ಅ.1ರಂದೇ ಜಯಾ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು, ಸೆ.30: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿ ಎನಿಸಿ ಜೈಲು ಪಾಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಸೋಮವಾರಕ್ಕೆ ಮುಂದೂಡಲ್ಪಟ್ಟಿದ್ದ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ ನಾಳೆಯೇ ನಡೆಯಲಿದೆ. ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟಿನ ವಿಶೇಷ ನ್ಯಾಯಪೀಠ ಅ.1 ರಂದೇ ಕೈಗೆತ್ತಿಕೊಳ್ಳಲಿ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎಚ್ ವಘೇಲಾ ಸೂಚಿಸಿದ್ದಾರೆ.
ಎಐಎಡಿಎಂಕೆ ನಾಯಕಿ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ರಜಾ ಕಾಲದ ಹೈಕೋರ್ಟ್ ಪೀಠ, ಸರ್ಕಾರಿ ಅಭಿಯೋಜಕರಿಲ್ಲದ ಕಾರಣ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿತ್ತು. ಸರ್ಕಾರಿ ಅಭಿಯೋಜಕರ ನೇಮಕ ಸಂಬಂಧ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. [ಕರ್ನಾಟಕ ಸರ್ಕಾರಕ್ಕೆ ನೋಟಿಸ್]
ಪಿ.ಎನ್ ದೇಸಾಯಿಗೆ ಮನವಿ: ಆದರೆ ಸರ್ಕಾರಿ ಅಭಿಯೋಜಕರ ನೇಮಕಕ್ಕೂ ಅರ್ಜಿ ವಿಚಾರಣೆಗೂ ಸಂಬಂಧವಿಲ್ಲ ಎಂದು ಜಯಾ ಪರ ವಕೀಲರಾದ ರಾಮ್ಜೇಠ್ಮಲಾನಿ ವಾದಿಸಿದರು.
ಎಐಎಡಿಎಂಕೆ ಸಂಸದರು ರಾಮ್ ಜೇಠ್ಮಲಾನಿ ಅವರ ಸಲಹೆ ಮೇರೆಗೆ ಬುಧವಾರ(ಅಕ್ಟೋಬರ್.1)ವೇ ಅರ್ಜಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜ್ಯುಡಿಷಿಯಲ್ ಪಿ.ಎನ್ ದೇಸಾಯಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ವಘೇಲಾ ಅವರು ನಾಳೆ ಹೈಕೋರ್ಟ್ನ ವಿಶೇಷ ಪೀಠದಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.

ಜೇಠ್ಮಲಾನಿ ಅವರು ಸಿಆರ್ಪಿಸಿ ಸೆಕ್ಸೆನ್ 389 ಅನ್ನು ಉಲ್ಲೇಖಿಸಿ, ಆಕ್ಷೇಪಣೆಯನ್ನು ಪರಿಗಣಿಸದೆಯೇ ಜಾಮೀನು ನೀಡುವ ಅಧಿಕಾರ ಹೈಕೋರ್ಟ್ಗೆ ಇದೆ ಮತ್ತು ಸರ್ಕಾರಿ ಅಭಿಯೋಜಕರ ನೇಮಕಕ್ಕೂ ಮತ್ತು ಜಾಮೀನು ಅರ್ಜಿಯ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ.
ಸಿಆರ್ ಪಿಎಫ್ ಪ್ರಕಾರ ನನ್ನ ಕಕ್ಷಿದಾರರಿಗೆ 10 ವರ್ಷಕ್ಕಿಂತ ಕಡಿಮೆ ಶಿಕ್ಷೆ ಆಗಿದೆ. ಹೀಗಾಗಿ ಈ ಹಂತದಲ್ಲಿ ಪ್ರತಿವಾದಿ ಅಥವಾ ಸರ್ಕಾರದ ಅಭಿಯೋಜಕರ ನೇಮಕಾತಿ ಗೊಂದಲಕ್ಕಿಂತ ನನ್ನ ಕಕ್ಷಿದಾರರ ಅರ್ಜಿ ವಿಚಾರಣೆ ಆಲಿಸಬೇಕೆಂದು ಮನವಿ ಮಾಡಿದರು ಎಂದು ವಾದಿಸಿದ್ದು ಪ್ರಯೋಜನಕ್ಕೆ ಬಂದಿದೆ. [ವೆಬ್ ತಾಣದಿಂದ ಜಯಾ ಔಟ್]
ಈ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ನಿಂದ ನೇಮಕವಾಗಿರುವ ಜಿ ಭವಾನಿ ಸಿಂಗ್ ಅವರೇ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮುಂದುವರಿಯುವ ಕುರಿತು ಇನ್ನೂ ಆದೇಶ ಹೊರಬಂದಿಲ್ಲ. ಭವಾನಿ ಸಿಂಗ್ ಅವರು ತಾವು ಈ ಕೇಸಿನಲ್ಲಿ ಮುಂದುವರೆಯುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ಜಯಲಲಿತಾ ಅವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರು ದಂಡ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಭವಾನಿ ಸಿಂಗ್ ಅವರೇ ಮಾಧ್ಯಮಗಳ ಮುಂದಿಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications