Dana Effect: ಬೆಂಗಳೂರಿನಲ್ಲಿ ವರುಣಾರ್ಭಟ: ಪವರ್ ಕಟ್, ನೋ ಇಂಟರ್ನೆಟ್- ಮನೆಯಿಂದಲೇ ಕೆಲಸ ಮಾಡುವವರ ಕಥೆ ಹರೋಹರ..
ಬೆಂಗಳೂರು ಅಕ್ಟೋಬರ್ 22: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲ ತಿಂಗಳುಗಳ ಹಿಂದೆ ಕಂಡು ಕೇಳರಿಯದಷ್ಟು ಧಾರಾಕಾರ ಮಳೆ ಸುರಿಯುತ್ತಿದೆ. ವರುಣನ ಅರ್ಭಟಕ್ಕೆ ಉದ್ಯಾನ ನಗರಿ ತತ್ತರಿಸಿ ಹೋಗಿದೆ. ರಾಜಾಜಿನಗರ, ವಿಜಯನಗರ, ರಾಜರಾಜೇಶ್ವರಿ ನಗರದಲ್ಲಿ ಇಂದು ಮಧ್ಯಾಹ್ನದಿಂದಲೇ ತೀವ್ರ ಮಳೆಯಾಗಲಾರಂಭಿಸಿದೆ. ಅಲ್ಲದೆ ರಸ್ತೆಗಳಲ್ಲಿ ಅಡಿಗಳಷ್ಟು ನೀರು ನಿಂತಿದ್ದು ವಾಹನ ಸವಾರರು ಸುಸ್ತಾಗಿ ಹೋಗಿದ್ದಾರೆ.
ಹೌದು... ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು ಜನ ಹೈರಾಣಾಗಿ ಹೋಗಿದ್ದಾರೆ. ರಸ್ತೆಗಳು, ಫುಟ್ಪಾತ್ಗಳು ಹಾಗೂ ಮನೆಗಳು ನದಿಗಳಾಗಿ ಪರಿವರ್ತನೆಗೊಂಡಿವೆ. ಬೈಕ್, ಕಾರು, ಸೈಕಲ್ ಆಟಿಕೆಯಂತೆ ತೇಲಾಡುತ್ತಿವೆ.

ಕೆಲಸ ಕಾರ್ಯಗಳಿಗೆ ಮನೆಯಿಂದ ಹೊರ ಬಂದ ಜನ ಮಳೆರಾಯನ ರೌದ್ರನರ್ತನಕ್ಕೆ ನಲುಗಿ ಹೋಗಿದ್ದಾರೆ.
ಪವರ್ ಕಟ್, ನೋ ಇಂಟರ್ನೆಟ್
ಬಿಟ್ಟು ಬಿಡದೆ ನಿರಂತವಾಗಿ ಸುರಿಯುತ್ತಿರುವ ಮಳೆಗೆ ಜನ ನಡುಗುತ್ತಿದ್ದಾರೆ. ಅದ್ರಲ್ಲೂ ವಿಜಯನಗರ, ರಾಜಾಜಿನಗರ, ರಾಜರಾಜೇಶ್ವರಿ ನಗರದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು ಹಲವೆಡೆ ವಿದ್ಯುತ್ ಕಡಿತಗೊಂಡಿದೆ. ಕೆಲವೆಡೆ ಇಂಟರ್ನೆಟ್ ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಮನೆಯಿಂದಲೇ ಕೆಲಸ ಮಾಡುವವರ ಕಥೆ ಹೇಳತೀರದ್ದಾಗಿದೆ.
ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು ಜೋರು ಮಳೆಯಿಂದ ಗಾಳಿ ಕೂಡ ಬೀಸುತ್ತಿದೆ. ಗುಡುಗು ಮಿಂಚಿನೊಂದಿಗೆ ಧಾರಾಕಾರ ಮಳೆಯಾಗುತ್ತಿದ್ದು, ಕಿಟಕಿ, ಬಾಗಿಲು ಸೇರಿದಂತೆ ಕೆಲ ಮನೆಗಳಲ್ಲಿ ಗೋಡೆಗಳಿಂದಲೂ ನೀರು ಮನೆ ಪ್ರವೇಶಿಸುತ್ತಿದೆ. ಹೀಗಾಗಿ ಜನ ಮನೆಯಲ್ಲಿದ್ದರೂ ನಡುಗುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮನೆಯಿಂದಲೇ ಕೆಲಸ ಮಾಡುವವರ ಕಥೆ ಹರೋಹರ..
ಅಕ್ಟೋಬರ್ ತಿಂಗಳ ಆರಂಭದಿಂದಲೂ ಬೆಂಗಳೂರಿನಲ್ಲಿ ಮಳೆ ತೀವ್ರಗೊಂಡಿದೆ. ಇದರಿಂದಾಗಿ ಹಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ತಿಳಿಸಿವೆ. ಆದರೆ ತೀವ್ರ ಮಳೆಗೆ ಬಹುತೇಕ ಪ್ರದೇಶಗಳಲ್ಲಿ ನಿರಂತರ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಇಂಟರ್ನೆಟ್ ಸಹ ಸರಿಯಾಗಿ ವರ್ಕ್ ಆಗುತ್ತಿಲ್ಲ. ಹೀಗಾಗಿ ಉದ್ಯೋಗಿಗಳು ಅತ್ತ ಕಚೇರಿಗಳಿಗೂ ತೆರಳಲಾಗದೇ, ಮನೆಯಲ್ಲೂ ಕೆಲಸ ಮಾಡಲಾಗದೇ ಅತಂತ್ರರಾಗಿದ್ದಾರೆ.
ಚಳಿ, ಮೋಡ, ಮಳೆ: ಜನರಲ್ಲಿ ನಡುಕ!
ಇನ್ನೂ ನಿರಂತರ ಮಳೆಯಿಂದಾಗಿ ನಗರದ ವಾತಾವರಣವೇ ಬದಲಾಗಿ ಹೋಗಿದೆ. ಜಿಟಿ ಜಿಟಿ ಮಳೆಗೆ ತಂಪಾದ ವಾತಾವರಣ ಆವರಿಸಿದ್ದು ಜಾಕೆಟ್, ರೇನ್ ಕೋರ್ಟ್ ಇದ್ಯಾವುದರಿಂದಲೂ ಜನ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲಾಗದಷ್ಟು ವಾತಾವರಣ ತಂಪಾಗಿದೆ. ಆಗಸದಲ್ಲಿ ಕಪ್ಪು ಕಾರ್ಮೋಡ ಆವರಿಸಿದ್ದು ಮಧ್ಯಾಹ್ನದ ಹೊತ್ತಲ್ಲೇ ಸಂಜೆಯಾದಂತೆ ಬಾಸವಾಗುತ್ತಿದೆ.
ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು
ಇನ್ನೂ ನಿತ್ಯ ಸುರಿಯುತ್ತಿರುವ ಮಳೆ ಉದ್ಯೋಗಿಗಳಿಗೆ ಮಾತ್ರವಲ್ಲದೆ ಮಕ್ಕಳ ಬಗ್ಗೆಯೂ ಚಿಂತೆಗೀಡು ಮಾಡಿದೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟಾಕುತ್ತಿದ್ದಾರೆ. ಮಳೆಯಿಂದಾಗಿ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರಿಗೆ ಚಿಂತೆ ಕಾಡತೊಡಗಿದೆ. ಹೀಗಾಗಿ ಕೆಲ ದಿನಗಳ ಮಟ್ಟಿಗೆ ಶಾಲೆಗಳಿಗೆ ರಜೆ ನೀಡಬೇಕು ಎಂದು ಪೋಷಕರು ಮನವಿ ಮಾಡುತ್ತಿದ್ದಾರೆ.
ಡಾನಾ ಚಂಡಮಾರುತದ ಎಫೆಕ್ಟ್
ಡಾನಾ ಚಂಡಮಾರುತದ ಪರಿಣಾಮ ರಾಜ್ಯದೆಲ್ಲೆಡೆ ಜೋರು ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಕ್ಟೋಬರ್ 24ರವರೆಗೆ ಒಡಿಶಾ ಮತ್ತು ಪಶ್ಚಿಮ ಬಂಗಾಳಾದ ಕರಾವಳಿ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications