ದ ಪ್ಯಾಸೆಂಜರ್ ರೈಲುಗಳು ರದ್ದಾಗಿವೆ. ಉಳಿದಂತೆ ಮೊಡಕವಿದಿದ್ದು ಇಲ್ಲಿಯೂ ಜಿಟಿಮಳೆ ಸುರಿದಿದೆ.

ವಾರ್ಧಾ ಚಂಡಮಾರುತದಿಂದಾಗಿ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ಶುರುವಾದ ಜಿಟಿಜಿಟಿಮಳೆ ಮಂಗಳವಾರವೂ ಮುಂದುವರೆದಿದೆ. ಬೆಂಗಳೂರಿನ ಕೆಲವೆಡೆ ಮರಳುಗಳು ಧರೆಗುರುಳಿವೆ. ಮೋಡ ಕವಿದ ವಾತಾವರಣದಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಚಂಡಮಾರುತದಿಂದಾಗಿ ಸೋಮವಾರ ಸಂಜೆಯೇ ಕೋಲಾರದ ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಿತ್ತು. ಅಲ್ಲದೆ ಮುಂದುವರೆದಂತೆ ಜಿಟಿಜಿಟಿ ಮಳೆಯಾಗಿದ್ದು, ಕೆಲವೆಡೆ ಅಧಿಕ ಮಳೆ ಉಂಟಾಗಿದೆ. ಕೆಲವೆಡೆ ಮರಗಳು ನೆಲಕ್ಕುರುಳಿವೆ.[ವಾರ್ಧಾ ಎಫೆಕ್ಟ್: ಮಳೆಗೆ ತೋಯ್ದ ಗುಬ್ಬಚ್ಚಿಯಂತಾದ ಬೆಂಗಳೂರು]

ಇನ್ನು ಮಂಗಳೂರು, ಕೊಡಗಿನ ಕಡೆಯಲ್ಲಿ ಹುತ್ತರಿ ಹಬ್ಬವನ್ನೇ ಮಾಡದಂತೆ ಮೋಡ ಕವಿದು ಮಳೆ ಸುರಿದಿದೆ. ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗಿದೆ. ಕರ್ನಾಟಕದಾದ್ಯಂತ ಮೋಡಕವಿದ ವಾತಾವರಣವೇ ಹೆಚ್ಚು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications