ಬೆಂಗಳೂರಲ್ಲಿ Sunday Ride ಎಂದು ವಿಡಿಯೋ ಹಂಚಿಕೊಂಡ ಡಿ.ಕೆ ಶಿವಕುಮಾರ್, ಜನರ ಮಸ್ತ್ ರಿಯಾಕ್ಷನ್!
ಬೆಂಗಳೂರಿನ ರಸ್ತೆಗುಂಡಿಗಳ ಸಮಸ್ಯೆಯ ಬಗ್ಗೆ ಬೆಂಗಳೂರಿಗರು ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ ಬಂದಾಗ ರಸ್ತೆ ಗುಂಡಿಗಳು ನಿರ್ಮಾಣವಾಗುವುದು ಸಹಜ ಎನ್ನುವಂತೆ ಆಗಿದೆ. ಆದರೆ ಈ ಬಾರಿ ಬೆಂಗಳೂರಿನ ತುಂಬಾ ರಸ್ತೆ ಗುಂಡಿಗಳು ನಿರ್ಮಾಣವಾಗಿದ್ದು. ಸಮಸ್ಯೆ ಹೆಚ್ಚಳವಾಗಿದೆ. ಇದೀಗ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬುಲೆಟ್ ಬೈಕ್ನಲ್ಲಿ ನಗರ ಸುತ್ತಾಟ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಶೇರ್ ಮಾಡಿಕೊಂಡಿದ್ದು. ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದರ ನಡುವೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಯ ಆಯುಕ್ತರು ಆಯಾ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಹಾಗೂ ಕಸದ ಸಮಸ್ಯೆ ಸೇರಿದಂತೆ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ನಗರಾಭಿವೃದ್ಧಿ ಸಚಿವ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಪಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಭಾನುವಾರ ಬೆಂಗಳೂರು ಸುತ್ತಾಡಿದ್ದಾರೆ. ಅದರ ಅನುಭವವನ್ನು ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.

ಡಿ.ಕೆ ಶಿವಕುಮಾರ್ ಅವರು ತಮ್ಮ ನಿವಾಸದಿಂದ ಕೆಪಿಸಿಸಿ ಕಚೇರಿಯವರೆಗೂ ತಾವೇ ಬೈಕ್ ಓಡಿಸಿಕೊಂಡು ಹೋಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್ ಅವರು, ಭಾನುವಾರದ ಸವಾರಿ!
ಇಂದು ಬಿಡುವಿಲ್ಲದ ವೇಳಾಪಟ್ಟಿಯ ನಡುವೆ, ನನ್ನ ಯೌವನದ ದಿನಗಳನ್ನು ಮತ್ತೆ ಅನುಭವಿಸಲು ನಾನು ಸ್ವಲ್ಪ ಸಮಯ ತೆಗೆದುಕೊಂಡೆ - ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿನ ಬೀದಿಗಳಲ್ಲಿ ಬೈಸಿಕಲ್ ಸವಾರಿ ಮಾಡಿದೆ.
ಇದು ಕೇವಲ ಸವಾರಿಗಿಂತ ಹೆಚ್ಚಿನದಾಗಿತ್ತು; ನಗರದೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಮತ್ತು ನಮ್ಮ ಜನ ಎದುರಿಸುತ್ತಿರುವ ಗುಂಡಿಗಳಂತಹ ದೈನಂದಿನ ಸವಾಲುಗಳನ್ನು ನೇರವಾಗಿ ವೀಕ್ಷಿಸಲು ಇದು ಒಂದು ಅವಕಾಶವಾಗಿತ್ತು. ನಾವು ಒಟ್ಟಿಗೆ ಇದ್ದೇವೆ, ಕೇಳುತ್ತಿದ್ದೇವೆ, ನೋಡುತ್ತಿದ್ದೇವೆ ಮತ್ತು ಉತ್ತಮ ಬೆಂಗಳೂರನ್ನು ನಿರ್ಮಿಸಲು ಬದ್ಧರಾಗಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Sunday Ride!
— DK Shivakumar (@DKShivakumar) September 7, 2025
Amidst a packed schedule, I took a moment today to relive my youth - out on my bike, riding through the streets of Bengaluru to attend the Youth Congress State Executive Meeting.
It was more than just a ride; it was a chance to reconnect with the city and observe,… pic.twitter.com/hDCC5HTd35
ನಮ್ಮ ಏರಿಯಾ ಕಡೆ ಬನ್ನಿ: ಇನ್ನು ಬೆಂಗಳೂರಿನ ಜನ ಈ ಟ್ವೀಟ್ಗೆ ಭಿನ್ನವಾಗಿ ರಿಯಾಕ್ಟ್ ಮಾಡಿದ್ದಾರೆ. ಸರ್ ಪೀಣ್ಯದ ಕಡೆ ಒಮ್ಮೆ ಬನ್ಮಿ ಎಂದೂ, ವರ್ತೂರು ಕಡೆ ಬನ್ನಿ... ವೈಟ್ಫೀಲ್ಡ್ನ ರಸ್ತೆಗಳು ಅಧ್ವಾನವಾಗಿವೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ನೀವು ಓಡಾಡುವ ರಸ್ತೆಗಳಲ್ಲಿ ರಸ್ತೆ ಗುಂಡಿ ಇರುವುದಿಲ್ಲ ಅಲ್ಲದೇ ಟ್ರಾಫಿಕ್ ಜಾಮ್ ಸಮಸ್ಯೆಯೂ ಇರುವುದಿಲ್ಲ. ಆದರೆ ನಮ್ಮ ಕಷ್ಟ ಯಾರಿಗೆ ಹೇಳಿಕೊಳ್ಳಬೇಕು ಎಂದು ಜನ ರಿಯಾಕ್ಟ್ ಮಾಡಿದ್ದಾರೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications