ಯೂನಿವರ್ಸಲ್ ಸ್ಟಾರ್ ಕಮಲ್ ಜತೆ ಸೂಪರ್ ಕಾಪ್ ರೂಪಾ!
Recommended Video

ಬೆಂಗಳೂರು, ನವೆಂಬರ್ 27: ರಾಜಕೀಯ ಪ್ರವೇಶಕ್ಕೆ ತುದಿಗಾಲಲ್ಲಿ ನಿಂತಿರುವ ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರನ್ನು ಇತ್ತೀಚೆಗೆ ಕರ್ನಾಟಕದ ಸೂಪರ್ ಕಾಪ್ ರೂಪಾ ಡಿ ಮೌದ್ಗೀಲ್ ಅವರು ಭೇಟಿ ಮಾಡಿದ್ದಾರೆ. ಕಮಲ್ ಜತೆಗಿನ ಫೋಟೋವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಆದರೆ, ಈ ಫೋಟೋ ನೋಡಿ ಹಲವಾರು ಮಂದಿಯ ಹುಬ್ಬೇರಿದೆ. ಕಮಲ್ ಜತೆ ಫೋಟೋ ಏಕೆ ಎಂದು ಕೆಲವರು ಪ್ರಶ್ನಿಸಿದ್ದಾರೆ. ನಿಮ್ಮನ್ನು ಅನ್ ಫಾಲೋ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಮತ್ತೆ ಕೆಲವರು ರೂಪಾ ಅವರನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕರ ಟೀಕೆಗಳು ಟ್ವೀಟ್ ರೂಪದಲ್ಲಿ ಹರಿದು ಬರತೊಡಿದಾಗ ಇದಕ್ಕೆ ರೂಪಾ ಅವರು ಪ್ರತ್ಯುತ್ತರ ನೀಡಿದ್ದಾರೆ. ಮಾನವ ಸಂಘ ಜೀವಿ, ಸಾಮಾಜಿಕ ಜಾಲ ತಾಣಗಳಲ್ಲಿ ವಿಹರಿಸುವಾಗ, ವ್ಯವಹರಿಸುವಾಗ, ಪ್ರತಿಕ್ರಿಯಿಸುವಾಗ ಸಾಮಾಜಿಕ ಬದ್ಧತೆ, ಜವಾಬ್ದಾರಿ ಹೊಂದಿರಬೇಕು, ಕಮಲ್ ಅವರೊಟ್ಟಿಗೆ ತೆಗೆಸಿಕೊಂಡ ಫೋಟೋ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ತಿಳಿ ಹೇಳಿದ್ದಾರೆ.
ರೂಪಾ ಅವರ ಪ್ರತಿಕ್ರಿಯೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೂಪಾ ಅವರ ಟ್ವೀಟ್ ಹಾಗೂ ಪ್ರತಿಕ್ರಿಯೆಗಳತ್ತ ಒಂದು ನೋಟ ಇಲ್ಲಿದೆ...

ಕಮಲ್ ಹಾಸನ್ ಜತೆ ಫೋಟೋ ಬಗ್ಗೆ ಚರ್ಚೆ
ಕಾರಾಗೃಹ ಡಿಐಜಿಯಾಗಿದ್ದ ಡಿ ರೂಪಾ ಅವರನ್ನು ಟ್ರಾಫಿಕ್ ಇಲಾಖೆ ಡಿಐಜಿಯಾಗಿ ವರ್ಗಾವಣೆಯಾಗಿ ನಾಲ್ಕೈದು ತಿಂಗಳುಗಳು ಕಳೆದಿವೆ. ರೂಪಾ ಅವರು ತಮ್ಮ ಟ್ವಿಟ್ಟರ್ ಮೂಲಕ ಟ್ರಾಫಿಕ್ ಸಮಸ್ಯೆ ಬಗ್ಗೆ, ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ನಿರಂತರವಾಗಿ ಟ್ವೀಟ್ ಮಾಡುತ್ತಿದ್ದಾರೆ. ಇತ್ತೀಚೆಗೆ ಸಮ್ಮೇಳನವೊಂದಕ್ಕೆ ಹೋಗಿದ್ದಾಗ ನಟ ಕಮಲ್ ಹಾಸನ್ ಅವರನ್ನು ಭೇಟಿ ಮಾಡಿ ಫೋಟೋ ತೆಗೆಸಿಕೊಂಡಿದ್ದನ್ನು ಹಂಚಿಕೊಂಡಿದ್ದಾರೆ.
|
ರೂಪಾ ಅವರು ಟ್ವೀಟ್ ಮಾಡಿದ್ದು ಹೀಗೆ
ನನ್ನ ಎಲ್ಲಾ ತಮಿಳು ನಾಡಿನ ಅಭಿಮಾನಿಗಳಿಗೆ, ವೈವಿಧ್ಯಮಯ ನಟ, ನಿರ್ದೇಶಕ ಕಮಲ್ ಹಾಸನ್ ರನ್ನು ನಾನು ಭೇಟಿಯಾದೆ ಎಂದು ಟೈಮ್ ಲಿಟ್ರೇಚರ್ ಫೆಸ್ಟಿವಲ್ ಹ್ಯಾಶ್ ಟ್ಯಾಗ್ ಹಾಕಿದ್ದಾರೆ. ಆದರೆ, ಸಾರ್ವಜನಿಕರಲ್ಲಿ ಅನೇಕರು ಈ ಭೇಟಿ ಹಿಂದಿನ ಉದ್ದೇಶ ಏನಿರಬಹುದು ಎಂಬುದರ ಬಗ್ಗೆ ಅನೇಕ ರೀತಿಗಳಲ್ಲಿ ಚರ್ಚಿಸತೊಡಗಿದ್ದಾರೆ. ರಾಜಕೀಯ ಅಥವಾ ಸಿನಿಮಾಕ್ಕೆ ರೂಪಾ ಅವರು ಎಂಟ್ರಿ ಕೊಡುತ್ತಾರಾ? ಎಂಬ ಪ್ರಶ್ನೆಗಳು ಕೇಳಿ ಬಂದಿವೆ.
|
ಮೇಡಂ ತುಂಬಾ ಚೆನ್ನಾಗಿ ಕಾಣುತ್ತೀರಿ
ಸುರಸುಂದರಾಂಗ ಕಮಲ್ ಹಾಸನ್ ಗಿಂತ ಚೆನ್ನಾಗಿ ಕಾಣುತ್ತಿದ್ದೀರಿ ಮೇಡಂ, ಬೋಲ್ಡ್ ಅಂಡ್ ಬ್ಯೂಟಿಫುಲ್ ಎಂಬ ವಾಕ್ಯಕ್ಕೆ ಅನ್ವರ್ಥವಾಗುವಂಥ ಲೇಡಿ ಪೊಲೀಸ್ ಆಫೀಸರ್ ನಾನು ನೋಡುತ್ತಿದ್ದೇನೆ, ನಿಮಗೆ ಶುಭವಾಗಲಿ ಎಂದು ಅಭಿಮಾನಿಯೊಬ್ಬರು ಹಾರೈಸಿದ್ದಾರೆ.
|
ಫೋಟೋ ಬಗ್ಗೆ ಸ್ಪಷ್ಟನೆ ಟ್ವೀಟ್ ಮಾಡಿದ ರೂಪಾ
ಕಮಲ್ ಹಾಸನ್ ಜತೆಗಿನ ಫೋಟೋ ಬಗ್ಗೆ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿರುವ ರೂಪಾ,
ನಾನು ಯಾರನ್ನಾದರೂ ಭೇಟಿ ಮಾಡಿದೆ, ಜತೆಗೆ ಫೋಟೋ ತೆಗೆಸಿಕೊಂಡೆ ಎಂದ ಮಾತ್ರಕ್ಕೆ ನಾನು ಅವರ ತತ್ತ್ವ ಸಿದ್ಧಾಂತಕ್ಕೆ ಮಾರು ಹೋಗಿದ್ದೇನೆ ಎಂದರ್ಥವಲ್ಲ. ನಾನು ನನ್ನ ವೃತ್ತಿಗೆ, ಸಿದ್ಧಾಂತಕ್ಕೆ ಬದ್ಧಳಾಗಿದ್ದೇನೆ, ಮಾನವ ಸಂಘಜೀವಿ, ಸಮಾಜದಲ್ಲಿ ಎಲ್ಲಾ ಸ್ತರದ ಎಲ್ಲಾ ಬಗೆಯ ಜನರನ್ನು ನಾವು ಭೇಟಿಯಾಗುತ್ತಿರುತ್ತೇವೆ ಆದರೆ, ನಮ್ಮತನ ನಾವು ಉಳಿಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
|
ಅನ್ ಫಾಲೋ ಮಾಡಿದ ವ್ಯಕ್ತಿ ಬದಲಾದ
ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡಿರುವ ಕಮಲ್ ಅವರನ್ನು ನೀವು ಭೇಟಿ ಮಾಡಿದ್ದಕ್ಕೆ ನಾನು ನಿಮ್ಮನ್ನು ಅನ್ ಫಾಲೋ ಮಾಡುತ್ತೇನೆ ಎಂದು ವ್ಯಕ್ತಿಯೊಬ್ಬ ಟ್ವೀಟ್ ಮಾಡಿದ್ದರು. ರೂಪಾ ಅವರ ಸ್ಪಷ್ಟನೆ ಟ್ವೀಟ್ ನೋಡಿದ ಮೇಲೆ ತನ್ನ ತಪ್ಪಿನ ಅರಿವಾಗಿ, ಕ್ಷಮೆ ಕೋರಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications