ಪಾದಚಾರಿಗಳನ್ನು ದೋಚುತ್ತಿದ್ದವರು ಸೆರೆ, ಥ್ಯಾಂಕ್ಸ್ ಎಂದ ಡಿ ರೂಪಾ
ಬೆಂಗಳೂರು, ಅ. 24: ಪಾದಚಾರಿಗಳನ್ನು ದೋಚುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಬೆಂಗಳೂರು ಪೊಲೀಸ್, ಚಿಕ್ಕಪೇಟೆ ಪೊಲೀಸ್, ಪಶ್ಚಿಮ ವಲಯ ಡಿಸಿಪಿ, ನಗರ ಪೊಲೀಸ್ ಆಯುಕ್ತರಿಗೆ ಕರ್ನಾಟಕದ ಗೃಹ ಕಾರ್ಯದರ್ಶಿ ಐಜಿಪಿ ಡಿ ರೂಪಾ ಅವರು ಧನ್ಯವಾದ ಅರ್ಪಿಸಿದ್ದಾರೆ.
Recommended Video
ಇತ್ತೀಚೆಗೆ ಚಿಕ್ಕಪೇಟೆ ಬಳಿ ಹಾಡಹಗಲೇ ಪಾದಚಾರಿಗಳಿಗೆ ಚಾಕು ತೋರಿಸಿ ಬೆದರಿಸಿ ದೋಚುತ್ತಿದ್ದ ದೃಶ್ಯದ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಇದಾದ ಮುರ್ನಾಲ್ಕು ದಿನಗಳಲ್ಲೇ ಸಿಸಿಟಿವಿ ದೃಶ್ಯದ ಆಧಾರ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ ತ್ವರಿತವಾಗಿ ಬಂಧಿಸಲಾಗಿದೆ.

ಚಿಕ್ಕಪೇಟೆ ಮೆಟ್ರೋ ರೈಲು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರನ್ನು ಅಟ್ಟಗಟ್ಟುವ ಇಬ್ಬರು ಚಾಕು ತೋರಿಸಿ ಹಣ ದೋಚುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕ್ರಮ ಜರುಗಿಸುವಂತೆ ರೂಪಾ ಅವರು ಸಂಬಂಧಪಟ್ಟ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಡಿಸಿಪಿ ಪಶ್ಚಿಮ ವಲಯ ಡಾ ಸಂಜೀವ್ ಪಾಟೀಲ್ ಅವರ ಸೂಚನೆಯಂತೆ ಚಿಕ್ಕಪೇಟೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ. ಇಬ್ಬರು ಒಂದೇ ರೀತಿ ಹುಡ್ ಮಾದರಿ ಡ್ರೆಸ್ ಧರಿಸಿ ಚಾಕು ಹಿಡಿದು ಬೆದರಿಸುವ ದೃಶ್ಯವನ್ನು ಅಲ್ಲಿ ಪಾರ್ಕ್ ಮಾಡಿದ್ದ ವಾಹನದಲ್ಲಿದವರು ವಿಡಿಯೋ ಮಾಡಿದ್ದರು.
Thanks .@cpblr sir, .@DCPWestBCP, .@Chickpetebcp for acting swiftly and nabbing the accused .@BlrCityPolice https://t.co/9p5Lcyamwn
— D Roopa IPS (@D_Roopa_IPS) October 23, 2020
ಬಂಧಿತನನ್ನು ಆಜಾದ್ ನಗರದ ನಿವಾಸಿ ಜಾನಿ ಎಂದು ಗುರುತಿಸಲಾಗಿದೆ. 22 ವರ್ಷ ವಯಸ್ಸಿನ ಜಾನಿ ಇತ್ತೀಚೆಗೆ ಮಾರ್ಚ್ ತಿಂಗಳಿನಲ್ಲಿ ಇದೇ ರೀತಿ ಕೃತ್ಯ ಎಸಗಿ ಬಂಧಿತನಾಗಿದ್ದ, ಜೈಲಿನಿಂದ ಬಿಡುಗಡೆಯಾದ ಬಳಿಕ ಕೂಡಾ ತನ್ನ ಹಳೆ ಚಾಳಿ ಮುಂದುವರೆಸಿದ್ದ ಎಂದು ತಿಳಿದು ಬಂದಿದೆ.
For kind attention and action .@BlrCityPolice , supposed to be near Chickpet metro station, today morning .@AddlCPWest .@Chickpetebcp pic.twitter.com/7kd5MfZTXz
— D Roopa IPS (@D_Roopa_IPS) October 20, 2020
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications