ದರ್ಶನ್ ಮನೆ ತೆರವು ಖಚಿತ: ಜಿಲ್ಲಾಧಿಕಾರಿ ಶಂಕರ್ ಸ್ಪಷ್ಟನೆ
ಬೆಂಗಳೂರು, ಅಕ್ಟೋಬರ್, 19: ನಟ ದರ್ಶನ್ ಅವರ ಮನೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಆಸ್ಪತ್ರೆಯನ್ನು ತೆರವುಗೊಳಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿ.ಶಂಕರ್ ಅವರು ದರ್ಶನ್ ಅವರ ಮನೆ, ಶಿವಶಂಕರಪ್ಪ ಅವರ ಆಸ್ಪತ್ರೆ ಸೆರಿದಂತೆ 69 ಆಸ್ತಿಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಆಸ್ತಿಗಳು ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವುದು ದೃಢಪಟ್ಟಿದ್ದು, ಶನಿವಾರ (ಅ.22)ದಂದು ಜಿಲ್ಲಾಡಳಿತದ ವತಿಯಿಂದ ತೆರವುಗೊಳಿಸಿ ಪಾಲಿಕೆ ಆಸ್ತಿ ಎಂದು ಫಲಕಗಳನ್ನು ಹಾಕಲಾಗುವುದು ಎಂದು ತಿಳಿಸಿದ್ದರು. [ರಾಜಕಾಲುವೆ ಒತ್ತುವರಿ ವಿವರ ಈಗ ವೆಬ್ಸೈ ಟ್ನ ನಲ್ಲಿ ಲಭ್ಯ]
ನಟ ದರ್ಶನ್ ಅವರು ಒಟ್ಟು 2,100 ಚ. ಅಡಿ ರಾಜ ಕಾಲುವೆ ಪ್ರದೇಶ ಒತ್ತುವರಿ ಮಾಡಿ ಮನೆ ನಿರ್ಮಿಸಿರುವುದು ಬಿಬಿಎಂಪಿ ಪರಿಶೀಲನೆಯಲ್ಲಿ ದೃಢಪಟ್ಟಿತ್ತು.

ಶಾಸಕ ಶಾಮನೂರು ಶಿವಶಂಕರಪ್ಪ ಅವರ ಎಸ್.ಎಸ್. ಆಸ್ಪತ್ರೆಯು ಸಹ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವುದು ದೃಢಪಟ್ಟಿದೆ. ಒಟ್ಟು 22ಗುಂಟೆ ಒತ್ತುವರಿ ಸ್ಥಳ ಗುರುತಿಸಲಾಗಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಅವರು ಈ ಹಿಂದೆ ಒನ್ ಇಂಡಿಯಾಗೆ ತಿಳಿಸಿದ್ದರು.












Click it and Unblock the Notifications