Get Updates
Get notified of breaking news, exclusive insights, and must-see stories!

ಐಟಿ ತಲೆನೋವಿನ ನಡುವೆಯೂ ಅಧಿಕಾರಿಗಳ ಸಭೆ ನಡೆಸಿದ ಡಿಕೆಶಿ

ಬೆಂಗಳೂರು, ಜೂನ್ 20: ಐಟಿ ರೇಡ್‌, ಐಟಿ ಇಲಾಖೆ ಸಮನ್ಸ್, ಡೈರಿ ಪತ್ತೆ ಆರೋಪ ಇನ್ನೂ ಹಲವು ತಲೆನೋವುಗಳ ನಡುವೆಯೂ ನೀರಾವರಿ ಹಾಗೂ ಉನ್ನತ ವೈದ್ಯಕೀಯ ಸಚಿವ ಡಿಕೆ ಶಿವಕುಮಾರ್ ಅವರು ಇಂದು ಅಧಿಕಾರಿಗಳ ಸಭೆ ನಡೆಸಿದರು.

ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪುರ್ವಭಾವಿ ಸಭೆ ನಡೆಸಿದ ಡಿ.ಕೆ.ಶಿವಕುಮಾರ್‌ ಅವರು ಕೆಂಪೇಗೌಡ ಜಯಂತಿ ಆಚರಣೆ ಬಗ್ಗೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನಿಡಿದರು.

ಎಲ್ಲಾ ಕಾರ್ಪೊರೇಟರ್‌ಗಳು ಕೆಂಪೇಗೌಡ ಜಯಂತಿ ಆಚರಣೆಗೆ ಸ್ವಪ್ರೇರಿತವಾಗಿ ಹಣ ನೀಡಲು ಮುಂದೆ ಬಂದಿದ್ದಾರೆ ಹಾಗಾಗಿ ಅದ್ಧೂರಿಯಾಗಿ ಜಯಂತಿ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು.

D.K.Shivakumar did meeting with officers regarding Kempegowda jayanthi

ಬೆಂಗಳೂರಿನ ನಾಲ್ಕು ಗಡಿ ಗೋಪುರಗಳಿಂದ ಬರುವ ಮೆರವಣಿಗೆ ಸ್ವಾತಂತ್ರ್ಯ ಉದ್ಯಾನವನವನದಲ್ಲಿ ಒಟ್ಟಾಗಿ ಆ ನಂತರ ಅರಮನೆ ಮೈದಾನದಲ್ಲಿ ಆಯೋಜಿತವಾಗುವ ವೇದಿಕೆ ಕಾರ್ಯಕ್ರಮಕ್ಕೆ ಬರುತ್ತದೆ ಎಂದು ಅವರು ಕಾರ್ಯಕ್ರಮದ ನೀಲ ನಕ್ಷೆ ವಿವರಿಸಿದರು.

ನಾಳೆಯಿಂದಲೇ ಕೆಂಪೇಗೌಡ ಜಯಂತಿಯ ಬಗ್ಗೆ ಜಾಹೀರಾತನ್ನು ನೀಡಬೇಕು. ಕಳೆದ ಬಾರಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದಾಗ ಸ್ಥಳದ ಅಭಾವ ಉಂಟಾಗಿತ್ತು ಹಾಗಾಗಿ ಈ ಬಾರಿ ಅರಮನೆ ಮೈದಾನದಲ್ಲಿ ಆಯೋಜಿಸುತ್ತಿದ್ದೇವೆ ಎಂದರು.

ಕವಿ ದೊಡ್ಡರಂಗೇಗೌಡ ಮಾತನಾಡಿ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ದೊಡ್ಡ ಕೆಂಪೇಗೌಡರ ಮೂರ್ತಿ ಸ್ಥಾಪಿಸಬೇಕು, ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಪರಿಚಯ ಪುಸ್ತಕ ನೀಡಬೇಕು, ಬೆಂಗಳೂರು ವಿವಿಗೆ ಕೆಂಪೇಗೌಡರ ಹೆಸರಿಡಬೇಕು ಎಂದು ಅವರು ಒತ್ತಾಯಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+