Get Updates
Get notified of breaking news, exclusive insights, and must-see stories!

ದರ್ಶನ್ ಪ್ರಕರಣ: ಕೊಲೆ ಕೇಸ್ ಆರೋಪಿಗಳು ಯಾರು-ಯಾರು?

ಬೆಂಗಳೂರು, ಜೂನ್ 11; ಕನ್ನಡ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಕೊಲೆ ಪ್ರಕರಣವೊಂದರ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಮೂಲದ ಯುವಕನ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿ 10 ಆರೋಪಿಗಳ ವಿಚಾರಣೆ ನಡೆಯುತ್ತಿದೆ.

ಚಿತ್ರದುರ್ಗದ ನಗರದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಮಂಗಳವಾರ ಬೆಳಗ್ಗೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಟ ದರ್ಶನ್, ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Darshan Detained List Of Murder Case Accused

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಜೂನ್‌ 9ರಂದು ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿಚಾರಣೆ ಬೆಂಗಳೂರು ನಗರದ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ.

ಆರೋಪಿಗಳು ಯಾರು?: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ದರ್ಶನ್ ಪ್ರೇಯಸಿ ಪವಿತ್ರಾ ಗೌಡ, ಪಟ್ಟಣಗೆರೆ ವಿನಯ್​, ಕಿರಣ್, ಮಧು, ಲಕ್ಷ್ಮಣ್​, ಆನಂದ್​​, ರಾಘವೇಂದ್ರ ಸೇರಿ 10 ಜನರನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಚಿತ್ರದುರ್ಗದಲ್ಲಿ ದರ್ಶನ್ ಅಭಿಮಾನಿಗಳ ಸಂಘ ಕಟ್ಟಿಕೊಂಡಿರುವ ರಾಘವೇಂದ್ರ ಮೂಲಕ ಜೂನ್‌ 1ರ ಶನಿವಾರ ನಟ ದರ್ಶನ್ ರೇಣುಕಾಸ್ವಾಮಿಯನ್ನು ಬೆಂಗಳೂರು ನಗರಕ್ಕೆ ಕರೆಸಿದ್ದಾರೆ. ಕಾಮಾಕ್ಷಿಪಾಳ್ಯದ ಶೆಡ್‌ವೊಂದರಲ್ಲಿ ಕೂಡಿ ಹಾಕಿ, ಹಲ್ಲೆ ಮಾಡಿ ಹತ್ಯೆ ಮಾಡಿ, ಬಳಿಕ ಶವವನ್ನು ಮೋರಿಗೆ ಎಸೆಯಲಾಗಿದೆ ಎಂಬುದು ಆರೋಪ.

ಕಾಮಾಕ್ಷಿಪಾಳ್ಯದಲ್ಲಿರುವ ಪಟ್ಟಣಗೆರೆ ವಿನಯ್‌ಗೆ ಸೇರಿದ ಶೆಡ್‌ನಲ್ಲಿ ರೇಣುಕಾಸ್ವಾಮಿ ಕೂಡಿ ಹಾಕಿ ಹಲ್ಲೆ ಮಾಡಲಾಗಿದೆ. ಜೂನ್‌ 8ರಂದು ಹತ್ಯೆ ನಡೆದಿದ್ದು, ಸುಮನಹಳ್ಳಿ ಸಮೀಪದ ಅನುಗ್ರಹ ಅಪಾರ್ಟ್‌ಮೆಂಟ್ ಬಳಿಯ ಮೋರಿಯಲ್ಲಿ ಜೂನ್ 9ರಂದು ಶವ ಪತ್ತೆಯಾಗಿದೆ.

ಅಪಾರ್ಟ್‌ಮೆಂಟ್ ಭದ್ರತಾ ಸಿಬ್ಬಂದಿ ರಾಮ್‌ ದೋರ್‌ ಜೀ ಮಾಹಿತಿ ನೀಡಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ರೇಣುಕಾಸ್ವಾಮಿ ಶವವನ್ನು ವಶಕ್ಕೆ ಪಡೆದು ಅಪರಿಚಿತ ಶವ ಪತ್ತೆ ಎಂದು ದೂರು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದರು.

ಜೂನ್ 10ರಂದು ಕೆಲವು ಆರೋಪಿಗಳ ವಿಚಾರಣೆ ವೇಳೆ ಕೇಸ್‌ಗೆ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ನಟ ದರ್ಶನ್ ಹೆಸರು ಕೇಳಿ ಬಂದಿದ್ದು, ಕಾಮಾಕ್ಷಿಪಾಳ್ಯ ಪೊಲೀಸರು ಮಂಗಳವಾರ ಬೆಳಗ್ಗೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಜಿಮ್ ಮಾಡುತ್ತಿದ್ದ ದರ್ಶನ್‌ರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆ ತಂದಿದ್ದಾರೆ.

ಎಲ್ಲಾ ಆರೋಪಿಗಳ ವಿಚಾರಣೆ ಬೆಂಗಳೂರು ನಗರದ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ. ನಟ ದರ್ಶನ್‌ರನ್ನು ಸಹ ಮೈಸೂರಿನಿಂದ ಕರೆತಂದ ಪೊಲೀಸರು ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ. ದರ್ಶನ್ ಇಬ್ಬರು ಬೌನ್ಸರ್‌ಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಆದರೆ ಹಲ್ಲೆ ನಡೆದಾಗ ದರ್ಶನ್, ಪವಿತ್ರಾ ಗೌಡ ಅಲ್ಲಿದ್ದರೆ? ಎಂಬ ಬಗ್ಗೆ ತನಿಖೆ ಮುಂದುವರೆದಿದೆ.

ರೇಣುಕಾಸ್ವಾಮಿ ಕೊಲೆಯಾಗಿರುವ ಕುರಿತು ಪೊಲೀಸರು ಅವರ ಕುಟುಂಬದವರಿಗೆ ಜೂನ್ 10ರಂದು ಮಾಹಿತಿ ನೀಡಿದ್ದರು. ಮಂಗಳವಾರ ಕುಟುಂಬದವರು ಬೆಂಗಳೂರಿಗೆ ಆಗಮಿಸಿದ್ದಾರೆ. ಪೊಲೀಸರು ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಬೆಂಗಳೂರು ನಗರ ಪೊಲೀಸರು ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಮುಂದೆ ದರ್ಶನ್ ಅಭಿಮಾನಿಗಳು ಜಮಾವಣೆಗೊಳ್ಳುತ್ತಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಬಂದೋಬಸ್ತ್‌ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+