Breaking News: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಮೂವರು ಸಾವು
ಬೆಂಗಳೂರು, ಸೆಪ್ಟೆಂಬರ್ 21: ಸಿಲಿಕಾನ್ ಸಿಟಿಯ ಇತ್ತೀಚಿಗೆ ಅಪಘಾತ ಮತ್ತು ಅಗ್ನಿ ಅವಘಡಗಳ ಸಂಖ್ಯೆ ಹೆಚ್ಚುತ್ತಿದೆ. ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಮಧ್ಯಾಹ್ನ 3.30ರ ವೇಳೆಗೆ ಸಿಲಿಂಡರ್ ಸೋರಿಕೆಯಾಗಿದೆ. ನೋಡನೋಡುತ್ತಿದ್ದಂತೆ ಬೆಂಕಿ ಹೊತ್ತುಕೊಂಡಿದ್ದು, ಮೂವರು ಸಜೀವದಹನವಾಗಿದ್ದಾರೆ.
Recommended Video
ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ಇರುವ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಂದು ಫ್ಲೋರ್ ನಿಂದ ಮೂರು ಫ್ಲೋರ್ ಗೆ ಬೆಂಕಿ ವ್ಯಾಪಿಸಿದೆ. ಫ್ಲ್ಯಾಟ್ ನಲ್ಲಿದ್ದ ಮೂವರು ಮೃತಪಟ್ಟಿದ್ದು, ತಮ್ಮ ಪ್ರಾಣ ಉಳಿಸುವಂತೆ ಮಹಿಳೆ ಅಂಗಲಾಚುತ್ತಿದ್ದರು. ಆದರೆ ಕೆಲಕ್ಷಣದಲ್ಲೇ ಬೆಂಕಿಯ ಕೆನ್ನಾಲಿಗೆಗೆ ಮಹಿಳೆಯು ಸಜೀವ ದಹನವಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆಶ್ರಿತ್ ಅಪಾರ್ಟ್ಮೆಂಟ್ನ ಫ್ಲ್ಯಾಟ್ ನಲ್ಲಿದ್ದ ಐವರ ಪೈಕಿ ಮೂವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರು ಕುಟುಂಬದ ಮಗ ಹಾಗೂ ಮಗಳು ಬೆಂಕಿಯಿಂದ ಬಚಾವ್ ಆಗಿ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬೆಂದಿ ನಂದಿಸುವ ಕಾರ್ಯ:
ದೇವರಚಿಕ್ಕನಹಳ್ಳಿಯಲ್ಲಿ ಇರುವ ಆಶ್ರಿತ್ ಅಪಾರ್ಟ್ಮೆಂಟ್ನ ಬೇರೆ ಭಾಗಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವುದಕ್ಕೆ ಹರಸಾಹಸ ಪಡುತ್ತಿದ್ದಾರೆ. ಸದ್ಯ ಮೊದಲಿಗೆ ಬೆಂಕಿ ಕಾಣಿಸಿಕೊಂಡ ಮೂರನೇ ಮಹಡಿಯಲ್ಲಿ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಆದರೆ ಮೇಲಿನ ಎರಡು ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ.
ಮಧ್ಯಾಹ್ನದ ವೇಳೆ ಆಗಿದ್ದರಿಂದ ತಪ್ಪಿದ ಅನಾಹುತ:
ಬೆಂಗಳೂರಿನ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಮಧ್ಯಾಹ್ನ 3.30ರ ವೇಳೆಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಅಕ್ಕಪಕ್ಕದ ಫ್ಲ್ಯಾಟ್ ಮಂದಿಗೆ ಹೊರಗಡೆ ಓಡಿ ಬಂದು ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಒಂದು ಫ್ಲ್ಯಾಟಿನ ಬಾಗಿಲು ಹಾಕಿಕೊಂಡಿತ್ತು ಎಂದು ತಿಳಿದು ಬಂದಿದೆ. ಅಲ್ಲದೇ ಮಧ್ಯಾಹ್ನದ ವೇಳೆ ಆಗಿದ್ದ ಹಿನ್ನೆಲೆ ಬಹುತೇಕ ಜನರು ಕಚೇರಿಗೆ ತೆರಳಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತೆ ಆಗಿದೆ. ಇಲ್ಲದೇ ಸಂಜೆ ವೇಳೆ ಘಟನೆ ನಡೆದಿದ್ದರೆ ಅಕ್ಕಪಕ್ಕದವರು ಮನೆಗೆ ವಾಪಸ್ಸಾಗುತ್ತಿದ್ದರು. ಆಗ ದೊಡ್ಡ ದುರಂತವೇ ನಡೆದು ಹೋಗುತ್ತಿತ್ತು ಎನ್ನುವುದು ಸ್ಥಳೀಯರ ಆತಂಕದ ನುಡಿ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications