Darshan Bird Case: ಕಾನೂನು ಬಾಹಿರವಾಗಿ ವಿಶಿಷ್ಟ ಪಕ್ಷಿ ಸಾಕಿದ್ದ ದರ್ಶನ್: ಹಳೆ ಕೇಸ್ ಓಪನ್!
ಬೆಂಗಳೂರು ಜೂನ್ 18: ಕಾನೂನು ಬಾಹಿರವಾಗಿ ವಿಶಿಷ್ಟ ಪಕ್ಷಿ ಸಾಕಿದ್ದ ಆರೋಪದ ಮೇಲೆ ನಟ ದರ್ಶನ್ ವಿರುದ್ಧ ಹಳೆ ಕೇಸ್ ಒಂದು ಓಪನ್ ಆಗಿದೆ. ಈ ಪ್ರಕರಣದಲ್ಲಿ ಎ1 ಆರೋಪಿ ವಿಜಯಲಕ್ಷ್ಮಿ, ಎ2 ಆರೋಪಿ ನಾಗರಾಜು ಹಾಗೂ ಎ3 ಆರೋಪಿ ದರ್ಶನ್ ಆಗಿದ್ದಾರೆ.
ಟಿ ನರಸಿಪುರದ ಫಾರ್ಮ್ಹೌಸ್ನಲ್ಲಿ ನಟ ದರ್ಶನ್ ಹಲವಾರು ಪ್ರಬೇಧದ ಪಕ್ಷಗಳನ್ನು ಸಾಕಿದ್ದಾರೆ. ಅದರಲ್ಲಿ ಬಾರ್ ಹೆಡೆಡ್ ಗೂಸ್ ಪಕ್ಷಿ ಕೂಡ ಒಂದು. ಇದು ವಿಶಿಷ್ಟ ಪ್ರಭೇದದ ಪಕ್ಷಿಯಾಗಿದ್ದು ಚಳಿಗಾಲದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಕಾನೂನು ಪ್ರಕಾರ ಈ ಪಕ್ಷಿಯನ್ನು ಸಾಕುವಂತಿಲ್ಲ.

ಆದರೆ ದರ್ಶನ್ ತಮ್ಮ ಫಾರ್ಮ್ಹೌಸ್ನಲ್ಲಿ ಈ ಪಕ್ಷಿಯನ್ನು ಸಾಕಿದ್ದರು. ಈ ಬಗ್ಗೆ ಅರಣ್ಯ ಇಲಾಖೆಯವರಿಗೆ ಮಾಹಿತಿ ತಿಳಿದು ಕೂಡ ದರ್ಶನ್ ವಿಚಾರಣೆ ನಡೆಸದೆ ಸುಮ್ಮನಾಗಿದ್ದರು. ಕೇವಲ ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ಅವರನ್ನು ವಿಚಾರಣೆ ನಡೆಸಿ ಕೈತೊಳೆದುಕೊಂಡಿದ್ದರು.
ಸದ್ಯ ಈ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಅರಣ್ಯ ಇಲಾಖೆ ದರ್ಶನ್ ವಿಚಾರಣೆ ನಡೆಸದೆ ಸುಮ್ಮನಾಗಿದ್ದು ಯಾಕೆ ಎನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಕೇಸ್ ವಿಚಾರದಲ್ಲಿ ಚಾರ್ಜ್ಶೀಟ್ ತಯಾರಿಸಲು ಪೊಲೀಸರು ಮುಂದಾಗಿದ್ದಾರೆ.
ಈ ಹಿಂದೆ ಹಲವಾರು ಪ್ರಕರಣದಿಂದ ಪಾರಾಗಿದ್ದ ದರ್ಶನ್ಗೆ ಸದ್ಯ ಜೈಲು ಪಾಲಾಗುವ ಸಂಕಷ್ಟ ಶುರುವಾಗಿದೆ. ಅದ್ಯಾಕೋ ಏನೋ ದರ್ಶನ್ ಸಮಯವೇ ಸರಿಯಾಗಿಲ್ಲ. ಒಂದಾದ ಮೇಲೊಂದರಂತೆ ಹಳೆ ಪ್ರಕರಣಗಳು ತಲೆ ಎತ್ತಿಕೊಳ್ಳುತ್ತಿವೆ. ಹೀಗಾಗಿ ದರ್ಶನ್ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನುವ ಮಾತುಗಳು ಕೇಳಿ ಬಂದಿವೆ. ಒಂದು ವೇಳೆ ಈ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಸಾಬೀತಾದರೆ ದರ್ಶನ್ ಜೈಲು ವಾಸ ಪಕ್ಕಾ.

ಏನಿದು ರೇಣುಕಾಸ್ವಾಮಿ ಕೊಲೆ ಪ್ರಕರಣ?
ಇಡೀ ಸಿನಿಮಾ ಇಂಡಸ್ಟ್ರಿಯನ್ನು ಬೆಚ್ಚಿ ಬೀಳಿಸಿದ ಪ್ರಕರಣ ರೇಣುಕಾಸ್ವಾಮಿ ಕೊಲೆ ಕೇಸ್. ಜೂನ್ 8ರಂದು ರೇಣುಕಾಸ್ವಾಮಿ ಕೊಲೆಯಾದ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರನ್ನು ಬಂಧಿಸಲಾಗಿದೆ. ಈ ಕೊಲೆಯ ಎ2 ಆರೋಪಿ ದರ್ಶನ್ ಆಗಿದ್ದರೆ ಎ1 ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಆಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಪ್ರೇಯಸಿಗೆ ತನ್ನ ಖಾಸಗಿ ಫೋಟೋ ಕಳುಹಿಸಿದ್ದನು. ಈ ವಿಚಾರವಾಗಿ ಕೋಪಗೊಂಡ ಪವಿತ್ರಾ ನಟ ದರ್ಶನ್ಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ. ಮಾಹಿತಿ ಅಷ್ಟೇ ಅಲ್ಲದೆ ದರ್ಶನ್ ಸ್ಟಾರ್ಗಿರಿಯನ್ನು ಪ್ರಶ್ನೆ ಮಾಡಿದ್ದಳು. ಇದರಿಂದ ಕೋಪಕೊಂಡಿದ್ದ ದರ್ಶನ್ ತನ್ನ ಗ್ಯಾಂಗ್ಗೆ ಸೂಚಿಸಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿದ್ದರು. ಬಳಿಕ ಆತನನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್ಡಿಗೆ ಕರೆತಂದು ಮನಬಂದಂತೆ ಹಲ್ಲೆ ಮಾಡಿದ್ದರಿಂದ ರೇಣುಕಾಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರವಿಚಿತ್ರವಾಗಿ ಹಿಂಸಿಸಿ ರೇಣುಕಾಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಕೊಂದಿದೆ ಎನ್ನುವ ಆರೋಪವಿದೆ. ಪ್ರಕರಣದಲ್ಲಿ 17 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ವಿಚಾರಣೆ ಮಾಡಿದಷ್ಟು ಹಲವಾರು ವಿಷಯಗಳು ಬಹಿರಂಗವಾಗುತ್ತಿವೆ. ಅಲ್ಲದೆ ದರ್ಶನ್ ಈ ಹಿಂದೆ ಮೆರೆದಿದ್ದ ಕೃತ್ಯಗಳೆಲ್ಲವೂ ಬಯಲಾಗುತ್ತಿವೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications