ಬೆಂಗಳೂರಿನ ಈ ಭಾಗದ ಬಾಡಿಗೆ ಮನೆ ನಿವಾಸಿಗಳಿಗೆ ದೊಡ್ಡ ಶಾಕ್!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಬಾಡಿಗೆಗೆ ಪಡೆಯುವುದು ಒಂದು ತಲೆನೋವಾದರೆ, ಇದೀಗ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನ ಈ ಏರಿಯಾಗಳಲ್ಲಿ ಮನೆ ಅಥವಾ ಫ್ಲ್ಯಾಟ್ಗಳನ್ನು ಬಾಡಿಗೆಗೆ ಪಡೆಯುವವರಿಗೆ ಹೊಸ ಆತಂಕ ಶುರುವಾಗಿದೆ. ವಿಶೇಷವಾಗಿ ಈಜಿಪುರ ಮತ್ತು ಕೋರಮಂಗಲ ಭಾಗದ ಬಾಡಿಗೆ ಮನೆಯವರಿಗೆ ಸಾವಿರಾರು ರೂಪಾಯಿ ಬಾಡಿಗೆ ಪಾವತಿ ಮಾಡುತ್ತಿದ್ದರೂ ಸೂಕ್ತ ರಕ್ಷಣೆಯೇ ಇಲ್ಲ ಎಂಬ ದೂರು ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರು ಬೆಳೆದಂತೆ ಇಲ್ಲಿಗೆ ಬೇರೆ ಸ್ಥಳಗಳಿಂದ ಬಂದು ಜನ ಬಾಡಿಗೆ ಮನೆಗಳಲ್ಲಿ ವಾಸವಿದ್ದಾರೆ. ವಿಶೇಷವಾಗಿ ಈಜಿಪುರ ಮತ್ತು ಕೋರಮಂಗಲದಲ್ಲಿ ಫ್ಲಾಟ್ಗಳನ್ನು ಬಾಡಿಗೆಗೆ ಪಡೆಯುತ್ತಿರುವವರಿಗೆ ಹೊಸ ಭೀತಿ ಶುರುವಾಗಿದೆ. ಮೊದಲೆಲ್ಲ ಮನೆಗಳ್ಳರ ಹಾವಳಿ ಹೆಚ್ಚಾಗಿತ್ತು. ಇದನ್ನ ಮನಗಂಡು ಭದ್ರತಾ ಸಿಬ್ಬಂದಿ ನಿಯೋಜನೆ, ಸಿಸಿಟಿವಿ ಕ್ಯಾಮರಾ ಅಳವಡಿಕೆ, ಗೇಟ್ ಸೇರಿದಂತೆ ರಕ್ಷಣಾ ಕ್ರಮಗಳನ್ನು ಬಹುತೇಕ ಎಲ್ಲ ಮನೆಗಳಲ್ಲಿ ಕಾಣಬಹುದು. ಆದರೆ ಇದೀಗ ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ ಕದಿಯುವ ಗ್ಯಾಂಗ್ವೊಂದು ಸಕ್ರಿಯವಾಗಿದ್ದು, ಈ ಭಾಗದ ನಿವಾಸಿಗಳಿಗೆ ಶಾಕ್ ನೀಡಿದೆ.

ಈಜಿಪುರ ಮತ್ತು ಕೋರಮಂಗಲದ ಮನೆ ಮಾಲೀಕರಿಗೆ ಇದೀಗ ಸಿಲಿಂಡರ್ ಕಳ್ಳರ ಕಾಟ ಹೆಚ್ಚಾಗಿದೆ. ಈ ಭಾಗದ ಬಾಡಿಗೆ ಮನೆಗಳು, ಫ್ಲ್ಯಾಟ್ಗಳು, ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಸಿಲಿಂಡರ್ ಕಳ್ಳತನ ಮಾಡಲಾಗುತ್ತಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಕಳ್ಳನೊಬ್ಬ ಬಂದು ಸಲೀಸಾಗಿ ಸಿಲಿಂಡರ್ ಕದಿಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿದೆ.
ಸಿಲಿಂಡರ್ ಕಳ್ಳರ ತಂಡವೊಂದು ಈ ಪ್ರದೇಶಗಳಲ್ಲಿ ಸಕ್ರಿಯವಾಗಿದ್ದು, ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಪಾರ್ಕಿಂಗ್ ಸ್ಥಳಗಳಲ್ಲಿ ಇಟ್ಟಿರುವ ಅಡುಗೆ ಅನಿಲ ಸಿಲಿಂಡರ್ಗಳನ್ನು ಕದಿಯುತ್ತಿದ್ದಾರೆ. ಇದೇ ರೀತಿಯ ಘಟನೆ ಮಾರ್ಚ್ 14ರಂದ ಮಧ್ಯಾಹ್ನ ನಡೆದಿದೆ. ಈಜಿಪುರದ 20 ಕೆ ಕ್ರಾಸ್ನಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್ ಕಳ್ಳರ ಕೈಚಳಕ ಸೆರೆಯಾಗಿದೆ. ಇಬ್ಬರು ವ್ಯಕ್ತಿಗಳು ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಒಬ್ಬ ವ್ಯಕ್ತಿ ಸ್ಕೂಟಿಯಲ್ಲಿ ಹೊರಗೆ ಕಾಯುತ್ತಿದ್ದರೆ, ಇನ್ನೊಬ್ಬ ಕಟ್ಟಡದ ಆವರಣವನ್ನು ಪ್ರವೇಶಿಸಿ ಗ್ಯಾಸ್ ಸಿಲಿಂಡರ್ ಅನ್ನು ಸಲೀಸಾಗಿ ಹೊತ್ತೊಯ್ದಿದ್ದಾನೆ.

ಈ ಕೃತ್ಯಕ್ಕೆ ಬಳಸಲಾದ ಸ್ಕೂಟಿಯ ನೋಂದಣಿ ಸಂಖ್ಯೆ ಕೂಡ ಸೆರೆಯಾಗಿದೆ. ಇಂತಹ ಘಟನೆಗಳು ಇತ್ತೀಚೆಗೆ ಈ ಭಾಗದಲ್ಲಿ ಹೆಚ್ಚಾಗಿದ್ದು, ಮನೆ ಮಾಲೀಕರಿಗೆ ಢವಢವ ಶುರುವಾಗಿದೆ. ಸುರಕ್ಷತಾ ದೃಷ್ಟಿಯಿಂದ ಈಗ ಗ್ಯಾಸ್ ಸಿಲಿಂಡರ್ಗಳನ್ನು ಮನೆಯ ಹೊರಭಾಗಗಳಲ್ಲಿ ಅಥವಾ ಪಾರ್ಕಿಂಗ್ ಜಾಗಗಳಲ್ಲಿ ಅವಡಿಸಿ ಸಂಪರ್ಕ ಪಡೆಯಲಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ಸಿಲಿಂಡರ್ ಅನ್ನು ಕದಿಯುವುದನ್ನೇ ವೃತ್ತಿ ಮಾಡಿಕೊಂಡಿದ್ದಾರೆ ಎಂದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಆರೋಪಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳಗಳ್ಳಬೇಕು ಎಂದು ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ತಪ್ಪಿಸಲು ಸಂಜೆ ವೇಳೆಯೂ ಪೊಲೀಸ್ ಗಸ್ತು ಹೆಚ್ಚಿಸಿ ಎಂದು ಕೋರಿದ್ದಾರೆ. ಇಲ್ಲಿನ ನಿವಾಸಿಗಳು ಕೂಡ ಈ ಕಳ್ಳರ ಬಗ್ಗೆ ಜಾಗರೂಕರಾಗಿರಿ, ನಿಮ್ಮ ಕಟ್ಟಡದ ಆವರಣದಲ್ಲಿ ಎಲ್ಲ ರೀತಿಯ ಭದ್ರತಾ ಕ್ರಮಗಳಿಗೆ ಒತ್ತು ನೀಡುವಂತೆಯೂ ಸಲಹೆ ನೀಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications